Tel: 7676775624 | Mail: info@yellowandred.in

Language: EN KAN

    Follow us :


ಚುನಾವಣೆಗೆ ಸಜ್ಜುಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

Posted date: 16 Mar, 2018

Powered by:     Yellow and Red

ಚುನಾವಣೆಗೆ ಸಜ್ಜುಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಚುನಾವಣಾ ಆಯೋಗವು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಬಹುದಾಗಿದ್ದು, ಚುನಾವಣೆಗೆ ನೇಮಿಸಲಾದ ಅಧಿಕಾರಿಗಳು ಸಜ್ಜುಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು. 
ಅವರು ಶುಕ್ರವಾರ ನಗರದ ಎಸ್.ಎಂ. ಪಂಡಿತರ ರಂಗಮಂದಿರದಲ್ಲಿ ಸೆಕ್ಟರ್ ಅಧಿಕಾರಿ ಮತ್ತು ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಭೀತಿ ತಡೆ (vuಟಟಿeಡಿಚಿbiಟiಣಥಿ) ನಕಾಶೆ ತಯಾರಿ ಕುರಿತು ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿ, ಚುನಾವಣೆಯನ್ನು ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವ ಹಾಗೆ ಖರ್ಚು ವೆಚ್ಚ, ವಿಡಿಯೋ ವೀವಿಂಗ್, ವಿಡಿಯೋ ಸರ್ವಲನ್ಸ್, ಫ್ಲಾಯಿಂಗ್ ಸ್ಕ್ವಾಡ್, ಎಂ.ಸಿ.ಎ., ಎಂ.ಸಿ.ಎಂ.ಸಿ., ತಂಡಗಳನ್ನು ರಚಿಸಲಾಗಿದ್ದು, ಈ ತಂಡದಲ್ಲಿರುವ ಎಲ್ಲ ಅಧಿಕಾರಿಗಳು ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕೆಂದರು. 
ಜಿಲ್ಲೆಯಲ್ಲಿ ಈ ಹಿಂದಿನ ಚುನಾವಣೆಗಳಲ್ಲಿ ನಡೆಸಿರುವ ಅಹಿತಕರ ಘಟನೆಗಳ ಆಧಾರದ ಮೇಲೆ ಹಾಗೂ ನೈತಿಕ ಚುನಾವಣೆಗೆ ಅಡ್ಡಿ ಮಾಡುವಂತಹ ಪ್ರದೇಶಗಳನ್ನು ಗುರುತಿಸಿ ಸೆಕ್ಟರ್ ಅಧಿಕಾರಿಗಳು ಮತಗಟ್ಟೆವಾರು ವರದಿ ಸಲ್ಲಿಸಬೇಕು. ಶನಿವಾರದಂದು ಆಯಾ ಮತಕ್ಷೇತ್ರಗಳ ತಹಶೀಲ್ದಾರರು ಮತ್ತು ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಅವಶ್ಯವಿರುವ ನಮೂನೆಗಳನ್ನು ನೀಡಬೇಕು. ಸೆಕ್ಟರ್ ಅಧಿಕಾರಿಗಳು ನಿಖರವಾದ ಹಾಗೂ ಜವಾಬ್ದಾರಿಯಿಂದ ಮಾಹಿತಿ ಸಂಗ್ರಹಿಸಿ ವರದಿ ಮಾಡಬೇಕೆಂದು ತಿಳಿಸಿದರು. 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮಾತನಾಡಿ, ಈ ಹಿಂದೆ ನಡೆದ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ, ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಡೆದಿರುವ ಅಹಿತಕರ ಘಟನೆಗಳು, ಜಾತಿ ಸಂಘರ್ಷ, ಮತದಾನಕ್ಕೆ ಆಮಿಷ ಒಡ್ಡುವುದು ಹಾಗೂ ಮತದಾನ ಮಾಡದಂತೆ ಭೀತಿ ಸೃಷ್ಟಿಸುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶಗಳ ಭೀತಿ ತಡೆ ನಕಾಶೆ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕೆಂದರು. 
ಭೀತಿ ತಡೆ ನಕಾಶೆ ತಯಾರಿಸಿ ವರದಿ ನೀಡಲು ಸೆಕ್ಟರ್ ಅಧಿಕಾರಿಗಳ ಜೊತೆ ಒಬೊಬ್ಬ ಸೆಕ್ಟರ್ ಪೊಲೀಸ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ. ಡಿಎಸ್‍ಪಿ. ಗಳನ್ನು ನೋಡಲ್ ಅಧಿಕಾರಿಗಳೆಂದು ನೇಮಿಸಲಾಗುವುದು. ಎಲ್ಲ ಪೊಲೀಸ್ ಅಧಿಕಾರಿಗಳು ಪಾರದರ್ಶಕ ಚುನಾವಣೆ ನಡೆಸಲು ಜವಾಬ್ದಾರಿಯುತ ಕೆಲಸ ನಿರ್ವಹಿಸಬೇಕೆಂದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಮಾತನಾಡಿ, ಸೆಕ್ಟರ್ ಅಧಿಕಾರಿಗಳು ಮಾರ್ಚ್ 20ರೊಳಗಾಗಿ ಭೀತಿ ತಡೆ ನಕಾಶೆ ತಯಾರಿ ಮಾಹಿತಿಯನ್ನು ಆಯಾ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಚುನಾವಣಾಧಿಕಾರಿಗಳು ಮಾರ್ಚ್ 23ರೊಳಗಾಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದರು. 
ಜಿಲ್ಲಾ ಮಾಸ್ಟರ್ ಟ್ರೇನರ್ ಡಾ. ಶಶಿಶೇಖರ ರೆಡ್ಡಿ ಮಾತನಾಡಿ, ಚುನಾವಣೆಗಳಲ್ಲಿ ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಅವಕಾಶ ಮಾಡಿಕೊಡದೇ ಭೀತಿ-ತಡೆ ಹುಟ್ಟಿಸುವ ಪ್ರದೇಶಗಳನ್ನು ಗುರುತಿಸುವುದು ಸೆಕ್ಟರ್ ಅಧಿಕಾರಿ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳ ಕರ್ತವ್ಯವಾಗಿದೆ. ಕಳೆದ ಚುನಾವಣೆಯಲ್ಲಿ ಅನುಮಾನಾಸ್ಪದವಾಗಿ ಮತದಾನ ನಡೆದ ಪ್ರದೇಶಗಳು, ಮತದಾನ ಮಾಡುವಾಗ ಭೀತಿಗೊಳಗಾದ ಮತದಾರ ಅಥವಾ ಸಮುದಾಯದ ಗುಂಪುಗಳನ್ನು ಗುರುತಿಸುವುದು, ಭೀತಿ ಹುಟ್ಟಿಸುವ ಜನರನ್ನು ಗುರುತಿಸಿ ಮತದಾರರಿಗೆ ನೀಡುವ ಭೀತಿಯನ್ನು ತಡೆಯಲು ಸೆಕ್ಟರ್ ಅಧಿಕಾರಿಗಳು ಸೆಕ್ಟರ್ ಪೊಲೀಸ್‍ರಿಂದ, ಆಯಾ ಮತಗಟ್ಟೆಗಳ ಗಸ್ತು ಪೊಲೀಸ್‍ರಿಂದ, ಮತದಾರರಿಂದ, ಗುಪ್ತಚರರಿಂದ ನಿಖರ ಮಾಹಿತಿ ಸಂಗ್ರಹಿಸಿ ಅದನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಚುನಾವಣಾಧಿಕಾರಿಗಳು ಇಡೀ ಮತಕ್ಷೇತ್ರದ ಮಾಹಿತಿಯೊಂದಿಗೆ ನಕಾಶೆ ಸಿದ್ಧಪಡಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸುವುದು, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವರದಿಯನ್ನು ಪರಿಶೀಲಿಸಿ ಭೀತಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವರು ಎಂದು ವಿವರಿಸಿದರು. 
ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳ ವ್ಯಾಪ್ತಿಯಲ್ಲಿರುವ ಸಮಾಜ ದ್ರೋಹಿಗಳು, ರೌಡಿ ಶಿಟರ್‍ಗಳು, ವಿಛಿದ್ರಕಾರಿ ಶಕ್ತಿಗಳು ಹಾಗೂ ದುರ್ನಡತೆವುಳ್ಳರ ಮೇಲೆ ವಿಶೇಷ ನಿಗಾ ವಹಿಸಬೇಕು. ಚುನಾವಣಾ ಸಮಯದಲ್ಲಿ ಮತದಾನಕ್ಕೆ ಅಡ್ಡಿಪಡಿಸುವುದು ಭಾರತೀಯ ದಂಡ ಸಂಹಿತೆ ಪ್ರಕಾರ ಗಂಭೀರ ಅಪರಾಧವಾಗಿದ್ದು, ಇದನ್ನು ದುರ್ನನಡೆಗೆ ಎಂದು ಪರಿಗಣಿಸಿ ಸೂಕ್ತ ದಂಡ ಮತ್ತು ಶಿಕ್ಷೆ ವಿಧಿಸಲಾಗುವುದು. 
ಸಭೆಯಲ್ಲಿ ಸೇಡಂ ಸಹಾಯಕ ಆಯುಕ್ತ ಬಿ. ಸುಶೀಲಾ, ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಚುನಾವಣಾ ತಹಶೀಲ್ದಾರ ಸಂಜುಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑