Tel: 7676775624 | Mail: info@yellowandred.in

Language: EN KAN

    Follow us :


ಎಲೆಕ್ಟ್ರಾನಿಕ್ ಮತಯಂತ್ರಗಳು ಮತದಾನಕ್ಕೆ ವಿಶ್ವಾಸಾರ್ಹ

Posted date: 13 Mar, 2018

Powered by:     Yellow and Red

ಎಲೆಕ್ಟ್ರಾನಿಕ್ ಮತಯಂತ್ರಗಳು ಮತದಾನಕ್ಕೆ ವಿಶ್ವಾಸಾರ್ಹ

ಕಲಬುರಗಿ : ಕಲಬುರಗಿ ಜಿಲ್ಲೆಗೆ ಸರಬರಾಜು ಮಾಡಿರುವ ಎಲ್ಲ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸಲಾಗಿದ್ದು, ಮತದಾನಕ್ಕೆ ವಿಶ್ವಾಸಾರ್ಹವಾಗಿವೆ. ಮತದಾನ ಯಂತ್ರದಲ್ಲಿ ಯಾವುದೇ ತೊಂದರೆಯಿದ್ದಲ್ಲಿ ಅಂತವುಗಳನ್ನು ಬದಲಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮತದಾರರ ಯಾದಿ ಮತ್ತು ಮತಯಂತ್ರ ಪರಿಶೀಲನಾಧಿಕಾರಿ ಸಂಜೀವಕುಮಾರ ಪ್ರಸಾದ ತಿಳಿಸಿದರು. 
ಅವರು ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿಗಳÀ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, 1ನೇ ಜನವರಿ 2018ಕ್ಕೆ ಅನ್ವಯವಾಗುವಂತೆ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ಮುಖಂಡರು ಪಟ್ಟಿಯನ್ನು ಪಡೆದುಕೊಳ್ಳಬೇಕೆಂದರು.
ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, ಕಲಬುರಗಿ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ಸಾವಿರಾರು ಸಂಖ್ಯೆಯಲ್ಲಿ ಎಲೆಕ್ಟ್ರಾನಿಕ್ಸ್ ಮತಯಂತ್ರಗಳು ಬಂದಿವೆ. ಇವುಗಳಲ್ಲಿ ಯಾವುದನ್ನಾದರೂ ಗುರುತಿಸಿ ರಾಜಕೀಯ ಪಕ್ಷದವರು ಮತದಾನ ಮಾಡುವ ಮೂಲಕ ಪರಿಶೀಲಿಸಬಹುದಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾನ ಯಾವ ಅಭ್ಯರ್ಥಿಗೆ ಮಾಡಲಾಗಿದೆ ಎಂಬುದನ್ನು ಖಾತರಿಪಡಿಸಿಕೊಳ್ಳಲು ನೂತನವಾಗಿ ವಿ.ವಿ. ಪ್ಯಾಟ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ರಾಜಕೀಯ ಪಕ್ಷದವರು ಯಾವುದೇ ಅನುಮಾನ ಪಡುವ ಅವಶ್ಯಕತೆಯಿಲ್ಲ ಎಂದರು.
ಮತದಾರರಲ್ಲಿ ಕಡ್ಡಾಯ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಶಾಲಾ ಹಂತಗಳಲ್ಲಿಯೇ ಚುನಾವಣಾ ಸಾಕ್ಷರತಾ ಕ್ಲಬ್‍ಗಳನ್ನು ರಚಿಸಿ ಶಾಲಾ ಮಕ್ಕಳಿಗೆ ಕಡ್ಡಾಯ ಹಾಗೂ ನೈತಿಕ ಮತದಾನದ ಅರಿವು ಮೂಡಿಸಲಾಗುತ್ತಿದೆ. ಗ್ರಾಮ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದ ಅವರು ಪ್ರತಿ ಮತಗಟ್ಟೆಗಳ ವಿವರ ಹಾಗೂ ನಕ್ಷೆಗಳನ್ನು ಗಣಕೀಕೃತಗೊಳಿಸಿ ವೆಬ್‍ಸೈಟ್‍ನಲ್ಲಿ ಅಳವಡಿಸಲಾಗುತ್ತಿದೆ. ರಾಜಕೀಯ ಪಕ್ಷದವರು ಮತಗಟ್ಟೆಗಳ ವ್ಯಾಪ್ತಿಯನ್ನು ವೆಬ್‍ಸ್ಶೆಟ್‍ಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದರು. 
ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮಾತನಾಡಿ, ಜಿಲ್ಲೆಗೆ ಸರಬರಾಜು ಮಾಡಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ ಮೇಲೆ ಪಕ್ಷಗಳಿಗೆ ವಿಶ್ವಾಸವಿಲ್ಲ. ಹಿಂದಿನ ಚುನಾವಣೆಯಲ್ಲಿ ಮತಯಂತ್ರಗಳು ವಿಶ್ವಾಸ ಕಳೆದುಕೊಂಡಿವೆ. ಕಾರಣ ಚುನಾವಣಾ ಆಯೋಗವು ಬ್ಯಾಲೆಟ್ ಪೇಪರ್ ಮುಖಾಂತರ ಮತದಾನ ಪ್ರಕ್ರಿಯೆ ನಡೆಸಬೇಕು ಅಥವಾ ಎಲೆಕ್ಟ್ರಾನಿಕ್ ಮತಯಂತ್ರದ ಮತ ಎಣಿಕೆಯೊಂದಿಗೆ ವಿವಿ ಪ್ಯಾಟ್‍ನಲ್ಲಿರುವ ಚೀಟಿಗಳನ್ನು ಎಣಿಕೆ ಮಾಡಬೇಕೆಂದು ಸಲಹೆ ನೀಡಿದರು. ಇದಕ್ಕೆ ಚುನಾವಣಾ ಆಯೋಗದ ಪರಿಶೀಲನಾಧಿಕಾರಿ ಸಂಜೀವಕುಮಾರ ಪ್ರಸಾದ ಅವರು ಸ್ಪಂದಿಸಿ ತಮ್ಮ ಸಲಹೆಗಳನ್ನು ನೋಂದಾಯಿಸಿಕೊಳ್ಳಲಾಗಿದ್ದು, ಇದನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು ಎಂದರು.
ಜಿಲ್ಲೆಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಒಟ್ಟು 2267 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ 1061123 ಪುರುಷ, 1032682 ಮಹಿಳಾ ಹಾಗೂ 324 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2094129 ಮತದಾರರಿದ್ದಾರೆ. ಮತದಾರರ ಪಟ್ಟಿಯಲ್ಲಿ ಶೇ. 99.21 ರಷ್ಟು ಭಾವಚಿತ್ರಗಳನ್ನು ಹೊಂದಿರುವ ಮತದಾರರು ಇದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರು ಮಾಹಿತಿ ನೀಡಿದರು. 
ಸಭೆಯಲ್ಲಿ ಭಾರತ ಚುನಾವಣಾ ಆಯೋಗದ ಮತದಾರರ ಯಾದಿ ಮತ್ತು ಮತಯಂತ್ರ ಪರಿಶೀಲನಾಧಿಕಾರಿ ಅಶೋಕಕುಮಾರ, ಸೇಡಂ ಸಹಾಯಕ ಆಯುಕ್ತ ಬಿ. ಸುಶೀಲಾ, ಮಹಾನಗರ ಪಾಲಿಕೆ ಆಯುಕ್ತ ರಂಘುನಂದನಮೂರ್ತಿ, ಎಲ್ಲ ತಾಲೂಕುಗಳ ತಹಶೀಲ್ದಾರರು, ಚುನಾವಣಾ ತಹಶೀಲ್ದಾರ ಸಂಜುಕುಮಾರ, ಬಿ.ಎಲ್.ಓ.ಗಳು ಪಾಲ್ಗೊಂಡಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑