Tel: 7676775624 | Mail: info@yellowandred.in

Language: EN KAN

    Follow us :


ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು : ದೊಡ್ಡರಂಗೇಗೌಡ

Posted date: 04 Apr, 2018

Powered by:     Yellow and Red

ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು : ದೊಡ್ಡರಂಗೇಗೌಡ

ಮುಂಬಯಿ: ಬದುಕು ಬಹಳ ದೊಡ್ಡದು. ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು ಎಂದು ನಾನು ಭಾವಿಸಿದವನು. ಬದುಕಿನಲ್ಲಿ ನಾವು ಏನು ಸಾಧನೆ ಮಾಡಬೇಕಾದರೂ ಕೂಡ ನಮ್ಮ ಮಹತ್ವಾಕಾಂಕ್ಷೆಯನ್ನು ನಾವು ಮರೆಯಬಾರದು. ನಮ್ಮ ಪ್ರಾಮಾಣಿಕತೆಯನ್ನು ಬಿಡ ಬಾರದು. ಒಂದು ರೀತಿಯಲ್ಲಿ ಒಬ್ಬ ಬರಹಗಾರನಿಗೆ ಅತ್ಯುತ್ತಮ ಕೃತಿಗಳನ್ನು ಬರೆಯುವುದೇ ಅಥವಾ ತನ್ನ ಎಲ್ಲ ಅನುಭವಗಳನ್ನು ಕೂಡಾ ಅದನ್ನು ಅಭಿವ್ಯಕ್ತಿರೂಪ ಕೊಟ್ಟು ಅದನ್ನು ಸಾಹಿತ್ಯ ಕೃತಿಗಳನ್ನಾಗಿ ಮಾರ್ಪಡಿಸತಕ್ಕಂಥದ್ದೇ ಅವನ ಮಹತ್ವಾಕಾಂಕ್ಷೆ. ಅದು ಅವನ ಕಾಯಕ. ನನಗೆ ಬರವಣಿಗೆ ಅನ್ನುವುದು ಒಂದು ತಪಸ್ಸು. 1960ನೇ ಸಾಲಿನಲ್ಲಿ ಬರೆಯಲು ಪ್ರಾರಂಭಿಸಿದೆ. 60ರ ಸುಮಾರಿಗೆ ನನ್ನ ಮೂರು ಕವಿತೆಗಳು ಆಕಾಶವಾಣಿಯಲ್ಲಿ ಪ್ರಸಾರವಾದವು. ಆಗಿನ ಪತ್ರಿಕೆಗಳಲ್ಲಿ ನನ್ನ ಕವಿತೆಗಳು ಪ್ರಕಟಗೊಂಡವು. ಬರೆಯುತ್ತಾ ಹೋದೆ, ಬೆಳೆಯುತ್ತಾ ಹೋದೆ, ಕನ್ನಡವನ್ನೇ ನಿಚ್ಚಳವಾಗಿ ಬಳಸುತ್ತಾ ಹೋದೆ. ನನ್ನ ಬದುಕಿನ ಎಳೆ ಎಳೆಯು ಕೂಡ  ನನ್ನ ಬರವಣಿಗೆ ಯಲ್ಲಿದೆ. ಲೇಖಕ ತನ್ನ ಬದುಕನ್ನಷ್ಟೇ ಅನಾವರಣ ಮಾಡಿದರೆ ಸಾಲದು, ಸುತ್ತಣ ಸಮಾಜವನ್ನು ಕೂಡಾ ಅವನು ಗಂಭೀರವಾಗಿ ಗಮನಿಸಬೇಕು. ಸಮಾಜದಲ್ಲಿ ಇರತಕ್ಕಂತಹ ಎಲ್ಲ ಓರೆಕೋರೆಗಳನ್ನು ಗಮನಿಸಬೇಕು. ಸಾಹಿತಿ ಸಮಾಜಮುಖೀ ಆಗಿರಬೇಕು ಎಂದು ಪದ್ಮಶ್ರೀ ಪುರಸ್ಕೃತ ಡಾ| ದೊಡ್ಡರಂಗೇ ಗೌಡ ಅವರು ನುಡಿದರು.

ಎ. 1ರಂದು ದೆಹಲಿ ಕರ್ನಾಟಕ ಸಂಘದ ವತಿಯಿಂದ ಸಂಘದ ಸಭಾಗೃಹದಲ್ಲಿ ನಡೆದ ಸಮಾ ರಂಭದಲ್ಲಿ ಅಭಿನಂದನ ಸಮ್ಮಾನ ಸ್ವೀಕರಿಸಿ ಮಾತನಾಡಿದ ಇವರು ಇವತ್ತು ದೆಹಲಿ ಕರ್ನಾಟಕ ಸಂಘ ದೊಡ್ಡ ಶಕ್ತಿಯಾಗಿ ಬೆಳೆದಿದೆ'.  ಇಲ್ಲಿಗೆ ಬಾರದೇ ಇರತಕ್ಕಂತಹ ಕನ್ನಡಿಗ ಇಲ್ಲವೇ ಇಲ್ಲ. ಕನ್ನಡಿಗ ಇಲ್ಲಿ ಬರಲಿಲ್ಲ ಅಂದರೆ ಅವನಿಗೆ ನಷ್ಟ ಎಂದು ನುಡಿದರು.

 ರಂಗ ನಿರ್ದೇಶಕ ಎಂ. ಎಸ್‌. ಸತ್ಯು ಅವರು ಮಾತನಾಡುತ್ತ,  ನನ್ನ ಮಾಧ್ಯಮ ನಾಟಕ ಮತ್ತು ಸಿನೆಮಾ. ಡಾ|  ದೊಡ್ಡರಂಗೇ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿರುವುದು ಬಹಳ ಸಂತೋಷ ತಂದಿದೆ ಎಂದರು.

ಡಾ| ದೊಡ್ಡರಂಗೇ ಗೌಡ ಅವರನ್ನು ದೆಹಲಿ ಕರ್ನಾಟಕ ಸಂಘದ ಪರವಾಗಿ ಶಾಲು ಹೊದೆಸಿ, ಫಲ ಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಅಭಿನಂದಿಸಲಾಯಿತು. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಅವರು ಮಾತನಾಡಿ, ಅಬ್ಬಕ ಕುರಿತಾಗಿ ಹಿಂದಿಯಲ್ಲಿ ಮತ್ತಿತರ ಭಾಷೆಯಲ್ಲಿ ನಾಟಕಗಳು ಆಗಬೇಕು ಎಂದರು.

ಇದೇ ಸಂದರ್ಭದಲ್ಲಿ ಪ್ರಸ್ತುತ ಗೊಂಡ ಎಂ. ಎಸ್‌. ಸತ್ಯು ನಿರ್ದೇ ಶನದ ಗುಲ್‌ ಏ ಬಕಾವಲಿ ನಾಟಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮ ವನ್ನು ಪ್ರಧಾನ ಕಾರ್ಯದರ್ಶಿ ಸಿ.ಎಂ. ನಾಗರಾಜ ಅವರು ನಿರೂಪಿಸಿದರು. ಡಾ| ಅಹಲ್ಯಾ ಚಿಂತಾಮಣಿ, ಹಿರಿಯ ಕಲಾವಿದ ಭೀಮರಾವ್‌ ಮುರಗೋಡ ಅವರು ಉಪಸ್ಥಿತರಿದ್ದರು. 

ಸಾಹಿತ್ಯಾ ಭಿಮಾನಿಗಳು, ತುಳು- ಕನ್ನಡಿಗರು ದೆಹಲಿ ಕರ್ನಾಟಕ ಸಂಘದ ಪದಾಧಿ ಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

(ಸಂಗ್ರಹ ವರದಿ)

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑