ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ
ನಾವು ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ನಾವೂ ಸಹ ಈ ಹಿಂದಿನ ಅವಧಿಯಲ್ಲೂ ಸಹ ಭ್ರಷ್ಟಾಚಾರ ಮಾಡಿಲ್ಲ. ಮತದಾರರು ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಉಳಿಸುವುದರ ಜೊತೆಗೆ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ. ನಮ್ಮ ತಂಡದಲ್ಲಿನ ಎಲ್ಲಾ ಅಭ್ಯರ್ಥಿಗಳಿಗೂ ಮತ ನೀಡುವ ಮೂಲಕ ಮತದಾರರು ಆಶೀರ್ವದಿಸಬೇಕೆಂದು ಅಭ್ಯರ್ಥಿ ಅ ದೇವೇಗೌಡರು ಮನವಿ ಮಾಡಿದರು.
ಅವರು ಇಂದು ಸುಣ್ಣಘಟ್ಟ ಗ್ರಾಮದ ಜಮೀನೊಂದರಲ್ಲಿ ಕೆ ಹೆಚ್ ರಾಮಯ್ಯ ತಂಡದವರು ಹಮ್ಮಿಕೊಂಡಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿಣಿ ಸಮಿತಿ ಚುನಾವಣೆಯಲ್ಲಿ ಮತದಾರರನ್ನು ಕುರಿತು ಮಾತನಾಡಿದರು.
ತಂಡದ ಮತ್ತೊಬ್ಬ ನಾಯಕ ಜಯಮುತ್ತು ಮಾತನಾಡಿ ನಾನು ಯಾವುದೇ ರೀತಿಯಲ್ಲೂ ಈ ಹಿಂದೆ ಭ್ರಷ್ಟಾಚಾರ ಮಾಡಿಲ್ಲ. ನಾನು ಒಂದು ತಂಡದಲ್ಲಿದ್ದೆ. ಅಲ್ಲೂ ಕುದುರೆ ವ್ಯಾಪಾರ ನಡೆಯುತ್ತಿರುವುದರಿಂದ ಅ ದೇವೆಗೌಡ ಮತ್ತು ಸ್ನೇಹಿತರ ತಂಡ ಕಟ್ಟಿಕೊಂಡು ಸ್ಪರ್ಧಿಸಿದ್ದೇನೆ. ನನಗೆ ಮಾತ್ರ ಮತ ನೀಡಬೇಡಿ. ಇಡೀ ನನ್ನ ತಂಡಕ್ಕೆ ಮತನೀಡಿ. ತಂಡವನ್ನು ಗೆಲ್ಲಿಸಿದರೆ ಮಾತ್ರ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ. ಇಡೀ ಜಿಲ್ಲೆಯಲ್ಲಿ ಸಮುದಾಯದ ಕೆಲಸವನ್ನು ಮಾಡುತ್ತೇನೆ ಎಂದರು.
ನನಗೆ ಹಣ ಮಾಡುವ ಉದ್ದೇಶವಿಲ್ಲಾ, ನನಗೆ ಒಂದು ಪಕ್ಷದಲ್ಲಿ ತಾಲ್ಲೂಕು ಅಧ್ಯಕ್ಷ ಆಗಿದ್ದೇನೆ. ಆದರೆ ಸಮುದಾಯದ ವಿಷಯಕ್ಕೆ ಬಂದಾಗ ಸಮಸ್ಯೆ ಹೇಳಿಕೊಂಡು ಬಂದವರೆಲ್ಲರಿಗೂ ವೈಯುಕ್ತಿಕವಾಗಿ ಸಹಾಯ ಹಸ್ತ ಚಾಚಿದ್ದೇನೆ. ಎಲ್ಲರನ್ನೂ ಭೇಟಿ ಮಾಡಲು ಸಾಧ್ಯವಾಗದಿರುವುದರಿಂದ ನಮ್ಮ ತಂಡಕ್ಕೆ ಸಂಪೂರ್ಣ ಮತನೀಡಿ ಎಂದು ಮನವಿ ಮಾಡಿದರು. ಮುಂದಿನ ಅವಧಿಯಲ್ಲಿ ಇಡೀ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮಾಡಲ
ಶ್ರಮಿಸುತ್ತೇನೆ ಎಂದು ಅವರು ನೆರೆದಿದ್ದ ಮತದಾರರಲ್ಲಿ ಮನವಿ ಮಾಡಿದರು.
ತಂಡದಲ್ಲಿರುವ ಅಭ್ಯರ್ಥಿಗಳಾದ ಚಂದ್ರಶೇಖರ್ ಕೆ ಟಿ. ಬಿ ಟಿ ಜವರೇಗೌಡ, ದರ್ಶನ್, ಸಿಕೆ. ಎಂ ಪುಟ್ಟಸ್ವಾಮಿ, ಪ್ರಸಾದ್ ಪಿವಿಎಸ್, ಎಲ್ ಬಾಲರಾಜು. ಎಸ್ ಮಂಜುನಾಥ್, ಲಕ್ಷ್ಮಣ ಬಿ ಎಸ್. ಸೊಣ್ಣೇಗೌಡ ಎನ್ ಎಂ. ಸೋಮಶೇಖರ ಎ ಸಿ. ಹನುಮಂತಗೌಡ, ಡಿ ಹನುಮಂತಯ್ಯ, ಹರೀಶ್ ಎನ್, ರವರು ತಮ್ಮ ಕ್ರಮ ಸಂಖ್ಯೆ ಮತ್ತು ಪೂರ್ವಾಪರ ಪರಿಚಯಿಸಿಕೊಂಡು ಮತದಾರರಲ್ಲಿ ಮತಯಾಚನೆ ಮಾಡಿದರು.
ತಾಲ್ಲೂಕಿನಾದ್ಯಂತ ಐದು ಸಾವಿರಕ್ಕೂ ಹೆಚ್ಚು ಮಂದಿ ಮತದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಎಲ್ಲಾ ಮತದಾರರಿಗೂ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು