ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದ. ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ಮೇ 18. ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದವಾಗಿದೆ.
ಬಾಧಿತ ಮಕ್ಕಳ ವಸತಿಗಾಗಿ ರೆಸಿಡೆನ್ಸಿಯಲ್ ಶಾಲೆಗಳನ್ನು ಮೀಸಲಿರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ ಮಾಡಿದರು.
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಹಾಗೂ ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ.
ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಬಾಧಿತರಾದ ಮಕ್ಕಳನ್ನು ಗುರುತಿಸಲು ಹಾಗೂ ಪುನರ್ವಸತಿಗೆ ಸರ್ಕಾರ 1098 ಎಂಬ ಸಹಾಯವಾಣಿ ತಂದಿದ್ದು, ಹಿರಿಯ ಐಎಎಸ್ ಅಧಿಕಾರಿ ಮೋಹನ್ ರಾಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಇಂಥಹ ಮಕ್ಕಳಿಗೆ ಕೌಟುಂಬಿಕ ವಾತಾವರಣ ಒದಗಿಸುವುದು ಸಚಿವೆಯಾಗಿ ನನ್ನ ಹಾಗೂ ನಮ್ಮ ಇಲಾಖೆ ಹಾಗೂ ನಮ್ಮ ಸರ್ಕಾರದ ಕರ್ತವ್ಯ ಎಂದರು.
*ಮಕ್ಕಳು ಪಾಲಕರ ಪೋಷಣೆಯಿಂದ ವಂಚಿರಾಗುವ ಸಂಧರ್ಭಗಳು*
1.ತಂದೆ - ತಾಯಿ ಕೋವಿಡ್ ನಿಂದ ಮೃತರಾದರೆ
2.ತಂದೆ-ತಾಯಿ ಇಬ್ಬರು ಆಸ್ಪತ್ರೆಗೆ ದಾಖಲಾದರೆ
3. ಕೋವಿಡ್ ನಿಂದ ಒಬ್ಬರು ಮೃತರಾಗಿ ಇನ್ನೊಬ್ಬರು ಆಸ್ಪತ್ರೆಗೆ ದಾಖಲಾದರೆ
4. ಒಬ್ಬರು ಮೃತರಾಗಿ ಇನ್ನೊಬ್ಬರು ಬೇರೆ ಪ್ರದೇಶದಲ್ಲಿ ವಾಸವಿದ್ದರೆ.
ಈ ಮೇಲಿನ ಕಾರಣಗಳಿಂದ ಮಕ್ಕಳು ಅನಾಥರಾದಾಗ ಅವರಿಗೆ ನಾವಿದ್ದೇವೆ ಎಂಬ ಭಾವನೆಯನ್ನು ಮೂಡಿಸಲು ಇಲಾಖೆ ಸಜ್ಜಾಗಿದೆ.
ಇನ್ನು ಸಚಿವೆ ಶಶಿಕಲಾ ಜೊಲ್ಲೆಯವರ ವಿಶೇಷ ಮುತುವರ್ಜಿ ಮೇರೆಗೆ ಕೋವಿಡ್ ಬಾಧಿತ ಅನಾಥ ಮಕ್ಕಳಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.
1 ರಿಂದ 6 ವರ್ಷದೊಳಗಿನ ಮಕ್ಕಳ ಆರೈಕೆಗೆ ವಿಶೇಷ ಕ್ವಾರೆಂಟೈನ್ ಸೌಲಭ್ಯ, ವಿಶೇಷ ದತ್ತು ಸಂಸ್ಥೆಗಳನ್ನು ಗೊತ್ತುಪಡಿಸುವುದು.
2 ರಿಂದ 7 ಮತ್ತು 18 ವರ್ಷದೊಳಗಿನ ಮಕ್ಕಳ ಆರೈಕೆಗೆ ವಿಶೇಷ ಕ್ವಾರೆಂಟೈನ್ ಸೌಲಭ್ಯ ಹಾಗೂ ಪಿಟ್ ಫೆಸಿಲಿಟಿಸ್ ಒದಗಿಸುವುದು
3 ರಿಂದ 18 ವರ್ಷದವರೆಗಿನ ಮಕ್ಕಳ ಕ್ವಾರೆಂಟೈನ್ ಗಾಗಿ ರೆಸಿಡೆನ್ಸಿಯಲ್ ಮೀಸಲಿಡಲು ತೀರ್ಮಾನ ಮಾಡಲಾಗಿದೆ ಎಂದರು.
*ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ವಿಶೇಷ ಯೋಜನೆ*
1. ಯಾವುದೇ ಲಕ್ಷಣಗಳಿಲ್ಲದ ಕೋವಿಡ್ ಪೀಡಿತ ಮಕ್ಕಳಿಗೆ ವಿಶೇಷ ಪಿಡಿಯಾಟ್ರಿಕ್ ಕೋವಿಡ್ ಕೇರ್ ಸೆಂಟರ್ (CCC) ಗಳಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ 30 ಜಿಲ್ಲೆಗಳಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ
2.ಲಕ್ಷಣವುಳ್ಳ ಕೋವಿಡ್ ಸೋಂಕಿತ ಮಕ್ಕಳಿಗೆ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಪಿಡಿಯಾಟ್ರಿಕ್ ಕೋವಿಡ್ ಕೇರ್ ಸೆಂಟರ್ ನಲ್ಲಿ ವಿಶೇಷ ಆರೈಕೆ. ಇಲಾಖೆಯಿಂದ ವಿಶೇಷ ಆರೈಕೆದಾರರ ನೇಮಕ
*ಕೋವಿಡ್ ಸಂಧರ್ಭದಲ್ಲಿ ನಮ್ಮ ಇಲಾಖೆಯಿಂದ ಕೈಗೊಂಡ ಕ್ರಮಗಳು*
1. ಅಂಗನವಾಡಿ ಫಲಾನುಭವಿಗಳಿಗೆ ಮನೆಮನೆಗೆ ತೆರಳಿ ವಿಶೇಷ ಪೌಷ್ಟಿಕ ಆಹಾರ ವಿತರಣೆ
2.ಅಂಗನವಾಡಿ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯದ ಮೇಲೆ ವಿಶೇಷ ನಿಗಾ
3. ಕೋವಿಡ್ ಸೋಂಕಿನಿಂದ ಮರಣಹೊಂದಿದ 12 ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂಗಳ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ.
4. 3 ನೇ ಅಲೆಯು ಚಿಕ್ಕ ಮಕ್ಕಳಲ್ಲಿಯೇ ಹೆಚ್ಚಾಗಿ ಸೋಂಕು ಕಂಡುಬರುತ್ತದೆ ಎಂದು ತಜ್ಞರು ಎಚ್ಚರಿಸಿದ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಇಲಾಖೆ ಇದಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು