ರಾಜ್ಯ ಸರ್ಕಾರಕ್ಕೆ ಮುಖಭಂಗ
ರಾಮನಗರ: ಕರ್ನಾಟಕ ಹಾಲು ಮಹಾ ಮಂಡಳಿ ಅಧ್ಯಕ್ಷ ಪಿ.ನಾಗರಾಜು ಅವರನ್ನು ಹುದ್ಧೆಯಿಂದ ಕೆಳಗೆ ಇಳಿಸುವ ಸರ್ಕಾರದ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗುವ ಮೂಲಕ ಸರ್ಕಾರಕ್ಕೆ ಮೂರನೇ ಬಾರಿ ಮುಖ ಭಂಗವಾಗಿದೆ
ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಪ್ರತಿನಿಧಿಸುವ ರಾಮನಗರ ತಾಲೂಕು ಮಾಯಗಾನಹಳ್ಳಿ ಗ್ರಾಮದ ಎಂಪಿಸಿಎಸ್ ಆಡÀಳಿತ ಮಂಡಳಿ ಮೇಲೆ ಅವ್ಯವಹಾರ ಆರೋಪ ಹೊರಿಸಿ, ಸದಸ್ಯತ್ವವನ್ನೇ ರದ್ಧು ಪಡಿಸುವ ಸಹಕಾರ ಇಲಾಖೆ ಪ್ರಯತ್ನಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಮೂಲಕ ಮೂರನೇ ಬಾರಿಗೆ ಪಿ.ನಾಗರಾಜು ಅವರನ್ನು ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವ ಪ್ರಯತ್ನಕ್ಕೆ ಹಿನ್ನಡೆಯಾದಂತಾಗಿದೆ.
ಮಾಯಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣ,ನಿವೇಶನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಅಲ್ಲದೆ ಕಳೆದ ಹಲವಾರು ವರ್ಷಗಳಿಂದ ಕೆಲವೇ ಮಂದಿ ಆಡಳಿತ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷರು ಮತ್ತು ಮಂಡಳಿ ಸದಸ್ಯರ ವಿರುದ್ದ ಕ್ರಮ ಕೈಗೊಂಡು ಮಂಡಳಿಯನ್ನು ವಜಾ ಮಾಡುವಂತೆ ಆಗ್ರಹಿಸಿ ಮಾಯಗಾನಹಳ್ಳಿ ಎಂಪಿಸಿಎಸ್ ನಿರ್ದೇಶಕ ಎಂ.ಬಿ.ಮಹದೇವಯ್ಯ ಸೇರಿದಂತೆ 10 ಮಂದಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದ ರಾಮನಗರ ಸಹಕಾರ ಸಂಘಗಳ ಸಹಾಯಕ ನಿಬಂಧಕರು ವಿಚಾರಣೆ ನಡೆಸುತ್ತಿದ್ದರು. ಇದರಿಂದ ಎಚ್ಚೆತ್ತ ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಹೈ ಕೋರ್ಟ್ ಮೊರೆ ಹೋಗಿದ್ದರು. ಇಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಸಹಕಾರ ಇಲಾಖೆ ವಿಚಾರಣೆಯನ್ನು ನಡೆಸದಂತೆ ತಡೆ ನೀಡಿದೆ. ಪಿ.ನಾಗರಾಜು ಪರವಾಗಿ ಹಿರಿಯ ನ್ಯಾಯವಾದಿ ವಿಜಯಶಂಕರ್ ಅವರು ವಾದ ಮಂಡಿಸಿದ್ದರು.
ಪ್ರಮಾಣ ಪತ್ರ ಸಲ್ಲಿಕೆ : ಇಡೀ ಪ್ರಕರಣ ಮತ್ತೊಂದು ಮಹತ್ವದ ತಿರುವ ಪಡೆದಿದ್ದು, ದೂರು ನೀಡಿದ್ದ ಎಲ್ಲಾ 10 ಮಂದಿ ಪ್ರತ್ಯೇಕವಾಗಿ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ನಾವು ಮಾಯಗಾನಹಳ್ಳಿ ಎಂಪಿಸಿಎಸ್ ವಿರುದ್ಧ ಯಾವುದೇ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ. ಜಗದೀಶ್ ಎಂಬುವರ ಮಗಳಿಗೆ ಕೆಲಸ ಕೊಡಿಸುವ ಸಲುವಾಗಿ ತಮ್ಮಿಂದ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರು ಖಾಲಿ ಕಾಗದದ ಮೇಲೆ ಸಹಿ ಪಡೆದುಕೊಂಡಿದ್ದರು. ಈಗ ತಾವು ಸೇರಿದಂತೆ 10 ಮಂದಿ ದೂರು ನೀಡಿದ್ದಾರೆ ಎಂದು ಹೇಳಿ ಸಂಘಕ್ಕೆ ನೋಟೀಸ್ ನೀಡಿರುವುದು ಆಘಾತ ತಂದಿದೆ. ನಾನು ಯಾವುದೇ ದೂರು ದಾಖಲು ಮಾಡಿಲ್ಲ, ತಮ್ಮನ್ನು ತಾವು ದಾಖಲು ಮಾಡಿಕೊಂಡಿರುವ ಪ್ರಕರಣದಿಂದ ಮುಕ್ತಿಗೊಳಿಸಿ ಎಂದು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ.
ವಿಚಾರಣೆ ಮುಂದುವರಿಕೆ : ಮಾಯಗಾನಹಳ್ಳಿ ಎಂಪಿಸಿಎಸ್ಗೆ ನೋಟೀಸ್ ಜಾರಿಯಾದ ನಂತರ ದೂರು ದಾಖಲು ಮಾಡಿದ್ದಾರೆ ಎನ್ನಲಾದ ಎಲ್ಲಾ 10 ಮಂದಿ ಪ್ರತ್ಯೇಕ ಪ್ರಮಾಣ ಪತ್ರ ಸಲ್ಲಿಸಿ, ಪ್ರಕರಣದಿಂದ ತಮ್ಮನ್ನು ಮುಕ್ತಿಗೊಳಿಸಿ ಎಂದು ಕೋರಿ ಕೊಂಡಿದ್ದರೂ ರಾಮನಗರ ಸಹಕಾರ ಸಂಘಗಳ ಸಹಾಯಕ ನಿಬಂಧಕರು ವಿಚಾರಣೆಯಲ್ಲಿ ಮುಂದುವರಿಸಿದ್ದಾರೆ. ಅಲ್ಲದೆ ಫೆ.23ರಿಂದ ಮಾ.03ರವರೆಗೆ 5 ಬಾರಿ ಪ್ರಕರಣದ ವಿಚಾರಣೆಯನ್ನು ಸಹ ನಡೆಸಿದ್ದು, ಮತ್ತೆ ಮಾ.16ಕ್ಕೆ ವಿಚಾರಣೆಯನ್ನು ಮುಂದೂಡಿದ್ದರು. ಇದು ತನ್ನ ನಿರ್ದೇಶಕ ಸ್ಥಾನವನ್ನು ವಜಾಗೊಳಿಸುವ ಉz್ದÉೀಶದಿಂದಲೇ ಪೂರ್ವ ನಿಯೋಜಿತವಾಗಿ ಮಾಡಲಾಗುತ್ತಿದೆ ಎನ್ನುವುದು ಪಿ.ನಾಗರಾಜು ಆರೋಪ. ಮಾಯಗಾನಹಳ್ಳಿಯಲ್ಲಿ ತನ್ನ ಸದಸ್ಯತ್ವ ರದ್ದಾದರೆ, ಸಾಮಾನ್ಯವಾಗಿ ಬಮೂಲ್ ಮತ್ತು ಕೆಎಂಎಫ್ ನಿದೇರ್ಶಕ ಸ್ಥಾನ ಮತ್ತು ಕೆಎಂಎಫ್ ಅಧ್ಯಕ್ಷ ಸ್ಥಾನ ಕಳೆದುಕೊಳ್ಳುತ್ತೇನೆ ಎನ್ನುವುದು ಇದರ ಹಿಂದಿನ ಉz್ದÉೀಶವಾಗಿದೆ ಎನ್ನುವುದು ಪಿ.ನಾಗರಾಜು ಆರೋಪ.
ಬಾಕ್ಸ್:
ರಾಮನಗರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಮೇಲೆ ರಾಜಕೀಯ ಒತ್ತಡ ತಂದು, ನೋಟೀಸ್ ನೀಡಿದ ನಂತರ 30 ದಿನಗಳು ಕಾಲಾವಾಕಾಶವನ್ನು ನೀಡದೆ ತಮ್ಮ ನಿರ್ದೇಶಕ ಸ್ಥಾನವನ್ನು ರದ್ದುಪಡಿಸುವ ಪ್ರಯತ್ನ ಮಾಡಲಾಗಿದೆ. ಇದಕ್ಕೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ದೊರೆತಿದೆ. ಸಂಘವನ್ನು ಆರ್ಥಿಕವಾಗಿ ಬಲವಾಗಿಸಲಾಗಿದೆಯೇ ಹೊರತು ಯಾವುದೇ ಕಾರಣಕ್ಕೂ ಅವ್ಯವಹಾರ ನಡೆಸಲು ಅವಕಾಶ ನೀಡಿಲ್ಲ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಮಾಡುವುದು ನಾಚಿಕೆಗೇಡು.
- ಪಿ.ನಾಗರಾಜು.
ಕೆಎಂಎಫ್ ಅಧ್ಯಕ್ಷ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು