Tel: 7676775624 | Mail: info@yellowandred.in

Language: EN KAN

    Follow us :


ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ

Posted date: 11 Apr, 2023

Powered by:     Yellow and Red

ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ

ಮಂಡ್ಯ: ಮದ್ದೂರು; ತಮ್ಮ ಕಷ್ಟಗಳನ್ನು ಪರಿಹರಿಸು ದೇವರೇ ಎಂದು ಭಕ್ತರು ಹಲವಾರು ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ವಿಶೇಷವಾಗಿ ನದಿಗಳು, ಕಲ್ಯಾಣಿಗಳು ಇರುವೆಡೆ ತಮ್ಮ ಪಾಪಗಳನ್ನು ತೊಳೆದುಕೊಳ್ಳಲೆಂದೇ, ಸಾಮೂಹಿಕ ಸ್ನಾನ ಮಾಡಿ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದು ಪುನೀತರಾದೆವು ಎಂದು ಭಾವುಕರಾಗುತ್ತಾರೆ. ಆದರೆ ಕ್ಷೇತ್ರದಲ್ಲಿ ತೀರ್ಥ ಸ್ನಾನ ಮಾಡಿದಾಗ ನಾನೆಷ್ಟು ಕೊಳಕನ್ನು ಬಿಟ್ಟೆ ಎಂಬುದನ್ನು ಗಣನೆಗೆ ತೆಗೆದುಕೊಳ್ಳಬೇಕೆಂದು ಕಿತ್ತೂರು ರಾಣಿ ಚನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತರಾದ ಮಹಿಳಾ ಅಧ್ಯಕ್ಷರಾದ ರಜನಿರಾಜ್ ಭಕ್ತಾದಿಗಳಲ್ಲಿ ಮಾನವಿ ಮಾಡಿದ್ದಾರೆ.


ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಭಾಗಮಂಡಲ, ನಂಜನಗೂಡು, ಶ್ರೀರಂಗಪಟ್ಟಣ ಸೇರಿದಂತೆ ಹಲವಾರು ಪುಣ್ಯಕ್ಷೇತ್ರ ಗಳಲ್ಲಿ ನದಿಗಳಿದ್ದು, ಇಂತಹ ಕ್ಷೇತ್ರಗಳಲ್ಲಿ ಬಹುತೇಕ ಭಕ್ತಾದಿಗಳು ಸ್ನಾನ ಮಾಡಿದ ನಂತರ ಅವರ ಹಳೆಯ ಬಟ್ಟೆಗಳು, ಸ್ನಾನಕ್ಕೆ ಬಳಸಿದ ವಿವಿಧ ಕಂಪನಿಯ ಶಾಂಪೂ ಮತ್ತು ಸೋಪುಗಳನ್ನು ಪ್ಲಾಸ್ಟಿಕ್ ನಿಂದ ನಿರ್ಮಿತವಾದ ಮೇಲೋದಿಕೆಯ ಸಮೇತ ಬಿಡುತ್ತಾರೆ. ಇನ್ನೂ ದುರದೃಷ್ಟಕರ ಎಂದರೆ ಒಂದು ಬಾರಿಯ ಸ್ಥಾನಕ್ಕೆ ಪ್ರತಿಯೊಬ್ಬರು ಒಂದು ಶಾಂಪು, ಸೋಪು, ಪೇಸ್ಟ್ ಮತ್ತು ಬ್ರಶ್ ಗಳನ್ನು ಸ್ವಲ್ಪವೇ ಬಳಸಿ ಬಿಸಾಕುವುದಾಗಿದೆ.


ತೀರ್ಥ ಕ್ಷೇತ್ರಗಳಿಗೆ ಹೋದವರು ಏನಾದರೂ ಬಿಟ್ಟು ಬರಬೇಕು ಎಂಬುದು ವಾಡಿಕೆ. ಅಂದರೆ ಆಸೆ, ದ್ವೇಷ, ಮತ್ಸರ ಎಂಬಂತಹ ಅಪಾಯಕಾರಿ ಗುಣಗಳನ್ನು ಬಿಡಬೇಕೆಂದು ಹೇಳಿರುವುದನ್ನೆ ಅರ್ಥೈಸಿಕೊಳ್ಳದೆ, ಇವರು ತಮ್ಮ ಹಳೆಯ ಬಟ್ಟೆಗಳ ಜೊತೆಗೆ ಕೆಮಿಕಲ್ ಯುಕ್ತ ಪದಾರ್ಥಗಳು ಹಾಗೂ ಪ್ಲಾಸ್ಟಿಕ್ ಬಿಟ್ಟು ಬರುತ್ತಿದ್ದು, ಶ್ರೀ ಕ್ಷೇತ್ರಗಳ ಪಾವಿತ್ರ್ಯತೆಯ ಜೊತೆಗೆ ಸ್ಥಳೀಯವಾಗಿ ವಾಸಿಸುವ ಪ್ರಾಣಿಗಳು, ಜಲಚರಗಳಿಗೆ ಕಂಟಕಪ್ರಾಯವಾಗುತ್ತಿದೆ ಎಂದಿದ್ದಾರೆ.


ಈ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಸರ್ಕಾರ ಮತ್ತು ಧರ್ಮ ಕ್ಷೇತ್ರಗಳು ಕಟ್ಟು ನಿಟ್ಟಿನ ಕಾನೂನು ರೂಪಿಸಿ ಹೇರುವ ಮೂಲಕ ಅವರಲ್ಲಿ ಜಾಗೃತಿ ಮೂಡಿಸಬೇಕು. ಪುಣ್ಯ ಕ್ಷೇತ್ರಗಳನ್ನು ಕೆಮಿಕಲ್ ಯುಕ್ತ ಪ್ಲಾಸ್ಟಿಕ್ ಕ್ಷೇತ್ರಗಳನ್ನಾಗಿ ಮಾಡಬಾರದಾಗಿ, ಪ್ರಕೃತಿ ಉಳಿಸುವ ಹಾಗೂ ಸಾಮಾಜಿಕ ಕಳಕಳಿಯನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು ಎಂದು ರಜನಿರಾಜ್ ರವರು ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑