ಹೈ.ಕ. ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ರೂಪಿಸಲು ಕ್ರಮ
ಕಲಬುರಗಿ : ಹೈದ್ರಾಬಾದ ಕರ್ನಾಟಕ ಪ್ರದೇಶದ ಎಲ್ಲ ತಾಲೂಕುಗಳಲ್ಲಿ ಕ್ಷೇತ್ರವಾರು ಅವಶ್ಯಕವಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಸಮಗ್ರ ಯೋಜನಾ ವರದಿ ರೂಪಿಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.
ಅವರು ಮಂಗಳವಾರ ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿüವೃದ್ಧಿ ಮಂಡಳಿ ಕಚೇರಿಯಲ್ಲಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಮುಂದಿನ 10 ವರ್ಷಗಳಲ್ಲಿ ಆಯಾ ತಾಲೂಕುಗಳಿಗೆ ಅವಶ್ಯಕವಿರುವಂತಹ ಶಿಕ್ಷಣ, ಆರೋಗ್ಯ, ವಸತಿ, ಕುಡಿಯುವ ನೀರುಗಳಂತಹ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೈಗೊಳ್ಳಲು ಮಂಡಳಿಯಿಂದ ಮತ್ತು ರಾಜ್ಯದ ವಲಯದಿಂದ ಲಭ್ಯವಾಗುವ ಅನುದಾನದ ಅನುಗುಣವಾಗಿ ಸಮಗ್ರ ಯೋಜನಾ ವರದಿ ರೂಪಿಸಲಾಗುವುದು. ಸಮಗ್ರ ಯೋಜನಾ ವರದಿ ರೂಪಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಹೇಳಿದರು.
ಯೋಜನಾ ವರದಿಗೆ ಅನುಗುಣವಾಗಿ ಹಮ್ಮಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು. ಹೈ.ಕ. ಭಾಗದ ಕೆಲವು ಕಡೆಗಳಲ್ಲಿ ಕುಡಿಯುವ ನೀರಿನ ತೊಂದರೆಯಿದ್ದರೆ ಕೆಲವು ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೊರತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೈಗೊಳ್ಳಲು ಯೋಜನೆ ಇದ್ದರೆ ಅನುಕೂಲವಾಗುವುದು. ಇದಕ್ಕಾಗಿ ಎಲ್ಲರೊಂದಿಗೆ ಚರ್ಚಿಸಲಾಗುವುದು. ಮಾನವ ಅಭಿವೃದ್ಧಿ ಕ್ಷೇತ್ರಕ್ಕೂ ಸಹ ಆದ್ಯತೆ ನೀಡಲಾಗುವುದು ಎಂದರು.
ಹೈ.ಕ. ಭಾಗದ ಅಭಿವೃದ್ಧಿಗಾಗಿ ಕೈಗೊಂಡಿರುವ 371 ಕಲಂ ತಿದ್ದುಪಡಿಗೂ ಮುಂಚೆ ಮಂಡಳಿಗೆ ಪ್ರತಿ ವರ್ಷ ಕೇವಲ 30 ಕೋಟಿ ರೂ. ಅನುದಾನ ಲಭ್ಯವಾಗುತ್ತಿತ್ತು. ಆದರೆ ಈಗ ಪ್ರತಿವರ್ಷ 1500 ಕೋಟಿ ರೂ. ಅನುದಾನ ಲಭ್ಯವಾಗುತ್ತಿರುವುದರಿಂದ ಇದಕ್ಕನುಗುಣವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ನಿರ್ದಿಷ್ಟ ಅವಧಿಯಲ್ಲಿ ಯೋಜನೆಗಳು ಮುಕ್ತಾಯಗೊಳ್ಳುವ ಹಾಗೆ ನೋಡಿಕೊಂಡಲ್ಲಿ ಅಭಿವೃದ್ಧಿ ಶೀಘ್ರಗತಿಯಲ್ಲಿ ನಡೆಯಲಿದೆ. ಮಂಡಳಿಯಲ್ಲಿ ಸಲಹೆ ನೀಡುವವರ ತಂಡವಿದ್ದು, ಅವರ ಸಹಾಯ ಪಡೆಯಲಾಗುವುದು ಎಂದರು.
ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚನೆಯಾದ ನಂತರ ರಾಜ್ಯ ಸರ್ಕಾರವು ಮಂಡಳಿಗೆ 5 ವರ್ಷಗಳಲ್ಲಿ 6000 ಕೋಟಿ ರೂ.ಗಳನ್ನು ನೀಡಿದೆ. ಸರ್ಕಾರದಲ್ಲಾಗಲಿ ಅಥವಾ ಮಂಡಳಿಯಲ್ಲಾಗಲಿ ಹಣದ ಕೊರತೆ ಇರುವುದಿಲ್ಲ. ಆದರೆ ಯೋಜನಾ ಬದ್ಧವಾಗಿ ಕೆಲಸ ಮಾಡಬೇಕಾಗಿದೆ. ಶೀಘ್ರ ಗತಿಯಲ್ಲಿ ಕಾಮಗಾರಿಗಳನ್ನು ಮುಕ್ತಾಯಗೊಳಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಸಚಿವರಾದ ರಾಯರಡ್ಡಿ ಅವರು ಐದು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿ ಅಪಾರ ಅನುಭವ ಹೊಂದಿದ್ದು, ಮುಂದಾಲೋಚನೆಯಿಂದ ಕೆಲಸ ಮಾಡುವವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಬಿವೃದ್ಧಿ ಮಂಡಳಿಗೆ ಒಳ್ಳೆಯ ದಿಕ್ಕನ್ನು ನೀಡಲಿದ್ದಾರೆ. ಎರಡು ವರ್ಷಗಳ ಅವಧಿಗಾಗಿ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದ್ದು, ಈ ಅವಧಿಯಲ್ಲಿ ಪ್ರಮಾಣಿಕತೆಯಿಂದ ಅಭಿವೃದ್ಧಿ ಮಾಡಲಾಗಿದೆ ಎಂದರು.
ಸಭೆಯಲ್ಲಿ ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ, ಶಾಸಕ ಬಿ.ಆರ್. ಪಾಟೀಲ, ಮುಖಂಡರಾದ ಅಲ್ಲಮಪ್ರಭು ಪಾಟೀಲ, ಮಂಡಳಿ ಕಾರ್ಯದರ್ಶಿ ಹರ್ಷ ಗುಪ್ತಾ, ಉಪನಿರ್ದೇಶಕ ಬಸವರಾಜ ಮತ್ತಿತರರು ಪಾಲ್ಗೊಂಡಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು