೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅಕ್ಕಿ ಮತ್ತು ೭೦.೬೮ ರಾಗಿ ನಗರದ ಟಿಎಪಿಸಿಎಂಸ್ ಗೋದಾಮಿನಿಂದಲೇ ಕಳುವಾಗಿರುವ ಘಟನೆ ಜರುಗಿದೆ.
ಪ್ರತಿ ತಿಂಗಳು ತಾಲೂಕಿನಾದ್ಯಂತ ಇರುವ ೬೫ ನ್ಯಾಯಬೆಲೆ ಅಂಗಡಿಗಳಿಗೆ ಲಕ್ಷಾಂತರ ಪಡಿತರ ಕುಟುಂಬಗಳಿಗೆ ಅಕ್ಕಿ ಪೂರೈಕೆ ಮಾಡಲು ಸುಮಾರು ೨,೯೦೦ ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ತಾಲೂಕಿಗೆ ಪೂರೈಸುತ್ತದೆ. ತಾಲೂಕಿಗೆ ಪೂರೈಕೆಯಾದ ಅಕ್ಕಿಯನ್ನು ನಗರದ ಸಾತನೂರು-ಹಲಗೂರು ಮುಖ್ಯ ರಸ್ತೆಯಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿ ಸಂಗ್ರಹಿಸಿ, ಅಲ್ಲಿಂದ ತಾಲೂಕಿನಲ್ಲಿರುವ ಸುಮಾರು ೬೫ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ ಮಾಡಲಾಗುತ್ತದೆ.
ಗೋದಾಮಿನಲ್ಲಿ ಸಂಗ್ರಹವಾಗುವ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಸುಮಾರು ೧,೫೪೩.೬೫ ಕ್ವಿಂಟಾಲ್ ಅಕ್ಕಿ ಹಾಯ೭೦.೬೮ ಕ್ವಿಂಟಾಲ್ ರಾಗಿ ಗೋದಾಮಿನಿಂದ ಕಳುವಾಗಿರುವುದು ಶಿರಸ್ತೇದಾರರಾದ ಶಾಂತಕುಮಾರಿಯವರು ಗುರುವಾರ ನಡೆಸಿದ ಪರಿಶೀಲನೆ ವೇಳೆ ಗಮನಕ್ಕೆ ಬಂದಿದೆ. ಅವರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಅಕ್ಕಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ವ್ಯವಸ್ಥಾಪಕ ಬಿ ಆರ್ ಚಂದ್ರಶೇಖರ್ ಎಂಬುವನನ್ನು ಪುರ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಗೋದಾಮಿನಲ್ಲಿ ೧,೫೪೩.೬೫ ಕ್ವಿಂಟಾಲ್ ಅಕ್ಕಿ ಮತ್ತು ರಾಗಿ ನಾಪತ್ತೆಯಾಗಿರುವ ವಿಚಾರವನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ರಮ್ಯ ಸ್ಪಷ್ಟಪಡಿಸಿದ್ದಾರೆ. ಗೋದಾಮಿನಲ್ಲಿ ಗುರುವಾರ ಸಂಜೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ತಿಂಗಳಿನಲ್ಲಿ ಹಂಚಿಕೆಯಾಗಬೇಕಿದ್ದ ಅಕ್ಕಿಯ ಪರಿಶೀಲನೆ ವೇಳೆ ಗೋದಾಮುನಿಂದ ೧,೫೪೩.೬೫ ಕ್ವಿಂಟಾಲ್ನಷ್ಟು ಅಕ್ಕಿ ದಾಸ್ತಾನು ನಾಪತ್ತೆಯಾಗಿರುವುದು ಕಂಡು ಬಂದಿದೆ.
ಗೋದಾಮಿನಿಂದ ಅಪಾರ ಪ್ರಮಾಣದ ಅಕ್ಕಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಟಿಎಪಿಸಿಎಂಎಸ್ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳ ವಿರುದ್ಧ ದೂರು ನೀಡಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ಕಿ ಕಾಣೆಯಾಗಿರುವ ಹಿಂದೆ ಇಲಾಖಾ ಮಟ್ಟದಲ್ಲೂ ತನಿಖೆ ನಡೆಸಲಾಗುವುದು. ಚನ್ನಪಟ್ಟಣ ತಾಲೂಕು ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಗೋದಾಮನ್ನು ಸಂಪೂರ್ಣವಾಗಿ ಟಿಎಪಿಸಿಎಂಎಸ್ ಸಂಸ್ಥೆಯೇ ನಿರ್ವಹಣೆ ಮಾಡುತಿತ್ತು. ಅಕ್ಕಿ ನಾಪತ್ತೆಯಾಗಿರುವುದರ ಹಿಂದೆ ಸಂಪೂರ್ಣವಾಗಿ ಟಿಎಪಿಸಿಎಂಎಸ್ ಜವಾಬ್ದಾರಿ ಕಂಡು ಬಂದಿದ್ದು ತಕ್ಷಣ ಈ ಗೋದಾಮಿನಲ್ಲಿ ದಾಸ್ತಾನು ಮಾಡುವುದನ್ನು ರದ್ದುಪಡಿಸಿ ಸರ್ಕಾರದ ಉಗ್ರಾಣ ನಿಮಗದಿಂದಲೇ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪರಿಶೀಲನೆ ವೇಳೆ ತಹಶಿಲ್ದಾರ್ ಮಹೇಂದ್ರ, ಆಹಾರ ಸರಬರಾಜು ಶಿರಸ್ತೇದಾರರಾದ ಶಾಂತಕುಮಾರಿ ಆಹಾರ ನಿರೀಕ್ಷಕ ಚೇತನ್ ಕುಮಾರ್, ಗ್ರಾಮಾಂತರ ಪೋಲಿಸ್ ಉಪ ನಿರೀಕ್ಷಕ ಲಿಯಾಖತ್ ಉಲ್ಲಾ, ಪುರ ಪೋಲಿಸ್ ಠಾಣೆಯ ಹರೀಶ್, ಪೂರ್ವ ಆಕಾಶ್ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗೋದಾಮಿಗೆ ಇಲಾಖೆಯ ಅಧಿಕಾರಿಗಳು ಬೀಗ ಜಡಿದು ಸೀಜ್ ಮಾಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು