ಬಾಹುಬಲಿ ಸ್ವಾಮಿಯ 1038 ನೇ ಪ್ರತಿಷ್ಠಾಪನಾ ಮಹೋತ್ಸವ
ಹಾಸನ : ಗೊಮ್ಮಟೇಶ್ವರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮೂರ್ತಿಯ 1038 ನೇ ಪ್ರತಿಷ್ಠಾಪನಾ ಮಹೋತ್ಸವದ ನಿಮಿತ್ತ ಆಚಾರ್ಯ ಶ್ರೀ ವರ್ಧಮಾನಸಾಗರ ಮಹಾರಾಜರು ಹಾಗೂ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ವಿಶೇಷ ಮಹಾಮಸ್ತಕಾಭಿಷೇಕ ಮಹೋತ್ಸವ ನೆರವೇರಿಸಲಾಯಿತು.
ಬುಧವಾರ ರಾತ್ರಿಯೇ ಆಚಾರ್ಯಶ್ರೀ ವರ್ಧಮಾನಸಾಗರ ಮಹಾರಾಜರು ಸೇರಿದಂತೆ ಆಚಾರ್ಯರು, ಮುನಿಗಳು ಮತ್ತು ಮಾತಾಜಿಯವರು ವಿಂಧ್ಯಗಿರಿ ಬೆಟ್ಟಕ್ಕೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರುವಾರ ಪ್ರಾತಃಕಾಲ 4 ಗಂಟೆಯಿಂದಲೇ ಪೂಜಾ ವಿಧಿ-ವಿಧಾನಗಳು ಆರಂಭಗೊಂಡವು.
ಕ್ರಿ.ಶ. 981 ಮಾರ್ಚ್ 13 ರ ಚೈತ್ರಶುದ್ದ ಪಂಚಮಿಯ ಕೃತ್ತಿಕಾ ನಕ್ಷತ್ರದ ಕುಂಭ ಲಗ್ನದಲ್ಲಿ ಆಚಾರ್ಯ ಶ್ರೀ ನೇಮಿಚಂದ್ರಸಿದ್ಧಾಂತ ಚಕ್ರವರ್ತಿಗಳ ಮಾರ್ಗದರ್ಶನದಲ್ಲಿ ಕಾಳಲಾದೇವಿಯ ಪ್ರೇರಣೆ ಮತ್ತು ಕೂಷ್ಮಂಡಿನಿ ದೇವಿಯ ಆಶೀರ್ವಾದದಿಂದ ಅಂದಿನ ಗಂಗ ಸಾಮ್ರಾಜ್ಯದ ದಂಡನಾಯಕ ಚಾವುಂಡರಾಯ ಬಾಹುಬಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮಹಾಮಸ್ತಕಾಭಿಷೇಕ ನೆರವೇರಿಸಿದ್ದನು. ಇಂದು 1038 ವರ್ಷಗಳ ಬಳಿಕ ಚೈತ್ರಶುದ್ದ ಪಂಚಮಿಯ ಕೃತ್ತಿಕಾ ನಕ್ಷತ್ರದ ಕುಂಭ ಲಗ್ನದಲ್ಲಿಯೇ ಬಾಹುಬಲಿ ಮೂರ್ತಿಗೆ ನೇಮಿಚಂದ್ರಸಿದ್ದಾಂತ ಚಕ್ರವರ್ತಿಗಳ ಕಳಶ, ಗುಳ್ಳಕಾಯಿ ಅಜ್ಜಿಯ ಕಳಶ, ಕಾಳಲಾ ದೇವಿಯ ಕಳಶ, ಚಾವುಂಡರಾಯನ ಕಳಶ, ಮಹಾಶಿಲ್ಪಿಯ ಕಳಶಗಳಿಂದ ಮಸ್ತಕಾಭೀಷೇಕ ನೆರವೇರಿಸಲಾಯಿತು.
ಆಚಾರ್ಯಶ್ರೀ ವರ್ಧಮಾನಸಾಗರ ಮಹಾರಾಜರು ಜಲಾಭೀಷೇಕ ನೆರವೇರಿಸಿ ಚಾಲನೆ ನೀಡಿದರು. ನಂತರ ಎಳನೀರು, ಇಕ್ಷುರಸ, ಕ್ಷೀರ, ಕಲ್ಕಚೂರ್ಣ, ಅರಿಶಿಣ, ಕಷಾಯ, ಚತುಷ್ಕೋನ ಕಳಶ, ಕೇಸರಿ, ಶ್ರೀಗಂಧ, ಚಂದನ ಮತ್ತು ಅಷ್ಟಗಂಧಗಳಿಂದ ಪಂಚಾಮೃತ ಅಭೀಷೇಕದೊಂದಿಗೆ ವಿವಿಧ ಪುಷ್ಪಗಳಿಂದ ಪುಷ್ಪವೃಷ್ಠಿ ನೆರವೇರಿಸಲಾಯಿತು.
ನಂತರ ಜಲ, ಚಂದನ, ಅಕ್ಷತೆ, ಪುಷ್ಪ, ಚರು, ದೀಪ, ಧೂಪ, ಫಲ ಮತ್ತು ಅಘ್ರ್ಯ ಸಮರ್ಪಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಬೆಳಗ್ಗೆ 6 ಗಂಟೆಗೆ ಬಾಹುಬಲಿ ಸ್ವಾಮಿಯ ಪ್ರಸಿದ್ದ ಗೀತೆ “ಬಾಹುಬಲಿ ಸ್ವಾಮಿ ಜಗಕ್ಕೆಲ್ಲ ಸ್ವಾಮಿ” ಹಾಡನ್ನು ನೆರೆದಿದ್ದ ಭಕ್ತರೆಲ್ಲರೂ ಹಾಡುವ ಮೂಲಕ ಭಕ್ತಿ ನುಡಿನಮನ ಸಲ್ಲಿಸಿದರು.
ಈ ವೇಳೆ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಮಾತನಾಡಿ, ಪ್ರತಿ ವರ್ಷ ಪ್ರತಿಷ್ಠಾಪನಾ ಮಹೋತ್ಸವದಂದು ಬಾಹುಬಲಿ ಸ್ವಾಮಿಯ ಪಾದಪೂಜೆ ನೆರವೇರಿಸಲು ಮಾತ್ರ ಸಾಧ್ಯವಾಗುತ್ತಿತ್ತು. ಆದರೆ ಈ ಬಾರಿ ಮಹಾಮಸ್ತಕಾಭಿಷೇಕ ನೆರವೇರಿಸಲು ಸಾಧ್ಯವಾಗಿರುವುದರಿಂದ ತುಂಬಾ ಸಂತಸವಾಗಿದೆ ಎಂದರು.
ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ನಿರ್ಮಾಣ ಮಾಡಿಸಿ ಭಾರತ ದೇಶಕ್ಕೆ ಬಹುದೊಡ್ಡ ಗೌರವ ತಂದಿರುವ ಚಾವುಂಡರಾಯ ಹಾಗೂ ಮಹಾಶಿಲ್ಪಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.
ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಇಡೀ ಜಗತ್ತಿಗೆ ಶಾಂತಿ ದೊರಕಲಿ. ಕಾಲ ಕಾಲಕ್ಕೆ ಉತ್ತಮ ಮಳೆ-ಬೆಳೆಯಾಗಿ ಸಮೃದ್ದಿಯಾಗಲಿ ಎಂದು ಶುಭಹಾರೈಸಿದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು