Tel: 7676775624 | Mail: info@yellowandred.in

Language: EN KAN

    Follow us :


ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ: ಬಸವರಾಜ ಬೊಮ್ಮಾಯಿ

Posted date: 03 Jan, 2022

Powered by:     Yellow and Red

ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ: ಬಸವರಾಜ ಬೊಮ್ಮಾಯಿ

ರಾಮನಗರ, ಜನವರಿ 3: ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.


ಅವರು ಇಂದು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.


ನಿಗದಿತ ಸಮಯದಲ್ಲಿ ಯೋಜನೆಗಳನ್ನು ಮುಗಿಸದೇ ಇದ್ದಲ್ಲಿ ಯೋಜನೆಯ ಮೊತ್ತ  ಹೆಚ್ಚಾಗುತ್ತದೆ. ಕಾಲಮಿತಿಯೊಳಗೆ ಪೂರ್ಣಗೊಳ್ಳುವ ಯೋಜನೆಗಳನ್ನು ಹಾಕಿಕೊಳ್ಳಬೇಕು. ಹಣ ಮತ್ತು ಸಮಯವನ್ನು ಸಂಪೂರ್ಣವಾಗಿ ಒದಗಿಸಿ ಯೋಜನೆಗಳನ್ನು ಪೂರ್ಣಗೊಳಿಸಿದಾಗ ಜನರಿಗೆ ಮುಟ್ಟಿಸಲು ಸಾಧ್ಯವಿದೆ ಎಂದರು.


*ಜಿಟಿಟಿಸಿ ಉನ್ನತೀಕರಣ*

ಜಿಟಿಟಿಸಿ - ಬಹಳ ಉಪಯುಕ್ತವಾಗಿರುವ ತಾಂತ್ರಿಕ ಸಂಸ್ಥೆ. ಇಲ್ಲಿ ಪ್ರಮಾಣ ಪತ್ರ ಪಡೆದರೆ ಶೇ 100 ರಷ್ಟು ಕೆಲಸ ಸಿಗುವುದು ಖಾತ್ರಿ. ಆ ವಿಶ್ವಾಸಾರ್ಹತೆ ಜಿಟಿಟಿಸಿಗಿದೆ. ತಾವು ಖುದ್ದು ಇಂಜಿನಿಯರಿಂಗ್  ಕಲಿತ ನಂತರ 6 ತಿಂಗಳ ಕಾಲ ಜಿಟಿಟಿಸಿಯಲ್ಲಿ ತರಬೇತಿ ಪಡೆದಿದ್ದು ಹಾಗೂ ಟಾಟಾ ಮೋಟಾರ್ಸ್ ಸಂಸ್ಥೆಯಲ್ಲಿ ಉದ್ಯೋಗ ದೊರಕಿದ್ದ ಬಗ್ಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಮರಿಸಿದರು. ಈ ಭಾಗದ ಮಕ್ಕಳ ಬದುಕಿನಲ್ಲಿಯೂ ಜಿಟಿಟಿಸಿ ಯಶಸ್ಸಿನ ಮೆಟ್ಟಿಲಾಗಲಿ ಎಂದರು.


ಸರ್ಕಾರ 50 ಕೋಟಿ ರೂ.ಗಳಿಗಿಂತ ಹೆಚ್ಚು ಅನುದಾನದಲ್ಲಿ ಜಿಟಿಟಿಸಿಗಳನ್ನು ಉನ್ನತೀಕರಿಸಲಾಗಿದೆ. ಹಿಂದುಳಿದ ತಾಲ್ಲೂಕುಗಳಲ್ಲಿಯೂ ಈ ಸಂಸ್ಥೆಗಳನ್ನು ತೆರೆಯಬೇಕು.  ಕಳೆದ 2 ವರ್ಷಗಳಲ್ಲಿ ಪ್ರತಿ ಐಟಿಐಗೆ ತಲಾ 30 ಕೊಟಿ ರೂ.ಗಳಂತೆ 150 ಐಟಿಐಗಳನ್ನು ಸಹ ಸರ್ಕಾರ ಟಾಟಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಉನ್ನತೀಕರಿಸಿದೆ. 4,000 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚಮಾಡಿದೆ. ಸಮಕಾಲೀನ ಉದ್ಯೋಗಕ್ಕೆ ಯುವಕರನ್ನು ತಯಾರು ಮಾಡಲು ಉನ್ನತೀಕರಿಸಿದ ಐಟಿಐಗಳು ಸಹಕಾರಿಯಾಗಲಿವೆ. ಇಡೀ ದೇಶದಲ್ಲಿ ಇದನ್ನು ಸಾಧಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂದರು.

ಎಲ್ಲರಿಗೂ ಉದ್ಯೋಗ ಕಾರ್ಯಕ್ರಮವನ್ನು ಪ್ರತಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಅರ್ಹತೆಯನುಗುಣವಾಗಿ ಯುವಕರಿಗೆ ಉದ್ಯೋಗ ದೊರೆಯಲು ತರಬೇತಿ, ಅವಕಾಶಗಳನ್ನು, ವ್ಯಕ್ತಿತ್ವ ವಿಕಸನ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದರು.  


*ನೀರಾವರಿ ಯೋಜನೆಗಳು:*

ಮಂಚನಬೆಲೆಯಿಂದ  ಈ ಭಾಗದ 3 ತಾಲ್ಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗಳಿಗೆ ಬೇಡಿಕೆ ಇದೆ. ಜಲ ಜೀವನ್ ಮಿಷನ್ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸು. ಪ್ರತಿಯೊಂದು ಗ್ರಾಮದ ಪ್ರತಿಯೊಂದು ಮನೆಗೂ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿ ಸಾಕಾರಗೊಳಿಸಲು ಹಣಕಾಸಿನ ನೆರವನ್ನು ನೀಡಿದ್ದಾರೆ. ಇದು ಮಾಡಲು ಕೇವಲ ಒಬ್ಬ ಮುತ್ಸದ್ದಿಗೆ ಮಾತ್ರ ಸಾಧ್ಯ ಎಂದರು.


ಮುಂದಿನ ಜನಾಂಗಕ್ಕೆ ಅನುಕೂಲವಾಗುವಂತಹ ಯೋಜನೆಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಮುಗಿಸಬೇಕೆನ್ನುವ ದಿಟ್ಟ ತೀರ್ಮಾನವನ್ನು ಪ್ರಧಾನಿಗಳು ಮಾಡಿದ್ದಾರೆ.  ಒಂದೂವರೆ ವರ್ಷದಲ್ಲಿ ನೀರು ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆಯಿತ್ತರು. ಜಲಜೀವನ್ ಮಿಷನ್ ಯೋಜನೆಯನ್ನು ಯುದ್ದೋಪಾದಿಯಲ್ಲಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.


ಹೇಮಾವತಿ ಜಲಾಶಯದಿಂದ ನೀರಿನ ಹಂಚಿಕೆ, ಟಿಬಿಸಿ ತುಮಕೂರು, ನಾಗಮಂಗಲ ಮತ್ತು ಹಾಸನದ ಬ್ರಾಂಚ್ ಕಾಲುವೆಗಳ ಬಗ್ಗೆ ಮಾಹಿತಿ ಇದ್ದು, ನೀರಿನ ಹಂಚಿಕೆ ಬಗ್ಗೆ ಅಮೂಲಾಗ್ರವಾದ ನಿರ್ಣಯಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹಲವಾರು ಪ್ರಯತ್ನಗಳಾಗಿವೆ. ಇವುಗಳ ಪ್ರಗತಿ ಪರಿಶೀಲನೆ ಮಾಡಿ ಈ ಯೋಜನೆಗಳ ಕಟ್ಟಕಡೆಯ ತಾಲ್ಲೂಕುಗಳ ಸಮುದಾಯಗಳನ್ನು ಮುಟ್ಟಿಸಲು ಕಾಯಕಲ್ಪವನ್ನು ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆಯಿತ್ತರು.


ಬಾನಂದೂರು, ವೀರಾಪುರ ಮುಂತಾದ ಪವಿತ್ರ ಸ್ಥಳಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ರಾಮನಗರ ವಿಶಿಷ್ಟ ಜಿಲ್ಲೆ.  ಜಿಲ್ಲೆಯ ಅಭಿವೃದ್ಧಿಗೆ ಕಂಕಣ ಬದ್ಧನಾಗಿ ಕೆಲಸ ಮಾಡುವುದಾಗಿ ತಿಳಿಸಿದರು.  


 ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಮಾಗಡಿ ಶಾಸಕ ಮಂಜುನಾಥ್ ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑