ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ ಹುಟ್ಟಿದ ಅರ್ಥ ಗಂಟೆಯೊಳಗೆ ಎದೆ ಹಾಲು ನೀಡಬೇಕು. 6 ತಿಂಗಳವರೆಗೆ ಎದೆ ಹಾಲು ಮಾತ್ರ ಕುಡಿಸಬೇಕು. ಜೇನು ತುಪ್ಪ, ಸಕ್ಕರೆ ನೀರು, ಬಾಟಲ್ ಹಾಲು ಕೊಡಬಾರದು, 6 ತಿಂಗಳ ನಂತರ ಎದೆ ಹಾಲಿನ ಜೊತೆಗೆ ಪೂರಕ ಆಹಾರ ನೀಡಬೇಕು. ಕನಿಷ್ಠ 2 ವರ್ಷದವರೆಗೆ ಎದೆ ಹಾಲು ನೀಡುವುದರಿಂದ ಮಗು ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ತಾಲ್ಲೂಕು ಅರೋಗ್ಯಾಧಿಕಾರಿ ಡಾ. ಶಶಿಕಲಾ ಅವರು ತಿಳಿಸಿದರು.
ಅವರು ಇಂದು ರಾಮನಗರ ತಾಲ್ಲೂಕಿನ ತೆಂಗಿನಕಲ್ಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರು ಹೆಚ್.ಎಸ್.ಆರ್.ಲೇ-ಔಟ್ನಲ್ಲಿರುವ ದಿ-ಎಕ್ಸ್ಫರ್ಟ್ ವಿಜ್ಞಾನ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಆಯೋಜಿಸಿದ್ದು ಈ ಶಿಬಿರದಲ್ಲಿ ಅಪೌಷ್ಠಿಕತೆ ಮಕ್ಕಳ ಪತ್ತೆ ಹಾಗೂ ಚಿಕಿತ್ಸೆ ನಿರ್ವಹಣೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎನ್.ಎಸ್.ಎಸ್. ಶಿಬಿರಾರ್ಥಿಗಳಾದ ತಾವುಗಳು ಮನೆಗಳಿಗೆ ಭೇಟಿಮಾಡುವ ಸಂದರ್ಭದಲ್ಲಿ 0-2, 3-5, 6-14 ವರ್ಷದೊಳಗಿನ ಮಕ್ಕಳ ಸಮೀಕ್ಷೆ ಮಾಡಿ ಅವರಲ್ಲಿ ಎತ್ತರಕ್ಕೆ ತಕ್ಕಂತೆ ತೂಕ, ವಯಸ್ಸಿಗೆ ತಕ್ಕಂತೆ ಎತ್ತರ ಹಾಗೂ ಸಾರ್ವತ್ರಿಕ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಈಗಾಗಲೆ ಎನ್.ಆರ್.ಸಿ. ಕೇಂದ್ರಗಳಲ್ಲಿ 14 ದಿನಗಳ ವರೆಗೆ ಪೌಷ್ಠಿಕ ಆಹಾರ ಮತ್ತು ಚಿಕಿತ್ಸೆ ಸೌಲಭ್ಯ ಹಾಗೂ ಮಗುವನ್ನು ನೋಡಿಕೊಳ್ಳುವ ಪೋಷಕರಿಗೆ ಪ್ರತಿದಿನಕ್ಕೆ ಕೂಲಿ ರೂ. 259 ರಂತೆ ನೀಡಲಾಗುತ್ತಿದ್ದು, ಮಗುವನ್ನು ಅಪೌಷ್ಠಿಕತೆಯಿಂದ ರಕ್ಷಣೆ ಮಾಡಲಾಗುತ್ತಿದೆ. 5-ವರ್ಷದೊಳಗಿನ ಮಕ್ಕಳಲ್ಲಿ ನಿಮೋನಿಯಾ, ಅತಿಸಾರ ಬೇದಿ, ಇನ್ನಿತರೆ ಕಾಯಿಲೆಗಳು ಕಂಡುಬರುತ್ತಿದ್ದು ಇವುಗಳನ್ನು ನಿಯಂತ್ರಿಸಲು ನಿರಂತರವಾಗಿ ಇಲಾಖೆ ವತಿಯಿಂದ ಸೇವೆ ನೀಡಲಾಗುತ್ತಿದ್ದು. ತಾವುಗಳು ಮನೆಗಳಿಗೆ ಭೇಟಿ ವೇಳೆ ಪೋಷಕರಿಗೆ ಅಪೌಷ್ಠಿಕತೆ ನಿಯಂತ್ರಿಸಲು ಅನುಸರಿಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಅವರು ಆರೋಗ್ಯವಂತ ಮಗು ಪಡೆಯಬೇಕಾದರೆ ಗರ್ಭಧರಿಸುವ ಮೊದಲ ಹಂತದಲ್ಲಿಯೇ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಹಾಗೂ ಗರ್ಭಿಣಿಯ ಸಂದರ್ಭದಲ್ಲಿ ಸ್ಥಳೀಯವಾಗಿ ದೊರೆಯುವ ಆಹಾರ ಉತ್ಪನ್ನಗಳಾದ ಹಸಿರು ಸೊಪ್ಪು ತರಕಾರಿ, ಕಾಳು, ಹಾಲು, ಮೊಟ್ಟೆ, ಮಾಂಸ ಇತ್ಯಾದಿಗಳನ್ನು ಸಮರ್ಪಕವಾಗಿ ಸೇವಿಸಬೇಕು ಹಾಗೂ ಮಕ್ಕಳ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ತಿಳಿಸಿದರು.
ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ರುಕ್ಮಿಣಿ ಅವರು ಮಾತನಾಡಿ ಇಲಾಖೆ ವತಿಯಿಂದ ತಾಯಿ ಕಾರ್ಡ್ ವಿತರಿಸಿ ನಿಯಮಾನುಸಾರ ಗರ್ಭಿಣಿ ತಪಾಸಣೆ, ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು. ರಕ್ತ ಹೀನತೆ ನಿಯಂತ್ರಿಸಲು ಕಬ್ಬಿಣಾಂಶದ ಮಾತ್ರೆ ನೀಡಲಾಗುತ್ತದೆ. ಮಕ್ಕಳಿಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಕಾಲ-ಕಾಲಕ್ಕೆ ಲಸಿಕೆ ನೀಡಲಾಗುತ್ತಿದೆ. ಬಾಣಂತಿಯರಲ್ಲಿ ಅಪೌಷ್ಠಿಕತೆ ನಿವಾರಿಸಲು ಕಬ್ಬಿಣಾಂಶದ ಮಾತ್ರೆ ನೀಡಲಾಗುತ್ತಿದೆ. ಶಾಲಾ ಮಕ್ಕಳಲ್ಲಿ ರಕ್ತ ಹೀನತೆ ನಿವಾರಿಸಲು ಕಬ್ಬಿಣಾಂಶದ ಮಾತ್ರೆಗಳನ್ನು ನೀಡಲಾಗುತ್ತಿದ್ದು. ತಾವುಗಳು ಮನೆಗಳಿಗೆ ಭೇಟಿನೀಡುವ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿ ಸೇವೆ ಪಡೆದುಕೊಳ್ಳುವಂತೆ ತಿಳಿಸಬೇಕು ಎಂದರು.
ವೈದ್ಯಾಧಿಕಾರಿ ಡಾ. ಸುನಿಲ್, ಎನ್.ಎಸ್.ಎಸ್. ಅಧಿಕಾರಿ ಪ್ರೊಫೆಸರ್ ಮರಿಸ್ವಾಮಿ, ಆರೋಗ್ಯ ನಿರೀಕ್ಷಣಾಧಿಕಾರಿ ರಾಜೇಶ್, ಆಶಾ ಕಾರ್ಯಕರ್ತೆ ಭಾಗ್ಯಮ್ಮ, ಎನ್.ಎಸ್.ಎಸ್. ಶಿಬಿರಾರ್ಥಿಗಳು ಹಾಗೂ ಗ್ರಾಮದ ಸಾರ್ವಜನಿಕರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು