ಚನ್ನಪಟ್ಟಣದಲ್ಲಿ ಹೆಚ್ ಡಿ ಕೆ ಸ್ಪರ್ಧಸಿದರೇ ರಾಮನಗರದಲ್ಲಿ ಪಿ ಜಿ ಆರ್ ಸಿಂಧ್ಯಾ !?
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಾದ್ಯಂತ ಕುತೂಹಲ ಕೆರಳಿಸಿರುವ ಬಹು ಮುಖ್ಯ ಜಿಲ್ಲೆ ಎಂದರೆ ಅದು ರಾಮನಗರ ಜಿಲ್ಲೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ ದ ನಾಯಕರಲ್ಲಿ ಒಮ್ಮತವಿರದ ಕಾರಣ ಹಾಗೂ ಪದೆಪದೇ ಬಹುತೇಕ ನಾಯಕರು ಅನಿತಾ ಕುಮಾರಸ್ವಾಮಿ ಯವರನ್ಬೇ ಅಭ್ಯರ್ಥಿ ಮಾಡಿ ಎಂದು ಹೈಕಮಾಂಡ್ ಗೆ ಒತ್ತಡ ಹಾಕುತ್ತಿರುವುದನ್ನು ಸಹಿಸಲಾಗದೆ ಹೆಚ್ ಡಿ ಕುಮಾರಸ್ವಾಮಿ ಯವರು ಕೋಪದಲ್ಲಿ ನಮ್ಮ ಕುಟುಂಬದಲ್ಲಿ ಇಬ್ಬರೇ ಸ್ಪರ್ಧಿಗಳು ಎಂದೇಳಿದರು ನೀವು ಕೇಳುತ್ತಿಲ್ಲ, ನಿಮ್ಮಲ್ಯಾರು ಸ್ಪರ್ಧಿಸುವುದಿಲ್ಲವೆನ್ನುವುದಾದರೆ ಅನಿತಾ ರವರನ್ನು ನಿಲ್ಲುಸುವುದಿಲ್ಲ, ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರದಲ್ಲಿಯೂ ನಾನೆ ಸ್ಪರ್ಧಿಸುತ್ತೇನೆ ಎಂದು ಕೋಪದಲ್ಲಿ ಹೇಳಿದ ಮಾತು ಅವರಿಗೆ ತಿರುಗುಬಾಣವಾಗುವಂತಿದೆ.
ಬಹುತೇಕ ನಾಯಕರು ಮತ್ತು ಕಾರ್ಯಕರ್ತರು ಅವರು ಎರಡು ಕಡೆ ನಿಲ್ಲುವುದಿಲ್ಲ ಎನ್ನುವ ಭರವಸೆಯಲ್ಲಿದ್ದರೂ ಸಹ ಚನ್ನಪಟ್ಟಣದ ಕೆಲವು ನಾಯಕರು ಅವರ ಕುಟುಂಬದವರೇ ಸ್ಪರ್ಧಿಸಬೇಕೆಂದು ಹಠ ಹಿಡಿದು ಕುಳಿತಿರುವುದು ಅಷ್ಟೇ ಸತ್ಯ.
ಈ ಹಿನ್ನೆಲೆಯ ಜಾಡನ್ನು ಅರಿತ ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ರವರ ಅಭಿಮಾನಿಗಳು ಹೆಚ್ ಡಿ ಕುಮಾರಸ್ವಾಮಿ ಯವರು ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಪಿ ಜಿ ಆರ್ ಸಿಂಧ್ಯಾ ರವರನ್ನು ರಾಮನಗರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿದ್ದಾರಂತೆ !
ಅದಕ್ಕೆ ಅವರು ಕೊಡುತ್ತಿರುವ ಕಾರಣಗಳು ಸಹ ಸದ್ಯ ಒಪ್ಪಿಕೊಳ್ಳುವಂತಿವೆ ಎಂದು ಹಿರಿಯ ಮುಖಂಡರು ಒಪ್ಪಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.
ಆರು ಬಾರಿ ಶಾಸಕರಾಗಿದ್ದ ಪಿ ಜಿ ಆರ್ ಸಿಂಧ್ಯಾ ರವರು ಕನಕಪುರ ಕ್ಷೇತ್ರದಲ್ಲಿ ಈಗಲೂ ತಕ್ಕಮಟ್ಟಿಗೆ ತಮ್ಮದೇ ಹಿಡಿತ ಹೊಂದಿದ್ದಾರೆ, ಹಾಗೂ ಮರಳವಾಡಿ ಮತ್ತು ಹಾರೋಹಳ್ಳಿ ಹೋಬಳಿಗಳು ರಾಮನಗರ ಕ್ಷೇತ್ರಕ್ಕೆ ಸೇರಿಕೊಂಡಿರುವುದರಿಂದ ಅವರ ಗೆಲುವು ನಿಶ್ಚಿತ ಎನ್ನುವುದು ಅವರ ಅಭಿಮಾನಿಗಳ ಸ್ಪಷ್ಟನೆ.
ಹಾಗೆನಾದರೂ ಆದರೆ ಕುಮಾರಸ್ವಾಮಿ ಯವರು ಎರಡು ಕಡೆ ಸ್ಪರ್ಧಿಸುವುದು ತಪ್ಪುತ್ತದೆ, ಸಾರ್ವಜನಿಕರ ಟೀಕೆಯೂ ಇರುವುದಿಲ್ಲ, ಶ್ರಮ ಹಾಕಿದರೆ ಎರಡೂ ಕ್ಷೇತ್ರಗಳನ್ನೂ ಗೆಲ್ಲಬಹುದು ಎನ್ನುವುದು ಈಗ ಬಿಸಿಬಿಸಿಯ ಚರ್ಚೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು