Tel: 7676775624 | Mail: info@yellowandred.in

Language: EN KAN

    Follow us :


ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

Posted date: 24 Oct, 2023

Powered by:     Yellow and Red

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ್ವರಿಗೂ ಗೊತ್ತಾಗಬೇಕಾದರೆ ನಾಡಿನ ಪ್ರತಿ ಮನ-ಮನೆಯಲ್ಲೂ ದಸರಾ ಆಚರಣೆ ಮಾಡಬೇಕು ಎಂದು ರಾಮನಗರದ ಬಾಲಾಜಿ ಆಸ್ಪತ್ರೆಯ ಖ್ಯಾತ ವೈದ್ಯೆ ರೂಪಾ ಶ್ರೀಧರ್ ತಿಳಿಸಿದರು. ಅವರು ತಮ್ಮ ಮನೆಯಲ್ಲಿ ತಮ್ಮ ತಂದೆಯ ಮನೆಯಿಂದ ಕೊಡುಗೆಯಾಗಿ ನೀಡಿದ ಪಟ್ಟದ ಗೊಂಬೆಗಳ ಸಮೇತ, ಮೈಸೂರು ದಸರಾ, ಕನ್ನಂಬಾಡಿ ಹಾಗೂ ರೈತರ ಬದುಕನ್ನು ಬಿಂಬಿಸುವ ಸಾಂಪ್ರದಾಯಿಕ ದಸರಾ ಗೊಂಬೆಗಳನ್ನು ಚನ್ನಪಟ್ಟಣ ನಗರದ ತಮ್ಮ ಮನೆಯಲ್ಲಿ ಕೂರಿಸಿ ಸಂಭ್ರಮವನ್ನಾಚರಿಸಿ ಮಾತನಾಡಿದರು.


ನವರಾತ್ರಿ ಆಚರಣೆಯೂ ಸಹ ಕೇವಲ ಪೂಜೆಗಷ್ಟೇ ಸೀಮಿತವಾಗದೆ ದಸರಾ ಹಬ್ಬದ ವೈಭವವನ್ನು ತೋರಿಸಲು ಪ್ರತಿ ಮನೆಯಲ್ಲೂ ಪಟ್ಟದ ಗೊಂಬೆಗಳ ಸಮೇತ ಗೊಂಬೆಗಳನ್ನು ಸಾಂಪ್ರದಾಯಿಕವಾಗಿ ಕೂರಿಸಿ ಪೂಜಿಸುವ ಮೂಲಕ ನವರಾತ್ರಿ ಆಚರಣೆ ಸೂಕ್ತ ಎಂಬುದು ನನ್ನ ಅಭಿಪ್ರಾಯ. ಬೊಂಬೆಗಳ ನಾಡು ಎಂದೇ ಸುಪ್ರಸಿದ್ಧವಾಗಿರುವ ಚನ್ನಪಟ್ಟಣ ದಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಿಸಿದ, ಪೂರ್ವದಿಂದ ಇಲ್ಲಿವರೆಗೂ ನಡೆದು ಬಂದ ದಸರಾ ಹಬ್ಬ ಹಾಗೂ ಸಾಂಪ್ರದಾಯಿಕ ಗೊಂಬೆಗಳು ದೊರೆಯುವುದರಿಂದ, ಅವುಗಳನ್ನು ಖರೀದಿಸಿ, ತಮ್ಮ ಮನೆಗಳಲ್ಲಿ ಗೊಂಬೆಗಳನ್ನು ಕೂರಿಸಿದರೆ ಅವರಿಗೂ ಆರ್ಥಿಕವಾಗಿ ಬೆಂಬಲ ನೀಡಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.


ಹಿಂದಿನ ಹಾಗೂ ಇಂದಿನ ಆಚರಣೆಗಳು ನಮಗೆ ಸ್ವಲ್ಪ ಮಟ್ಟಿಗೆ ತಿಳಿದಿವೆ. ಈ ಸಂಪ್ರದಾಯಗಳು ಮುಂದಿನ ಪೀಳಿಗೆಗೂ ತಲುಪಬೇಕಾದರೆ ನಮ್ಮ ಹಿಂದಿನವರ ಬದುಕು ನಮಗೆ ಪ್ರೇರಣೆಯಾದಂತೆ, ಮುಂದಿನ ಪೀಳಿಗೆಗೂ ಸಹ ಅವುಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ನಾಡದೇವತೆ ಹೆಸರಿನಲ್ಲಿ ಆಚರಣೆ ಮಾಡುವ ದಸರಾ ಹಬ್ಬವನ್ನು ಆಚರಿಸುವ ಮೂಲಕ ಅವರಿಗೆ ತಿಳುವಳಿಕೆ ನೀಡಿ ಸಂಪ್ರದಾಯವನ್ನು ಇಮ್ಮಡಿಗೊಳಿಸಬೇಕು ಎಂದರು.


ನಾವು ನಮ್ಮ ಮನೆಯಲ್ಲಿ ದಶಕಗಳಿಂದಲೂ ದಸರಾ ಗೊಂಬೆಗಳನ್ನು ಪ್ರತಿಷ್ಟಾಪಿಸುತ್ತಿದ್ದು, ಈ ವರ್ಷ ವಿಶೇಷವಾಗಿ ನಮ್ಮ ಮನೆಯಲ್ಲಿ ದಸರಾ ಗೊಂಬೆಗಳನ್ನು ಮೈಸೂರು ಮಾದರಿಯಲ್ಲಿ ಕೂರಿಸಿದ್ದೇವೆ. ಇದರಲ್ಲಿ ಮೈಸೂರು ಅರಮನೆ, ಚಿಕ್ಕ ಗಡಿಯಾರ, ಚಾಮುಂಡೇಶ್ವರಿ ಮತ್ತು ದೇವಾಲಯ, ಪಟ್ಟದ ಗೊಂಬೆಗಳು, ಅರಮನೆಯ ವಾದ್ಯಗಳು, ಆನೆ ಅಂಬಾರಿ, ಮಹಿಷಾಸುರ, ಪಟ್ಟದ ಗೊಂಬೆಗಳಾದ ಲಕ್ಷ್ಮಿ ವೆಂಕಟೇಶ್ವರ, ಕೃಷ್ಣ ಲೀಲಾ ಕಾಳಿಂಗ ಮರ್ಧನ, ಮದುವೆ ದಿಬ್ಬಣ, ಕನ್ನಂಬಾಡಿ ಕಟ್ಟೆ ಹಾಗೂ ರೈತನ ಬದುಕಿಗೆ ಸಂಬಂಧಿಸಿದ ವಿವಿಧ ಆಚರಣೆಗಳ ಗೊಂಬೆಗಳನ್ನು ಕೂರಿಸಿ ನವರಾತ್ರಿ ಸಡಗರವನ್ನು ಇಮ್ಮಡಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.


ಈಗಾಗಲೇ ರಾಮನಗರ ಜಿಲ್ಲೆಯ ಬಹುತೇಕ ಎಲ್ಲಾ ಮಹಿಳಾ ವೈದ್ಯರು, ಇನ್ನಿತರ ನಮ್ಮ ವೈದ್ಯಕೀಯ ಸಹೋದ್ಯೋಗಿ ಮಿತ್ರರಷ್ಟೇ ಅಲ್ಲದೆ ಸಾರ್ವಜನಿಕರು ಸಹ ನಮ್ಮ ಮನೆಗೆ ಬಂದು ದಸರಾ ಹಬ್ಬದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ. ಇದು ನಮ್ಮ ಕುಟುಂಬಕ್ಕೆ ಸಾರ್ಥಕ ಭಾವವನ್ನು ಮೂಡಿಸಿದೆ ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑