Tel: 7676775624 | Mail: info@yellowandred.in

Language: EN KAN

    Follow us :


ಗಾಂಧಿ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ತಾರತಮ್ಯ: ಸು.ತ.ರಾಮೇಗೌಡ ವಿಷಾದ

Posted date: 04 Oct, 2023

Powered by:     Yellow and Red

ಗಾಂಧಿ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ತಾರತಮ್ಯ: ಸು.ತ.ರಾಮೇಗೌಡ ವಿಷಾದ

ಚನ್ನಪಟ್ಟಣ: ಬೊಂಬೆನಾಡಿಗೆ ಮುಕುಟುವಾಗಿರುವ ಗಾಂಧಿಭವಕ್ಕೆ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡುವಲ್ಲಿ ಜಿಲ್ಲಾಡಳಿತವು ತಾರತಮ್ಯ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಸು.ತ.ರಾಮೆಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಅ.೨ ರ ಗಾಂಧಿ ಜಯಂತಿ ಪ್ರಯುಕ್ತ  ಗಾಂಧಿ ಭವನದ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್‍ಸ್ ವಿಭಾಗದ ವಿದ್ಯಾರ್ಥಿಗಳು ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಆಸಕ್ತರು ಶ್ರಮಾಧಾನದ ಮೂಲಕ ಸ್ವಚ್ಚತಾ ಆಂದೋಲನ ಮಾಡಿ ಗಾಂಧೀಜಿಯವರ ಭಾವ ಚಿತ್ರಕ್ಕೆ ಸೇರಿದ್ದ ಎಲ್ಲರೂ ಪುಷ್ಪ ನಮನ ಸಲ್ಲಿಸಿ ತಮ್ಮ ಗೌರವ ಸೂಚಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿಯವರು ಚನ್ನಪಟ್ಟಣ ನಗರಕ್ಕೆ ಬಂದು ಈ ಗಾಂಧಿಭವನದ ಜಾಗದಲ್ಲಿ ಒಂದು ರಾತ್ರಿ  ಉಳಿದು ಹೋಗಿದ್ದರ ಬಗ್ಗೆ ಇಲ್ಲಿನ ಹಿರಿಯರು ಮಾತನಾಡುತ್ತಾರೆ. ಈ ಗಾಂಧಿ ಭವನಕ್ಕೆ ಹಲವು ವರ್ಷಗಳ ಇತಿಹಾಸಿದ್ದು, ಶಿಥಿಲಾವಸ್ಥೆಯಲ್ಲಿರುವ ಗಾಂಧಿಭನಕ್ಕೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡುತ್ತಿರುವುದು ಖಂಡನೀಯವಾಗಿದೆ. ಜೊತೆಗೆ ಪಟ್ಟಣದ ಜನತೆ ಸಹ  ಈ ಗಾಂಧಿ ಭವನದ ಪುರೋಭಿವೃದ್ಧಿ ಪ್ರಶ್ನೆ ಬಂದಾಗ ಯಾರೂ ಸಹ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಹೇಗೋ ಹಾಗೆ ಸುಮ್ಮನಿದ್ದುಬಿಡುವುದು ಬೇಸರ ತಂದಿದೆ ಎಂದು ಹೇಳಿದರು.
ಮುಂದಿನ ಅಕ್ಟೋಬರ್ ೨ರ ಹೊತ್ತಿಗೆ ಇಲ್ಲಿ ಸುಸಜ್ಜಿತವಾದ ಗಾಂಧಿಭವನ ನಿರ್ಮಾಣವಾಗಬೇಕು ಎಲ್ಲಾ ತೊಡಕುಗಳನ್ನು ನಿವಾರಿಸಿಕೊಂಡು ಈಗ ಭವನ ನಿರ್ಮಾಣದ ಒಂದು ಆಶಾಭಾವನೆ ಕಂಡುಬರುತ್ತಿದೆ. ಅದಕ್ಕಾಗಿ ತಾಲ್ಲೂಕಿನ ಎಲ್ಲಾ ಜನರು ಒಟ್ಟುಗೂಡಿ ಬೇಗ ಕಾರ್ಯಗತವಾಗುವಂತೆ ಒತ್ತಾಯಿಸಬೇಕಾಗಿದೆ ಎಂದು, ಇಲ್ಲಿ ಗಾಂಧಿ ಭವನ ಆಗಲು ಏನೇನು ಕಾರಣಗಳಿವೆ ಎಂಬುದನ್ನು ಬಿಡಿಸಿ ಹೇಳಿದರು.

ರಾಜ್ಯ ರೈತ ಸಂಘದ ವಿಭಾಗೀಯ ಅಧ್ಯಕ್ಷರಾದ ಕೆ.ಮಲ್ಲಯ್ಯನವರು ಮಾತನಾಡಿ ಹೋರಾಟದ ಪ್ರಶ್ನೆ ಬಂದಾಗ ನಾವು ಗಾಂಧಿಯವರನ್ನು ಸ್ಮರಿಸುತ್ತೇವೆ. ಈ ದಿಕ್ಕಿನಲ್ಲಿ ನಮ್ಮ ಸಂಘಟನೆಯು ಗಾಂಧಿಯವರ ಬಗ್ಗೆ ಅಪೂರ್ವವಾದ ಗೌರವವನ್ನು ಹೊಂದಿದೆ ಅದರಂತೆ ನಾವು ನಡೆಯುತ್ತಿದ್ದೇವೆ ಎಂದರು.
ನಿವೃತ್ತ ಅಧಿಕಾರಿ ಸಿ.ಎನ್.ರುದ್ರಪ್ಪ ಅವರು ಮಾತನಾಡಿ ಈಗ ಅಸ್ಥಿ ಪಂಜರದ ರೀತಿಯಲ್ಲಿ ಉಳಿದಿರುವ ಗಾಂಧಿ ಭವನಕ್ಕೆ ಬೇಗ ಕಾಯಕಲ್ಪ ಆಗಲಿ, ಅದಕ್ಕಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಗಾಂಧೀಜಿಯವರ ಬದುಕು ಇದೇ ದಿನ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವು ಆಗಿದೆ. ಈ ಇಬ್ಬರು ಮಹನೀಯರು ಭಾರತದ ಪಾಲಿಗೆ ಅಪೂರ್ವವಾದ ರತ್ನಗಳು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಲಯನ್ ಸಂಸ್ಥೆಯ ಅಧ್ಯಕ್ಷರಾದ ತಿಪ್ರೇಗೌಡ, ಹಿರಿಯರಾದ ಸಿ.ಎನ್.ನಾರಾಯಣಸ್ವಾಮಿ, ಭಾರತ್ ವಿಕಾಸ್ ಪರಿಷತ್‌ನ ಅಧ್ಯಕ್ಷ ಗೋವಿಂದಯ್ಯ ಸ್ಕೌಟ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಈರಾನಾಯಕ್, ಚಂದ್ರು ಡಯೋಗ್ನೋಸ್ಟಿಕ್‌ನ ವಿ.ಬಿ.ಚಂದ್ರೇಗೌಡ, ಕರವೇ ಯ ಎಂ.ಎನ್.ಸತ್ಯನಾರಾಯಣ, ಬಿ.ಎನ್.ಕಾಡಯ್ಯ ಸೇರಿದಂತೆ ಹಲವು ಪ್ರಮುಖರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಗಾಂಧಿನಭವನವನ್ನು ನಿರಂತರವಾಗಿ ಸ್ವಚ್ಛವಾಗಿ ಇಟ್ಟುಕೊಳ್ಳುವ ಕೆಲಸ ಆಗಬೇಕು. ಹಾಗಾಗಿ ಸಂಘ ಸಂಸ್ಥೆಗಳವರು ಹಾಗೂ  ಇಲ್ಲಿನ ನಗರ ಸಭೆ ಸ್ವಚ್ಛತೆಯ ಬಗ್ಗೆ ನಿಗಾವಹಿಸಲು ಕೋರಲಾಯಿತು.
ಕಾರ್ಯಕ್ರಮವನ್ನು ಪತ್ರಕರ್ತ ಗೋ.ರಾ.ಶ್ರೀನಿವಾಸ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್‍ಸ್ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡು ಶ್ರಮದಾನವನ್ನು ಮಾಡಿದರು. ಗಾಂಧೀಜಿಯವರಿಗೆ ಪ್ರಿಯವಾದ ನೆಲೆಗಡಲೆಕಾಯಿ ಹಾಗೂ ಬೆಲ್ಲವನ್ನು ವಿತರಿಸಲಾಯಿತು.

ಗೋ ರಾ ಶ್ರೀನಿವಾಸ....
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑