ಬೆಂಗಳೂರಿನ ಗಾಯನ ಸಮಾಜದಲ್ಲಿ ಕುಮಾರಿ ಸೌರಭ ರವರ ರಂಗ ಪ್ರವೇಶ
ಬೆಂಗಳೂರು: ಸತತ ಹದಿಮೂರು ವರ್ಷಗಳ ಕಾಲ ವಿದುಷಿ ನಿವೇದಿತಾ ಶರ್ಮಾ ನಾಡಿಗ್ ರವರ ಬಳಿ ಭರತನಾಟ್ಯ ಕಲಿತು ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾದ ಕುಮಾರಿ ಸೌರಭ ರವರು ನಾಳೆ (೦೯/೦೪/೨೩ ರ ಭಾನುವಾರ) ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿನ ಗಾಯನ ಸಮಾಜ ದಲ್ಲಿ ಮುಂಜಾನೆ ೦೯:೩೦ ಕ್ಕೆ ರಂಗ ಪ್ರವೇಶ ಮಾಡುತ್ತಿದ್ದಾರೆ.
ಸೌರಭ ರವರು ಶ್ರೀಮತಿ ಸರಸವಾಣಿ ಎಂ ಎಸ್ ಮತ್ತು ಲೇ ಪ್ರಕಾಶ್ ಎನ್ ವಿ ರವರ ಪುತ್ರಿಯಾಗಿದ್ದು, ಪತ್ರಕರ್ತ ಪವನ್ ಕುಮಾರ್ ನಾಡಿಗ್ ರವರ ಸಹೋದರಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ ವಿದ್ಯಾ ರಾವ್, ಎಂ ಆರ್ ಹನುಮಂತರಾಯ, ಪದ್ಮಜಾರಾವ್ ಹಾಗೂ ಕೆ ಎಸ್ ನಾಗಶ್ರೀ ರವರು ಭಾಗವಹಿಸಲಿದ್ದಾರೆ.
ಸುಮಾರು ೧೩ ವರ್ಷಗಳ ಹಿಂದೆ, ವಿದುಷಿ
ಶ್ರೀಮತಿ. ನಿವೇದಿತಾ ಶರ್ಮಾ ನಾಡಿಗ್ ರವರ ಬಳಿ
ಪುಟ್ಟ ವಿದ್ಯಾರ್ಥಿನಿಯಾಗಿ ಭರತನಾಟ್ಯವನ್ನು
ಕಲಿಯಲು ಆರಂಬಿಸಿದ ಕುಮಾರಿ ಸೌರಭ,
ಪಠ್ಯದ ಜೊತೆಗೆ, ಪಠ್ಯೇತರ
ಚಟುವಟಿಕೆಯಂತೆ ಭರತನಾಟ್ಯವನ್ನು
ಕಲಿಯಲು ಆರಂಭಿಸಿ ಕೆಲವೇ ದಿನಗಳಲ್ಲಿ ನೃತ್ಯ, ಪ್ರತಿ ದಿನದ ಅವಿಭಾಜ್ಯ ಅಂಗವಾಗಿ ರೂಢಿಸಿಕೊಂಡರು. ಶಾಲಾ ದಿನದಲ್ಲೇ ಭರತನಾಟ್ಯದ ಕಡೆಗೆ ಹೆಚ್ಚಿನ ಆಸಕ್ತಿ ಇದ್ದ ಕಾರಣ, ೧೦ನೇ ತರಗತಿಯ ಪಬ್ಲಿಕ್ ಪರೀಕ್ಷೆ ಬರೆಯುವ ಮೊದಲೇ, ಭರತನಾಟ್ಯದ ಜೂನಿಯರ್ ಪರೀಕ್ಷೆ ಯಲ್ಲಿ ಡಿಸ್ಟಿಂಕ್ಷನ್ ಪಡೆದು ಉತ್ತೀರ್ಣರಾಗಿದ್ದಾರೆ
ಭರತನಾಟ್ಯದ ಬಗ್ಗೆ ಆಕೆಯ ಶ್ರದ್ಧೆ ಮತ್ತು ಆಸಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ ಅವರು ಪ್ರಸ್ತುತ, ವಿದ್ವತ್ ಅಭ್ಯಾಸ ಮಾಡುತ್ತಿದ್ದು, ಈ ವರ್ಷದ ಅಂತ್ಯದೊಳಗೆ ಭರತನಾಟ್ಯದಲ್ಲಿ ವಿದ್ವತ್
ಪರೀಕ್ಷೆಯನ್ನು ಪೂರ್ಣಗೊಳಿಸಲಿದ್ದಾರೆ.
ಈ ೧೩ ವರ್ಷದ ನೃತ್ಯ ಕಲಿಕೆಯಲ್ಲಿ ಕುಮಾರಿ.
ಸೌರಭ ರಾಜ್ಯದ ಹಾಗೂ ಅಂತರ್ ರಾಜ್ಯ ಪ್ರಸಿದ್ಧ
ವೇದಿಕೆಗಳಲ್ಲಿ ತಮ್ಮ ನೃತ್ಯ
ಪ್ರದರ್ಶನವನ್ನು ನೀಡಿದ್ದಾರೆ.
ಅದರಲ್ಲಿ ಮುಖ್ಯವಾದುದು ಎಂದರೆ, ೨೦೧೧ರಲ್ಲಿ ಗಾಂಧಿಜಯಂತಿ ಪ್ರಯುಕ್ತ
ಗೌರವಾನ್ವಿತ, ರಾಜ್ಯಪಾಲರ ಸಮ್ಮುಖದಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ,
ತಮ್ಮ ನೃತ್ಯ ಪ್ರದರ್ಶನವನ್ನು ನೀಡಿದ್ದು. ೨೦೧೫ರಲ್ಲಿ,
ಬೆಂಗಳೂರಿನ ಚನ್ಸೆರಾ ಪೆವಿಲಿಯನ್ , ಅಲ್ಲಿ ನಡೆದ ಕಾರ್ಪೊರೇಟ್ ಕಾರ್ಯಕ್ರಮದಲ್ಲಿ ತಮ್ಮ ನೃತ್ಯ ಪ್ರದರ್ಶನ, ೨೦೨೦ರಲ್ಲಿ
ಮಾಗಡಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆದ ಕೂಠಾರೋತ್ಸವ
ಕಾರ್ಯಕ್ರಮದಲ್ಲಿ ನೃತ್ಯ
ಪ್ರದರ್ಶನವನ್ನು ನೀಡಿದ್ದಾರೆ, ೨೦೨೨ರಲ್ಲಿ ಮಂತ್ರಾಲಯದಲ್ಲಿ ನಡೆದ ಶ್ರೀ ರಾಘವೇಂದ್ರ ವೈಭವೋತ್ಸವ ಮತ್ತು ಕಲಾ ಶ್ರೀ ಉತ್ಸವದಲ್ಲಿ, ನೃತ್ಯ ಪ್ರದರ್ಶನವನ್ನು ನೀಡಿದ್ದಾರೆ, ಇದರ ಜೊತೆಗೆ ಇನ್ನೂ ಬಹಳಷ್ಟು ಪ್ರಸಿದ್ಧ
ವೇದಿಕೆಗಳಲ್ಲಿ ತಮ್ಮ ನೃತ್ಯ ಪ್ರದರ್ಶನವನ್ನು ನೀಡಿ ಜನಮನ್ನಣೆ ಗಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು