Tel: 7676775624 | Mail: info@yellowandred.in

Language: EN KAN

    Follow us :


ಕಾಯಕದಿಂದ ಬೆಳಕು ಚೆಲ್ಲಿದದಲಿತ ವಚನಕಾರರು: ಪರಶಿವ ನಡುಬೆಟ್ಟ

Posted date: 22 Mar, 2018

Powered by:     Yellow and Red

ಕಾಯಕದಿಂದ ಬೆಳಕು ಚೆಲ್ಲಿದದಲಿತ ವಚನಕಾರರು: ಪರಶಿವ ನಡುಬೆಟ್ಟ

ಮೈಸೂರು :  ಜಾತಿ, ಧರ್ಮ ಹೇಳದೆ ಕಾಯಕ ನಿಷ್ಠೆಯಿಂದ ವರ್ಣಬೇಧ ಧಿಕ್ಕರಿಸಿ ಕಾಯಕದಿಂದಲೇಜನರಲ್ಲಿ ಬೆಳಕು ಚೆಲ್ಲಿಗುರು, ಜಂಗಮ, ಲಿಂಗ ಕಂಡುಕೊಂಡವರು ದಲಿತ ವಚನಕಾರರು ಎಂದು ಸಾಹಿತಿ ಪರಶಿವ ನಡುಬೆಟ್ಟಅವರು ತಿಳಿಸಿದರು. 
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಜಿಲ್ಲಾದಲಿತ ವಚನಕಾರರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ದಲಿತ ವಚನಕಾರರ ಜಯಂತಿಯಲ್ಲಿಅವರು ಮಾತನಾಡಿದರು.
ಮಾದಾರಚನ್ನಯ್ಯ, ಮಾದಾರ ದೂಳಯ್ಯ, ಡೋಹರಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಿ ಪೆದ್ದಿ ಸೇರಿದಂತೆ 200ಕ್ಕೂ ಹೆಚ್ಚು ವಚನಕಾರರು 12ನೇ ಶತಮಾನದಲ್ಲಿ ಮಾನವೀಯ ಮೌಲ್ಯ ರೂಪಿಸಿಕೊಂಡು ತಮ್ಮಕಾಯಕದ ಮೂಲಕ ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸಿ ಹೊಸ ಯುಗವನ್ನು ಸೃಷ್ಟಿಸಿದರು ಎಂದರು.
ಭಕ್ತಿ ಬಸವಣ್ಣನವರು ದಲಿತ ವಚನಕಾರ ಕಂಬಳಿನಾಗಿದೇವನ ಮನೆಯಲ್ಲಿ ಪ್ರಸಾದ ಸ್ವೀಕರಿಸಿ ಮನುಷ್ಯ ಸಂಬಂಧವನ್ನು ಬೆಸದರು.ಈ ಕಾರಣಕ್ಕೆ ಬಸವಣ್ಣನವರು ಕುಲವನ್ನು ಮಲಿನಗೊಳಿಸಿದರು ಎಂದು ಕೆಲವರು ನಿಂದಿಸಿದಾಗ ಅದನ್ನು ಲೆಕ್ಕಿಸದೆಅವರು ನಾಗಿದೇವನನ್ನು ಪಲ್ಲಕ್ಕಿ ಮೇಲೆ ತಂದು ಅವನ ಕಾಯಕವನ್ನು ಮೆರೆದರು ಎಂದು ತಿಳಿಸಿದರು.
ದಲಿತ ಉರಿಲಿಂಗಪೆದ್ದಿ ಲಿಂಗತ್ವ ಸ್ವೀಕರಿಸಿ ದೀಕ್ಷೆ ಪಡೆಯಲು 48 ದಿನಗಳು ಆಹಾರ ಬಿಟ್ಟು ತಪಸ್ಸು ಮಾಡಿದರು. ಬಸವಣ್ಣನವರು ಬಿಸಾಡಿದ ಕಲ್ಲನ್ನೆ ಉರಿಲಿಂಗಪೆದ್ದಿಯವರು ಲಿಂಗವೆಂದು ಪೂಜಿಸಿದರು. ಅವರ ಭಕ್ತಿ ನೋಡಿ ಬಸವಣ್ಣನವರು ದೀಕ್ಷೆಕೊಟ್ಟರು. ಮಾದಾರಚೆನ್ನಯ್ಯ ಬಸವಣ್ಣನವರಿಂದ ದೀಕ್ಷೆ ಪಡೆದು ಮಾದಿಗ ಕುಲ ಎಂಬುದನ್ನು ದೂರ ಮಾಡಿ ನಾವೆಲ್ಲರೂ ಒಂದೇ ಎಂಬ ತತ್ವವನ್ನು ಸಮಾಜಕ್ಕೆ ಸಾರಿದರುಎಂದರು.
ಹರಳಯ್ಯ ಬಸವಣ್ಣನವರ ಶರಣು ತತ್ವಗಳನ್ನು ಅಳವಡಿಸಿಕೊಂಡು ಬಂದವರು. ನಿನ್ನನ್ನು ನೀನು ಅರಿತರೆಅದೇದೇವರು, ಅಲ್ಲೇದೇಗುಲ ಎಂದು ತಮ್ಮ ವಚನಗಳ ಮೂಲಕ ತಿಳಿಸಿಕೊಟ್ಟವರು. ದಲಿತ ವಚನಗಾರ್ತಿಯರಾದ ಆಯ್ದಕ್ಕಿ ಲಕ್ಕಮ್ಮ, ದುರ್ಗಮ್ಮ, ಸೂಳೆ ಶಂಕಮ್ಮನವರು ತಮ್ಮ ಕಾಯಕ ಮತ್ತು ವಚನಗಳ ಮೂಲಕ ಸಮಾಜದ ಅನಿಷ್ಠ ಪದ್ದತಿಗಳ ವಿರುದ್ಧ ಹೋರಾಡಿದರು ಎಂದು ತಿಳಿದರು. 
ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಭಾಗ್ಯವತಿ, ಮೈಸೂರು ಉಪವಿಭಾಗಾಧಿಕಾರಿ ಶಿವೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‍ಅಧ್ಯಕ್ಷ ವೈ.ಡಿ.ರಾಜಣ್ಣ ಹಾಗೂ ಸಂಘಟನೆಗಳ ಮುಖಂಡರುಗಳು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑