ಇಪ್ಪತ್ತೈದು ವರ್ಷಗಳಲ್ಲಿ ಆಗದ ಕೆಲಸಗಳು ಮೂರು ವರ್ಷಗಳಲ್ಲಿ ಆಗಿವೆ. ಹೆಚ್ಡಿಕೆ
ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ 25 ವರ್ಷದಲ್ಲಿ ಆಗದ ಕೆಲಸಗಳು ಮೂರು ವರ್ಷದಲ್ಲಿ ನಾನು ಶಾಸಕನಾದ ನಂತರ ಆಗಿವೆ, ಆದರೆ ಈಗ ಕೆಲವರು ನಮ್ಮದೇ ಕೆಲಸ ಎಂದು ಸೌಂಡ್ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಂಎಂ ಎಚ್.ಡಿ. ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಟಾಂಗ್ ನೀಡಿದರು.
ಚನ್ನಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ಕಾವಲುಗೋಪುರವನ್ನು ಉದ್ಘಾಟಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಮಾಕಳಿ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆ ಮಾಡಿದಾಗ ಯಾರು ಚರ್ಚೆ ಮಾಡಿಲ್ಲ. ಇದೀಗ ನಾವೇ ಮಾಡಿದ್ದು ಎನ್ನುತ್ತಿದ್ದಾರೆ. ಚನ್ನಪಟ್ಟಣ ವಿಚಾರದಲ್ಲಿ ನಾವು ಅಭಿವೃದ್ದಿ ಮಾಡುತ್ತೇವೆ ಎಂದು ಕಣ್ಣು ಒರೆಸುವುದು ಬೇಡವೆಂದರು.
ಚನ್ನಪಟ್ಟಣ ಕ್ಷೇತ್ರಕ್ಕೆ ದೇವೇಗೌಡ ಕುಟುಂಬದ ಕೊಡುಗೆ ಅಪಾರವಿದೆ. ಯಾರೇ ಮರಳು ಮಾಡಿದರು ಜನ ಸೊಪ್ಪು ಹಾಕುವುದಿಲ್ಲ. ಇದೀಗ ದುಡ್ಡು ಕೊಟ್ಟು ಕೆಲವರನ್ನು ಕೊಂಡುಕೊಳ್ಳಲು ಹೊರಟಿದ್ದಾರೆ. ಶಾಸಕರುಗಳನ್ನು ಕೊಂಡುಕೊಂಡಿದ್ದು ಆಯ್ತು
ಇದೀಗ ಚನ್ನಪಟ್ಟಣದಲ್ಲಿ ಮುಖಂಡರನ್ನ ಕೊಂಡುಕೊಳ್ಳಲು ಹೊರಟಿದ್ದಾರೆ. ನಮ್ಮ ಪಕ್ಷದ ಕೆಲ ಲೀಡರ್ ಗಳು ಸಾಲ ಮಾಡಿಕೊಂಡಿದ್ದರಂತೆ. ಅವರಿಗೆ ಇದೀಗ ದುಡ್ಡು ಕೊಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಮತದಾರರನ್ನ ಖರೀದಿ ಮಾಡಲು ಸಾಧ್ಯವಿಲ್ಲ. ನನ್ನ ಹತ್ತಿರ ಬರುವವರು ಅತ್ಯಂತ ಸಂಕಷ್ಟಕ್ಕೆ ಒಳಗಾದವರು ಮಾತ್ರ ಬರುತ್ತಾರೆ. ಚನ್ನಪಟ್ಟಣದವರು ಮಾತ್ರವಲ್ಲದೇ ಇಡೀ ರಾಜ್ಯದಲ್ಲಿ ಕಾರ್ಯಕರ್ತರನ್ನ ಸೆಳೆಯುವ ಪ್ರಕ್ರಿಯೆ ನಡೆದಿದೆ. ನಾನು ಯಾವುದಕ್ಕೂ ಎದೆಗುಂದಿಲ್ಲವೆಂದರು.
ಚನ್ನಪಟ್ಟಣ ಕ್ಷೇತ್ರ ಏನು, ಅದರ ನಾಡಿಮಿಡಿತ ಏನು ಎಂಬುದು ಗೊತ್ತಿದೆ. ರಾಮನಗರ ಜಿಲ್ಲೆ ದೇವೇಗೌಡರ ಕುಟುಂಬದ ಬಾಂಧವ್ಯ 50 ವರ್ಷದಿಂದ ಇದ್ದು, ದೇವೇಗೌಡರು ವಿರೋಧ ಪಕ್ಷದ ನಾಯಕರು ಇದ್ದಾಗಲೇ ಚನ್ನಪಟ್ಟಣ ಜನ ಹೃದಯದಲ್ಲಿ ಇಟ್ಟುಕೊಂಡಿದ್ದರು. ಅಮಿತ್ ಶಾ, ನಡ್ಡಾರನ್ನ ಕರೆದುಕೊಂಡು ಬಂದು ಕಾರ್ಯಕ್ರಮ ಮಾಡಿ ಮುಖಂಡರನ್ನು ಸೇರಿಸಿಕೊಳ್ಳಲಿ. ನನ್ನ ಕಾರ್ಯಕರ್ಯರು ಬಿಗಿ ಇದ್ದಾರೆ ಎಂದರು.
*ಸಿದ್ದು ವಿರುದ್ಧ ವಾಗ್ಧಾಳಿ:*
ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಏಕವಚನ ಪದ ಪ್ರಯೋಗ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎಚ್ಡಿಕೆ, ಸಿದ್ದರಾಮಯ್ಯ ದೊಡ್ಡ ಮನುಷ್ಯ. ದೇವೇಗೌಡರನ್ನು ಬೆಳೆಸಿದವರು ಅವರೇ ಅಲ್ಲವೇ. ಜನತಾದಳಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎನ್ನುತ್ತಾರೆ. ನಾನು ಅಧ್ಯಕ್ಷನಾಗಿದ್ದಾಗ 58 ಸೀಟ್ ಗೆದ್ದೆ ಎನ್ನುತ್ತಾರೆ. ಸಿದ್ದರಾಮಯ್ಯ ನೋಡಿ ಗೆದ್ದಿದ್ದಾ ಎಂದು ಪ್ರಶ್ನಿಸಿದ ಅವರು, 58 ಸೀಟ್ ಗೆಲ್ಲಲು ನನ್ನದು ಪಾತ್ರ ಇದೆ. ದೇವೇಗೌಡರು ಬಡ್ಡಿಗೆ ಸಾಲ ತಂದು ಚುನಾವಣೆ ಹೇಗೆ ನಡೆಸಿದ್ದರು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಸಿದ್ದರಾಮಯ್ಯ ನವರಿಗೆ ಗೊತ್ತಿದೀಯಾ ಎಂದು ಪ್ರಶ್ನಿಸಿದರು.
ಅವರ ನಾಯಕತ್ವ ಸರಿ ಇದ್ದಿದ್ದರೆ ಅವತ್ತು 50 ಜನ ಶಾಸಕರು ಯಾಕೆ ನನ್ನ ನಾಯಕತ್ವಕ್ಕೆ ನಂಬಿಕೊಂಡು ಬಂದರು. ಎಲ್ಲ ಕಾಲದಲ್ಲಿ ಎಲ್ಲರದ್ದೂ ನಡೆಯಲ್ಲ. ಸಿದ್ದರಾಮಯ್ಯನವರಿಗೆ ಜೆಡಿಎಸ್ ಹಾಗೂ ದೇವೇಗೌಡರ ಮೇಲೆ ಇರುವ ಆಕ್ರೋಶ ಇದೀಯಲ್ಲ ಅದನ್ನ ಕಾಣಬಹುದು. ಹೃದಯದಲ್ಲಿ ಇರುವ ಕಿಚ್ಚನ್ನ ಕಾಣಬಹುದು. ನನಗೂ ಸಿದ್ದರಾಮಯ್ಯನವರಿಗೂ ರಾಜಕೀಯದಲ್ಲಿಅವಶ್ಯಕತೆ ಕನೆಕ್ಷನ್ ಇಲ್ಲ, ಅವರು ನಮ್ಮ ಪಕ್ಷದಲ್ಲಿ ಇದ್ದಗಲೂ ಅವರ ಆತ್ಮೀಯತೆ ಇರಲಿಲ್ಲ. ನನ್ನ ದುಡ್ಡು ಖರ್ಚು ಮಾಡಿ ಸಭೆ ಮಾಡಿದಾಗ ಭಾಷಣ ಮಾಡಲು ಬರುತ್ತಿದ್ದರು. ಅವರಿಂದ ಸರ್ಟೀಫಿಕೆಟ್ ಪಡೆಯುವ ಅವಶ್ಯಕತೆ ನನಗಿಲ್ಲವೆಂದರು.
ಯಾರೋ ಒಬ್ಬ ಮಂತ್ರಿಯ ರಾಜೀನಾಮೆಗಾಗಿ ಇಷ್ಟೊಂದು ಪ್ರತಿಷ್ಠೆ ಮಾಡಿ ಸದನದ ಕಲಾಪ ವ್ಯರ್ಥ ಮಾಡುತ್ತಿದ್ದಾರೆ. ಸಮಸ್ಯೆಗಳು ನೂರಾರು ಇವೆ. ಎಲ್ಲಿಂದ ಚರ್ಚೆ ಮಾಡುವುದು. ಈಶ್ವರಪ್ಪ ಹೇಳಿಕೆಯನ್ನ ನಾನು ಸಮರ್ಥನೆ ಮಾಡುತ್ತಿಲ್ಲ. ನಾನು ಯಾರ ಪರವಾಗಿಯೂ ಇಲ್ಲ, ವಿರೋಧವಾಗಿಯೂ ಇಲ್ಲ. ಈಶ್ವರಪ್ಪನವರ ಮಂತ್ರಿ ಸ್ಥಾನದ ಬಗ್ಗೆ ಅವರು ಯಾಕೆ ಕೇಳುತ್ತಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಅವರು ಯಾವ ರೀತಿ ಹೇಳಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನ ನೋಡುತ್ತಿದ್ದೇವೆ. ಇವತ್ತಿನ ಪರಿಸ್ಥಿತಿಯಲ್ಲಿ ಈಶ್ವರಪ್ಪ ಅವರು ಸ್ವೀಡ್ ಆಗಿದ್ದಾರೆ. ಬಿಜೆಪಿ ಅಂಗ ಪಕ್ಷಗಳು ಯಾವ ರೀತಿ ಹೊರಟಿದ್ದಾರೆ. ಅದಕ್ಕೆ ಜನರು ಸ್ವಂದಿಸುತ್ತಿದ್ದಾರೆ. ಆದರೆ, ಇದು ಎಲ್ಲ ಸಮಯದಲ್ಲೂ ನಡೆಯುವುದಿಲ್ಲ. ಆ ಗುಂಗಿನಲ್ಲಿ ಹೇಳಿದ್ದಾರೆ ಎಂದರು.
ಅದನ್ನ ಕಾಂಗ್ರೆಸ್ ನವರು ಬೇರೆ ರೀತಿ ತೆಗೆದುಕೊಂಡಿದ್ದಾರೆ. ಇದರಲ್ಲಿ ಅರ್ಥವಿಲ್ಲ ಬಡ ಜನರ ದುಡ್ಡು ವ್ಯರ್ಥವಾಗುತ್ತಿದೆ. ರಾಷ್ಟ್ರಧ್ವಜವನ್ನ ಯಾರು ಮುಟ್ಟಲು ಆಗುವುದಿಲ್ಲ. ಕಳೆದ ಏಳೆಂಟು ವರ್ಷಗಳ ಫಲಿತಾಂಶದಿಂದ ಬಿಜೆಪಿ ಅವರಿಗೆ ದುರಂಕಾರ ನೆತ್ತಿಗೆ ಏರಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಯಾರು ಅಲುಗಾಡಿಸಲು ಸಾಧ್ಯವಿಲ್ಲವೆಂದು ಹೇಳಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು