ಮಾರ್ಚ್ 25 ರಂದು ವಾಹನಗಳ ಸಂಚಾರ ಮಾರ್ಗ ಬದಲಾವಣೆ
ಮಂಡ್ಯ : ಮಾರ್ಚ್ 25 ರಂದು ನಗರಕ್ಕೆ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಆಗಮಿಸುತ್ತಿರುವ ಹಿನ್ನೆಲ್ಲೆಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆಯ ವ್ಯವಸ್ಥೆ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ.
ಮಾರ್ಚ್ 25 ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರಗೆ ಬೆಂಗಳೂರು ಕಡೆಯಿಂದ ಮೈಸೂರಿಗೆ, ಮಂಡ್ಯ ಕಡೆಯಿಂದ ಮೈಸೂರಿಗೆ, ಪಾಂಡವಪುರ ಕಡೆಯಿಂದ ಮೈಸೂರಿಗೆ ಮೈಸೂರು ನಗರದಿಂದ ಬೆಂಗಳೂರು ಹಾಗೂ ಕೆ.ಆರ್.ಪೇಟೆ ಕಡೆಗೂ ಸೇರಿzಂತೆ ಭಾರಿ ಹಾಗೂ ಇತರೆ ಎಲ್ಲಾ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು ನಗರದಿಂದ ಬೆಂಗಳೂರು ಕಡೆಗೆ ಹೋಗುವ ಎಲ್ಲ ವಾಹನಗಳು ಮೈಸೂರು ಸಿಟಿ ಕೊಲಂಬಿಯಾ ಏಷಿಯಾ ಸರ್ಕಲ್ನಿಂದ ಅರಕೆರೆ ಮಾರ್ಗವಾಗಿ ಮಂಡ್ಯ ಕಡೆಗೆ ಹೋಗಲು ಅಥವಾ ಮೈಸೂರು ನಗರದಿಂದ ಬನ್ನೂರು-ಮಳವಳ್ಳಿ-ಮದ್ದೂರು ಮಾರ್ಗವಾಗಿ ನಂತರ ಬೆಂಗಳೂರು ಸಂಚರಿಸುವುದು.
ಮೈಸೂರು ಕಡೆಯಿಂದ ಕೆ.ಆರ್.ಪೇಟೆ, ಪಾಂಡವಪುರ, ಚಿನಕುರಳಿ ಗ್ರಾಮಗಳ ಮೂಲಕ ಹಾದು ಹೋಗುವ ವಾಹನಗಳು ಶ್ರೀರಂಗಪಟ್ಟಣ ಟೌನ್ ಪಶ್ಚಿಮವಾಹಿನಿ ಮೂಲಕ ಕೆ.ಆರ್.ಸಾಗರ ನಂತರ ಕೆ.ಆರ್.ಸಾಗರದಿಂದ ಅರಳಕುಪ್ಪೆ-ಎಲೆಕೆರೆ ಹ್ಯಾಂಡ್ಪೋಸ್ಟ್ ಮಾರ್ಗವಾಗಿ ಕೆ.ಆರ್.ಪೇಟೆ ಸಂಚರಿಸುವುದು.
ಬೆಂಗಳೂರು ಕಡೆಯಿಂದ ಮೈಸೂರಿಗೆ ಹೋಗುವ ಎಲ್ಲಾ ವಾಹನಗಳು ಮದ್ದೂರು ಮೂಲಕ ಮಳವಳ್ಳಿ ಮಾರ್ಗವಾಗಿ ಮೈಸೂರಿಗೆ ಸಂಚರಿಸುವುದು. ಮಂಡ್ಯ ಸಿಟಿ ಯಿಂದ ಹೊರಡುವ ವಾಹನಗಳನ್ನು ಮಂಡ್ಯ ನಗರದ ಸಂಜಯ ಸರ್ಕಲ್ ಮೂಲಕ ಕೊತ್ತತ್ತಿ -ಅರಕೆರೆ -ಬನ್ನೂರು ಮಾರ್ಗವಾಗಿ ಮೈಸೂರು ಕಡೆಗೆ ಸಂಚರಿಸುವುದು.
ಮಂಡ್ಯ ನಗರದಿಂದ ವಾಹನಗಳನ್ನು ಸಹ ಶ್ರೀರಂಗಪಟ್ಟಣದ ಕರಿಘಟ್ಟ ಕ್ರಾಸ್ ಮರಳಗಾಲ ಶಾಂತಿಕೊಪ್ಪಲು ಮಾರ್ಗವಾಗಿ ಮೈಸೂರು ಕಡೆಗೆ ಸಂಚರಿಸುವುದು.
ಪಾಂಡವಪುರ ಕಡೆಯಿಂದ ಮೈಸೂರಿಗೆ ಹೋಗುವ ಎಲ್ಲಾ ವಾಹನಗಳನ್ನು ಎಲೆಕೆರೆ ಹ್ಯಾಂಡ್ಪೋಸ್ಟ್ ಅರಳಕುಪ್ಪೆ -ಕೆ.ಆರ್.ಸಾಗರ -ಎಂ.ಎನ್ ಪಿ.ಎಂ ಸರ್ಕಲ್ ಮೂಲಕ ಮೈಸೂರಿಗೆ ಸಂಚರಿಸುವುದು. ಸಾರ್ವಜನಿಕರು ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು