ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ನಿರ್ಲಕ್ಷಿಸಬೇಡಿ
ಹಾಸನ : ಸರ್ಕಾರಿ ಪದವಿ ಪೂರ್ವ ಕಾಲೇಜು, ಜಾವಗಲ್ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಪದ್ಮ,ಕೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳ ಮೇಲೆಯೂ ದೌರ್ಜನ್ಯಗಳು ಹೆಚ್ಚುತ್ತವೆ.
ಈ ಪ್ರಕರಣಗಳು ಮೊದಲು ತಿಳಿಯುವುದು ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತರಿಗೆ, ಅವರು ತಕ್ಷಣ ಈ ಬಗ್ಗೆ ವರದಿ ಮಾಡಬೇಕು ಇಲ್ಲದಿದ್ದರೆ ಪೋಕ್ಸೋ ಕಾಯ್ದೆಯನ್ವಯ ತಪ್ಪಾಗುತ್ತದೆ ಎಂದರು. ಇಲಾಖೆಯ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ತುರ್ತು ಚಿಕಿತ್ಸಾ ಘಟಕವನ್ನು ತಾಲ್ಲೂಕು ಕೇಂದ್ರಗಳ ಆಸ್ಪತ್ರೆಯಲ್ಲಿ ಗೆಳತಿ ಚಿಕಿತ್ಸಾ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಸಂತ್ರಸ್ತ ಹೆಣ್ಣು ಮಕ್ಕಳಿಗೆ ಸೂಕ್ತ ಚಿಕಿತ್ಸೆ, ಕಾನೂನು ನೆರವು, ಆಪ್ತ ಸಮಾಲೋಚನೆಯ ಜೊತೆಗೆ ತುರ್ತು ಪರಿಹಾರ ಕೊಡಿಸಲು ದುಡಿಯುತ್ತಿದೆ ಎಂದರು.
ಮಕ್ಕಳ ರಕ್ಷಣಾ ಘಟಕವು ನಮ್ಮ ಇಲಾಖೆಯ ಮತ್ತೊಂದು ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಯಡಿಯಲ್ಲಿ ಸಂತ್ರಸ್ತ ಮಕ್ಕಳ ರಕ್ಷಣೆಗೆ ಮಕ್ಕಳ ಸಹಾಯವಾಣಿ- 1098 ಅನಾಥ, ಪರಿತ್ಯಕ್ತ ಹಾಗೂ ತ್ಯಜಿಸಲ್ಪಟ್ಟ ಮಕ್ಕಳನ್ನು ಕಾನೂನು ಬದ್ದವಾಗಿ ದತ್ತು ನೀಡಲು ದತ್ತು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಜೊತೆಗೆ ಪಾಲನೆ-ರಕ್ಷಣೆ ಅವಶ್ಯಕತೆ ಇರುವ ಮಕ್ಕಳಿಗೆ ಪುನರ್ವಸತಿ, ಆಪ್ತ ಸಮಾಲೋಚನೆ ನೀಡಲು ಮಕ್ಕಳ ಕಲ್ಯಾಣ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಈ ರೀತಿಯ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿನ ಸಂಕಷ್ಠದಲ್ಲಿರುವ ಮಕ್ಕಳನ್ನು ರಕ್ಷಿಸುವುದು ಹಾಗೂ ಸೂಕ್ತ ಪುನರ್ವಸತಿ ಕಲ್ಪಿಸಿ ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಶ್ರಮಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಂತರಾಜು, ರಕ್ಷಣಾಧಿಕಾರಿಗಳು(ಅಸಾಂಸ್ಥಿಕ), ಜಿಲ್ಲಾ ಮಕ್ಕಳ ರಕ್ಷಣ ಘಟಕ ಇವರು ಜಿಲ್ಲೆಯಲ್ಲಿ ಐಸಿಪಿಎಸ್ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ದೇಶದ ಒಟ್ಟು ಮಕ್ಕಳಲ್ಲಿ ಶೇ.40 ಮಕ್ಕಳಿಗೆ ಸೂಕ್ತ ರಕ್ಷಣೆ, ಪಾಲನೆ ಹಾಗೂ ಪ್ರೀತಿ ಹಾರೈಕೆ ಸಿಗಲೇಬೇಕು ಈ ನಿಟ್ಟಿನಲ್ಲಿ ಘಟಕ ಶ್ರಮಿಸುತ್ತಿದೆ. ಜೊತೆಗೆ ಇಲಾಖೆಗಳ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳು, ಮಕ್ಕಳ ಸಂಬಂದಿ ಕಾನೂನುಗಳು ಹಾಗೂ ಯೋಜನೆಗಳನ್ನು ತಿಳಿಸುವ ಮೂಲಕ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಮಕ್ಕಳ ರಕ್ಷಣೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ವೇದಿಕೆ ಶಿಕ್ಷಣ ಇಲಾಖೆಯ ಇಸಿಒ ಕಿರಣ್ರವರು ಭಾಗವಹಿಸಿ ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕಿ ಇಂದ್ರಮ್ಮ ಇದ್ದರು. ಕಾರ್ಯಕ್ರಮದ ನಿರೂಪಣೆಯನ್ನು ರಕ್ಷಣಾಧಿಕಾರಿ(ಸಾಂಸ್ಥಿಕ) ರಶ್ಮಿ ನೆರವೇರಿಸಿದರು. ಲೋಹಿತ್ ಆರ್,ಡಿ ಇವರು ಎಲ್ಲರಿಗೂ ಸ್ವಾಗತಿಸಿದರು. ತರಬೇತಿ ಕಾರ್ಯಗಾರದಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು