Tel: 7676775624 | Mail: info@yellowandred.in

Language: EN KAN

    Follow us :


ಬುಕ್ಕಸಾಗರ ಗ್ರಾಮದ ಬಳಿ ದರೋಡೆ ಮಾಡಿದ ಕಳ್ಳರನ್ನು ಬಂಧಿಸಿದ ಅಕ್ಕೂರು ಪೋಲಿಸರು

Posted date: 27 Mar, 2023

Powered by:     Yellow and Red

ಚನ್ನಪಟ್ಟಣ, ಮಾ.20:  ಕೆಲ ದಿನಗಳ 

ಹಿಂದೆ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ಬುಕ್ಕಸಾಗರದ 

ಬಳಿ ನಡೆದ ದರೋಡೆ ಪ್ರಕರಣವನ್ನು ಬೇಧಿಸಿದ ಗ್ರಾಮಾಂತರ 

ವೃತ್ತ ನಿರೀಕ್ಷಕರ ತಂಡ ಐದು ಮಂದಿ ಹೈನಾತಿ ಆರೋಪಿಗಳನ್ನು 

ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪೊಲೀಸರ ಬಂಧನಕ್ಕೆ ಒಳಗಾಗಿರುವ ಹೈನಾತಿ 

ದರೋಡೆಕೋರರನ್ನು ಅಕ್ಕೂರಿನ ಆಟೋಚಾಲಕ ಆನಂದ್ 

(37)), ಎಸ್.ಎಂ.ಹಳ್ಳಿಯ ಆಟೋಚಾಲಕ ನಾಗ ಆಲಿಯಾಸ್ 

ಸತ್ತಾರ್ (35), ಚನ್ನಪಟ್ಟಣದ ನಿವಾಸಿಗಳಾದ ನರಸಿಂಹ 

(34),ವಿಷ್ಣು (34), ರೇಣುಕುಮಾರ್ (40) ಬಂಧಿತರಾಗಿದ್ದಾರೆ.


ಈ ಐದುಮಂದಿ ದರೋಡೆಕೋರರು ಬುಕ್ಕಸಾಗರದ 

ಬಳಿ ನಗರದ ಎ ಜಿ ಸ್ವಾಮಿ (ಎಜಿಎಸ್‍)ಗೆ ಸೇರಿದ ಕೋಳಿ ಸರಬರಾಜು 

ಮಾಡಿದ ಹಣವನ್ನು ಸಂಗ್ರಹಣೆ ಮಾಡಿಕೊಂಡು ಮಾರುತಿ 

ಓಮ್ನಿಯಲ್ಲಿ ಬರುವಾಗ ವಾಹನವನ್ನು ಅಡ್ಡಹಾಕಿ, ಕಾರಿನಲ್ಲಿದ್ದ 

ಚಾಲಕ ಹಾಗೂ ರೈಟರ್ ಗೆ ಕಣ್ಣಿಗೆ ಖಾರದಪುಡಿ ಎರಚಿ ಹಾಗೂ 

ಮಾರಕಾಯುಧಗಳಿಂದ ಹಲ್ಲೆ ನಡೆಸಿ, ರೈಟರ್ ಕೈಯಲ್ಲಿದ್ದ 

ಲಕ್ಷಾಂತರರೂ ಹಣವನ್ನು ಕಿತ್ತು ಕತ್ತಲೆಯಲ್ಲಿ ಪರಾರಿಯಾಗಿದ್ದರು.


ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 

ದೂರು ದಾಖಲಾಗಿತ್ತು, ದೂರು ದಾಖಲಿಸಿಕೊಂಡ ಗ್ರಾಮಾಂತರ 

ವೃತ್ತ ನಿರೀಕ್ಷಕ ಟಿ ಟಿ ಕೃಷ್ಣಪ್ಪ ತಮ್ಮದೇ ತಂಡವನ್ನು ಕಟ್ಟಿಕೊಂಡು 

ದರೋಡೆಕೋರರ ಬೇಟೆಗೆ ಬಲೆ ಬೀಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‍ರೆಡ್ಡಿ, ತಾಲ್ಲೂಕು 

ಪೊಲೀಸ್ ಉಪವಿಭಾಗಾಧಿಕಾರಿ ಮೋಹನ್‍ಕುಮಾರ್ 

ಮಾರ್ಗದರ್ಶನದಲ್ಲಿ ದರೋಡೆಕೋರರ ಬಗ್ಗೆ ಹಲವಾರು 

ಮಾಹಿತಿಯನ್ನು ಕಲೆ ಹಾಕಿದ ಗ್ರಾಮಾಂತರ ವೃತ್ತ 

ನಿರೀಕ್ಷಕ ಕೃಷ್ಣಪ್ಪ, ಅಕ್ಕೂರು ಪಿಎಸ್ಐ ಬಸವರಾಜು ಮತ್ತು ತಂಡದವರು ದರೋಡೆ ಮಾಡಿ ಏನು ಗೊತ್ತಿಲ್ಲದಂತೆ 

ಓಡಾಡುತ್ತಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ತಗೆದುಕೊಳ್ಳುವಲ್ಲಿ 

ಯಶಸ್ವಿಯಾಗಿದ್ದಾರೆ.


ಅನಿವಾರ್ಯವಾಗಿ ದರೋಡೆಗೆ ಇಳಿದಿದ್ದ ಈ ಐದು 

ಮಂದಿ ದರೋಡೆಕೋರರಲ್ಲಿ ಕೆಲವರು ವಿಪರೀತ ಸಾಲಕ್ಕೆ 

ಒಳಗಾಗಿದ್ದರೆ, ಕೆಲವರು ತಮ್ಮ ಅನೈತಿಕ ಸಂಬಂಂಧಗಳ 

ಮೋಜುಮಸ್ತಿಯ ಹಣಕ್ಕಾಗಿ ದರೋಡೆಗೆ ಕೈಹಾಕಿ ಹಲವಾರು 

ಕಡೆ ಯಶಸ್ವಿಯಾಗಿದ್ದರು ಎಂದು ಹೇಳಲಾಗಿದೆ.


ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 

ದೂರು ದಾಖಲಾಗಿದ್ದು, ಐದು ಮಂದಿ ಆರೋಪಿಗಳನ್ನು 

ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑