ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು
ಮೈಸೂರು: ಮೇಲುಕೋಟೆ. ನಲವತ್ತೈದು ವರ್ಷಗಳ ಹಿಂದೆ ಮೈಸೂರಿನ ಹೆಬ್ಬಾಳ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿ ನೆಲೆಸಿದ್ದ ಯುವಕ-ಯುವತಿ ಪ್ರೀತಿಸಿ ಮದುವೆಯಾಗಬೇಕು ಎಂದು ಹಂಬಲಿಸುತ್ತಿದ್ದಾಗ, ಯುವತಿ ಮನೆಯವರು ಒಪ್ಪದೆ ಬೇರೋಬ್ಬನ ಜೊತೆ ಯುವತಿಗೆ ಮದುವೆ ಮಾಡಿಬಿಟ್ಟರು. ಆದರೆ ಇಪ್ಪತ್ತು ವರ್ಷದ ಯುವಕ ಮಾತ್ರ ಆಕೆಯ ನೆನಪಲ್ಲೇ ಅಮರ ಪ್ರೇಮಿಯಾಗಿಯೇ ಉಳಿದುಬಿಟ್ಟ. ಚಿಕ್ಕಣ್ಣ ಮತ್ತು ಜಯಮ್ಮ ಎಂಬ ಅಮರ ಪ್ರೇಮಿಗಳಿಗೆ ಪ್ರೇಮದೇವತೆಗಳು ನಿರಾಸೆ ಮಾಡಲಿಲ್ಲ. ತಡವಾಗಿ ತಥಾಸ್ತು ಎಂದಿದ್ದರಿಂದ ಇಂದು ಅರವತ್ತೈದರ ಇಳಿ ವಯಸ್ಸಿನಲ್ಲಿ ಹಸೆಮಣೆ ಏರಿ ಪ್ರೀತಿಗೆ ಅರ್ಥ ಕೊಟ್ಟಿದ್ದಾರೆ.
ಅರಮನೆ ನಗರಿ ಎಂದೇ ಹೆಸರಾದ ಸಾಂಸ್ಕೃತಿಕ ನಗರ ಮೈಸೂರಿನ ಹೆಬ್ಬಾಳ ದಲ್ಲಿ ಕಳೆದ ನಲವತ್ತೈದು ವರ್ಷಗಳ ಹಿಂದೆ ಇಪ್ಪತ್ತು ವರ್ಷಗಳ ಯುವಕ ಚಿಕ್ಕಣ್ಣ ಮತ್ತು ಜಯಮ್ಮ ಗಾಢವಾಗಿ ಪ್ರೀತಿಸುತ್ತಾರೆ. ಜಯಮ್ಮ ನ ಮನೆಯವರು ಚಿಕ್ಕಣ್ಣ ನಿಗೆ ಮದುವೆ ಮಾಡಿಕೊಡಲು ಸುತರಾಂ ಒಪ್ಪದೆ, ಬೇರೊಂದು ಗಂಡಿಗೆ ಮದುವೆ ಮಾಡಿಬಿಡುತ್ತಾರೆ. ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಚಿಕ್ಕಣ್ಣ ಮದುವೆಯಾಗದೆ ಅಮರ ಪ್ರೇಮಿಯಾಗಿಯೇ ಉಳಿದುಬಿಡುತ್ತಾನೆ. ಅದು ಬರೋಬ್ಬರಿ ನಲವತ್ತೈದು ವರ್ಷಗಳ ಕಾಲ.
ಜಯಮ್ಮ ಮದುವೆಯಾಗಿ ನಲವತ್ತೈದು ವರ್ಷಗಳು ಕಳೆದರೂ ಆಕೆಗೆ ಮಕ್ಕಳ ಭಾಗ್ಯ ದೊರೆಯಲಿಲ್ಲ. ಇತ್ತೀಚೆಗೆ ಆಕೆಯ ಪತಿ ಪರಲೋಕಕ್ಕೆ ಪಯಣ ಬೆಳೆಸಿಬಿಟ್ಟ. ಅತ್ತ ಪತಿಯೂ ಇಲ್ಲದೆ, ಇತ್ತ ಮಕ್ಕಳು ಇಲ್ಲದೆ ಜಯಮ್ಮ ಒಬ್ವಂಟಿಯಾಗಿ ಜೀವನ ಕಳೆಯಬೇಕಾಯಿತು. ಇದನ್ನೆಲ್ಲಾ ಕೇಳಿ, ನೋಡಿ ತಿಳಿದುಕೊಂಡ ಅಮರಪ್ರೇಮಿ ಚಿಕ್ಕಣ್ಣ ತನ್ನ ಕುಟುಂಬದವರ ಜೊತೆ ಮಾತನಾಡಿ ಆಕೆಯ ಮನವೊಲಿಸುತ್ತಾನೆ. ಕುಟುಂಬದವರೊಡಗೂಡಿ ತನ್ನ ಆರಾಧ್ಯದೈವ ಮೇಲುಕೋಟೆ ಚಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ, ಶ್ರೀನಿವಾಸ ಗುರೂಜಿಯವರ ಆಶ್ರಮದಲ್ಲಿ ಹಸೆಮಣೆ ಏರುವ ಮೂಲಕ ಪ್ರೇಮಕ್ಕೆ ಹೊಸಭಾಷ್ಯ ಬರೆದಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು