ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು
ರಾಮನಗರ:ನ;12/21. ತಾಲೂಕಿನ ಕೂಟಗಲ್ ಬಳಿ ಇರುಳಿಗರಿಗೆ ಉಚಿತ ನಿವೇಶನ ನೀಡಲು ಮೀನಾ ಮೇಷ ಎಣಿಸುತ್ತಿದ್ದ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಏಕಾಏಕಿ ಧಾವಿಸಿ ಬಂದು ಕೂಟಗಲ್ ಸರ್ವೆ ಸಂಖ್ಯೆ 94 ರಲ್ಲಿ 2 ಎಕರೆ ಭೂಮಿಯನ್ನು ಸರ್ವೆ ಮಾಡಿ ಗುರುತಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ಭೂಮಿ ಮಟ್ಟ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ಇರುಳಿಗ ಕುಟುಂಬಗಳಿಗೆ ನಿವೇಶನ ವಿಂಗಡಿಸಿಕೊಡುವುದಾಗಿ ಹೇಳಿದ್ದಾರೆ.
ಸಾವಿಗಾಗಿ ಕಾಯುತ್ತಿದ್ದರೇ?
ಹೀಗೆ ಅಧಿಕಾರಿಗಳಿಗೆ ಇದ್ದಕ್ಕಿದ್ದ ಹಾಗೆ ಜ್ಞಾನೋದಯವಾಗಲು ಕಾರಣವಿದೆ. ಕೂಟಗಲ್ ಗ್ರಾಮದ ಬಳಿಯ ಇರುಳಿಗ ಕುಟುಂಬಗಳ ಪೈಕಿ ವಾಸವಿದ್ದ ರತ್ನಗಿರಯ್ಯ (50) ಮೃತಪಟ್ಟಿದ್ದಾರೆ. ಮಳೆ ನೀರು ಗುಡಿಸಲುಗಳ ಮೂಲಕವೇ ಹರಿಯುವುದರಿಂದ ಬುಧವಾರ ರಾತ್ರಿ ಗುಡಿಸಲಿನಲ್ಲಿ ತೊಟ್ಟಿಲು ರೀತಿ ನಿರ್ಮಿಸಿಕೊಂಡು ಮಲಗಿದ್ದಾರೆ. ಆದರೆ ರಾತ್ರಿ ನೆಲಕ್ಕುರುಳಿ ನಿಧನ ಹೊಂದಿದ್ದಾರೆ. ಈ ಧಾರುಣ ಸಾವಿಗೆ ರೋಸೆತ್ತ ಇರುಳಿಗರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶವ ಇಟ್ಟು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ತಾಲೂಕು ಆಡಳಿತದ ಅಧಿಕಾರಿಗಳು ಜಿನುಗುತ್ತಿರುವ ಮಳೆ ನಡುವೆಯು ಕೂಟಗಲ್ಗೆ ಧಾವಿಸಿ ಸರ್ವೆ ಸಂಖ್ಯೆ 94 ರಲ್ಲಿ 2 ಎಕರೆ ಭೂಮಿ ಗುರುತಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ಎಕರೆ ಭೂಮಿಯನ್ನು ಸ್ವಚ್ಚ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ಈ ಭೂಮಿಯನ್ನು ಇರುಳಿಗ ಕುಟುಂಬಗಳಿಗೆ ವಿತರಿಸುವುದಾಗಿ ತಿಳಿಸಿದ್ದಾರೆ.
ಅಧಿಕಾರಿಗಳು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ರತ್ನಗಿರಯ್ಯ ಅವರ ಅಂತ್ಯ ಸಂಸ್ಕಾರವನ್ನು ಶುಕ್ರವಾರ ಬೆಳಿಗ್ಗೆ ನಡೆಸುವುದಾಗಿ ಇರುಳಿಗ ಕುಟುಂಬಗಳ ಪರವಾಗಿ ಸಂಶೋಧನಾ ವಿದ್ಯಾರ್ಥಿ ಎಸ್.ರುದ್ರೇಶ್ವರ, ಇರುಳಿಗ ಪ್ರಮುಖರಾದ ಕೃಷ್ಣಮೂರ್ತಿ, ಕೆ.ವಿ.ಕೃಷ್ಣಮೂರ್ತಿ, ಎಸ್.ರಾಜು ರವರು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು