Tel: 7676775624 | Mail: info@yellowandred.in

Language: EN KAN

    Follow us :


ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.

Posted date: 02 Oct, 2023

Powered by:     Yellow and Red

ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.


ಚನ್ನಪಟ್ಟಣ:

ಈಗಿನ ಕಾಂಗ್ರೆಸ್ ಸರ್ಕಾರದಲ್ಲಿರುವ ಶಾಸಕರೇ ತಿರುಗಿ ಬೀಳಲಿದ್ದು, ಸಂಕ್ರಾಂತಿ ವೇಳೆಗೆ ಸೂರ್ಯ ತನ್ನ ಪಥ ಬದಲಿಸುವ ರೀತಿ, ರಾಜ್ಯ ರಾಜಕೀಯದ ಪಥವೂ ಬದಲಾವಣೆಯಾಗಲಿದೆ. ಶಾಸಕರೇ ಸರ್ಕಾರ ಹಾಗೂ ನಾಯಕರ ವಿರುದ್ಧ ತಿರುಗಿ ಬೀಳಲಿದ್ದು, ಎರಡು-ಮೂರು ತಿಂಗಳಲ್ಲಿ ಈ ಸರ್ಕಾರ ಪತನಗೊಳ್ಳಲಿದೆ’ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.


ನಗರದಲ್ಲಿ ಸೋಮವಾರ ಸಾರಿಗೆ ಬಸ್ ನಿಲ್ದಾಣದಲ್ಲಿ ಗಾಂಧೀಜಿ ಜಯಂತಿ ಪ್ರಯುಕ್ತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಂತರ ಬಿಜೆಪಿ ಪಕ್ಷದ ಹಲವಾರು ಮುಖಂಡರು ಹಾಗೂ ಅವರ ಬೆಂಬಲಿಗರೊಂದಿಗೆ ಆವರಣದಲ್ಲಿ ಸ್ವತಃ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯದ ರಾಜಕೀಯ ಬೆಳವಣಿಗೆ ಮತ್ತು ಕಾಂಗ್ರೆಸ್ ನಾಯಕರ ನಡತೆ ಬಗ್ಗೆ ಆ ಪಕ್ಷದ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಕೆಲವರು ನನ್ನೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದಾರೆ. ಹಾಗಾಗಿ, ಈ ಸರ್ಕಾರದ ಅವಧಿ 2023ರೊಳಗೆ ಅಥವಾ ಜನವರಿ ಮೊದಲ ತಿಂಗಳ ಸಂಕ್ರಮಣ ಹಬ್ಬದೊಳಗೆ ಮುಗಿಯಲಿದೆ ಎನಿಸುತ್ತಿದೆ’ ಎಂದರು.

 

‘ಸರ್ಕಾರದಲ್ಲಿ ಶಾಸಕರು ಅನುದಾನವಿಲ್ಲದೆ ಡಮ್ಮಿಗಳಾಗಿದ್ದಾರೆ‌. ಅನುದಾನವಿಲ್ಲದೆ ತಂತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಾಗದೆ ಅವರಿಗೆ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಎಲ್ಲವೂ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗಿದ್ದು, ನಿಮಗೆ ಕೊಡಲು ಅನುದಾನವಿಲ್ಲ ಎಂದು ನಾಯಕರು ಹೇಳುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೂ ಹೊಸ ವಿಲ್ಲ ವಾಗಿದೆ ಇಂತಹ ಸಮಯದಲ್ಲಿ ನಾವು ಶಾಸಕರಾಗಿದ್ದು ಏನು ಪ್ರಯೋಜನ ಎಂದು ಶಾಸಕರು ತಿಳಿಸಿದ್ದಾರೆ ಎಂದರು.


ಬೇರೆ ಪಕ್ಷದಿಂದ ಗೆದ್ದಿರುವ ಶಾಸಕರಿರಲಿ, ಅವರ ಪಕ್ಷದ ಶಾಸಕರು ‘ನಿರುದ್ಯೋಗಿಗಳಾಗಿದ್ದಾರೆ' ಕಾಂಗ್ರೆಸ್ ಶಾಸಕರು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಅದರ ಪರಿಣಾಮವನ್ನು ಸಂಕ್ರಾಂತಿ ಹಬ್ಬದ ಹೊತ್ತಿಗೆ ನೋಡುತ್ತೀರಿ. ಡಿ.ಕೆ. ಶಿವಕುಮಾರ್ ಅವರಂತೆ, ನಾವು ಯಾವುದೇ ರೀತಿಯ ಆಪರೇಷನ್ ಮಾಡುವುದಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಸದ್ಯ ನನಗಿರುವ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇನೆ ಅಷ್ಟೆ’ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.


‘ಹಸ್ತದ ಆಪರೇಷನ್‌ಗೆ ಪ್ರತಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ’


ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಮೋದಿ ಎಂಬ ನಿಟ್ಟಿನಲ್ಲಿ ಆರಂಭಿಸಲಾಗಿದೆ. ‘ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ–ಜೆಡಿಎಸ್ ಮೈತ್ರಿ ಅನಿವಾರ್ಯವಾಗಿದೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಆಪರೇಷನ್ ಹಸ್ತ ಆರಂಭಿಸಿದ್ದಾರೆ. ಅವರನ್ನು ಎದುರಿಸಲು ಈ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಇದರಿಂದ ಎರಡೂ ಪಕ್ಷಗಳಿಗೂ ಅನುಕೂಲವಾಗಲಿದೆ. ಜೆಡಿಎಸ್ ಸಭೆಯಲ್ಲಿ ಎಲ್ಲರೂ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದಾರೆ’ ಮೈತ್ರಿ ದೊಡ್ಡ ದೊಡ್ಡ ನಾಯಕರ ನೇತೃತ್ವದಲ್ಲಿ ಆಗಿದೆ ಎಂದು ಯೋಗೇಶ್ವರ್ ಹೇಳಿದರು.


‘ಮುಂದಿನ ವಾರ ಚನ್ನಪಟ್ಟಣ ಬಿಜೆಪಿ ಸ್ಥಳೀಯ ನಾಯಕರ ಸಭೆ ನಡೆಸುತ್ತೇವೆ. ಕಾರ್ಯಕರ್ತರ ಅಭಿಪ್ರಾಯ ಕೇಳುತ್ತೇವೆ. ಮೈತ್ರಿ ಬಗ್ಗೆ ಬೂತ್ ಮಟ್ಟದ ನಾಯಕರು ಮತ್ತು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡುತ್ತೇವೆ. ಬಳಿಕ, ಜೆಡಿಎಸ್ ನಾಯಕರ ಜೊತೆ ಮತ್ತೊಂದು ಸಭೆ ಮಾಡುತ್ತೇವೆ’ ಆ ನಂತರ ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆ ನಡೆಸಿ, ಸ್ಥಳೀಯವಾಗಿ ಯಾವ್ಯಾವ ಸಂದರ್ಭದಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.


‘ಟಿಕೆಟ್ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು’

‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ಕ್ಷೇತ್ರದಲ್ಲಿ ಬಿಜೆಪಿಗೆ ಅವಕಾಶ ಸಿಕ್ಕಿದರೆ, ನನ್ನನ್ನ ಚುನಾವಣೆಗೆ ನಿಲ್ಲಲು ಸೂಚಿಸಿದರೆ ಸ್ಪರ್ಧೆ ಮಾಡುವೆ. ಒಂದು ವೇಳೆ ಜೆಡಿಎಸ್‌ಗೆ ಕೊಟ್ಟರೆ, ಬೆಂಬಲ ನೀಡುವೆ. ಮುಂದಿನ ರಾಜಕೀಯ ದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ’ ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.


‘ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ದರ್ಪ ಮತ್ತು ದುರಹಂಕಾರಕ್ಕೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ. ಕ್ಷೇತ್ರದ ಜೆಡಿಎಸ್‌ನ ಮಾಜಿ ಶಾಸಕ ಎಂಬ ಬ್ರಾಂಡ್ ಇದ್ದ ಮುಖಂಡರನ್ನು ಆಪರೇಷನ್ ಮಾಡಿ ಪಕ್ಷಕ್ಕೆ ಸೇರಿಸಿಕೊಂಡ ಮಾತ್ರಕ್ಕೆ, ಬಿಜೆಪಿ ಮತ್ತು ಜೆಡಿಎಸ್ ಮತಬ್ಯಾಂಕ್‌ ಅಲುಗಾಡಿಸಲು ಸಾಧ್ಯವಿಲ್ಲ’ ಮಾಜಿ ಶಾಸಕರಿಗೂ ಒಂದು ಲೆಟರ್ ಹೆಡ್ ಬೇಕು, ಅವರೂ ವಿಧಾನಸೌಧ ಕ್ಕೆ ಹೋಗಿ ಬರಬೇಕು ಅದಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವ್ಯಂಗವಾಗಿ ಹೇಳಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಲವೇಗೌಡ, ಮುಖಂಡರಾದ ವಿ ಬಿ ಚಂದ್ರು, ಡಾ ಲೋಕಾನಂದ, ಕೆ ಟಿ ಜಯರಾಮು, ಶಿವಕುಮಾರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑