ಯುವಗಾಯಕ ಚಿನ್ಮಯ ರಾವ್ ಅವರಿಗೆ ಸನ್ಮಾನ
ಬೆಂಗಳೂರು : ಶ್ರೀ ವಾಸುದೇವಾನಂದ ಸರಸ್ವತಿ ವಿರಚಿತ "ಶ್ರೀ ಗುರುಸಂಹಿತಾ" ಎಂಬ ಶ್ರೀ ಗುರುಚರಿತ್ರೆಯ ಬೃಹತ್ ಗ್ರಂಥದ ಎಲ್ಲಾ 6,621 ಸಂಸ್ಕೃತ ಶ್ಲೋಕಗಳನ್ನು ತಮ್ಮ ಕಂಠದಲ್ಲಿ ಗಾಯನ ಮಾಡಿ ವಿಶ್ವದ ಅತಿ ಹೆಚ್ಚು ಅವಧಿಯ ಧ್ವನಿಮುದ್ರಿಕೆ ಎಂದು ವಿಶ್ವದಾಖಲೆಗೆ ಪಾತ್ರರಾದ ಯುವಗಾಯಕ ಚಿನ್ಮಯ ರಾವ್ ಅವರಿಗೆ ಇತ್ತೀಚೆಗೆ ಪುಣೆಯ ಶ್ರೀ ವಾಸುದೇವ ನಿವಾಸದಲ್ಲಿ ಆಶಿರ್ವಾದಪೂರ್ವಕವಾಗಿ ಸನ್ಮಾನಿಸಲಾಯಿತು.
ಇದೇ ಗ್ರಂಥದ ಮೊದಲ ಅಧ್ಯಾಯದ ಶ್ಲೋಕಗಳನ್ನು ಚಿನ್ಮಯ ರಾವ್ ಗಾಯನ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆಯಾಯಿತು. ಈ ಬೃಹತ್ ಧ್ವನಿಮುದ್ರಿಕೆ ರಚನೆಯಾದ ಬಗೆ ಹಾಗೂ ಧ್ವನಿಮುದ್ರಣದಲ್ಲಿನ ಸವಾಲುಗಳ ಬಗ್ಗೆ ನೆರೆದಿದ್ದ ಭಕ್ತಾದಿಗಳ ಮುಂದೆ ಚಿನ್ಮಯ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಆ ನಂತರದಲ್ಲಿ ಅಭಿನಂದನಾ ಪೂರ್ವಕವಾಗಿ ಚಿನ್ಮಯ ರಾವ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ ಶ್ರೀವಾಸುದೇವ ನಿವಾಸದ ಸ್ವಾಮೀಜಿ ಪರಮಪೂಜ್ಯ ಭಗವತಾಚಾರ್ಯ ಶ್ರೀ ಶರದ್ ಶಾಸ್ತ್ರೀ ಜೋಶಿ ಮಹರಾಜ್ ಅವರು ಇಂತಹ ಬೃಹತ್ತಾದ ಗ್ರಂಥದ ಇಷ್ಟೊಂದು ಸಂಸ್ಕೃತ ಶ್ಲೋಕಗಳನ್ನು ಕೇವಲ ಒಂದೇ ಗಾಯಕ ತನ್ನ ಕಂಠದಲ್ಲಿ ಧ್ವನಿಮುದ್ರಿಸಿ ಜಗತ್ತಿಗೆ ನೀಡುವ ಮೂಲಕ ಜಾಗತಿಕ ದಾಖಲೆಯನ್ನೂ ಮಾಡಿದ್ದಾರೆ. ಇದೊಂದು ಕಷ್ಟಸಾಧ್ಯದ ಕೆಲಸ. ಇದನ್ನು ಯಶಸ್ವಿಯಾಗಿ ಪೂರೈಸಿರುವ ಗುರುಭಕ್ತ ಚಿನ್ಮಯ ರಾವ್ ಅವರಿಗೆ ಪುಣೆಯ ವಾಸುದೇವ ನಿವಾಸದ ಪರವಾಗಿ ನಮ್ಮ ಹೃದಯಪೂರ್ವಕ ಅಭಿನಂದನೆಗಳು, ಭವಿಷ್ಯದ ದಿನಗಳಲ್ಲಿ ಅವರಿಂದ ಇನ್ನೂ ಹೆಚ್ಚಿನ ಇಂತಹ ಕಾರ್ಯಗಳು ನಡೆಯುವಂತಾಗಲಿ ಎಂದರು.
ಈ ಸಂದರ್ಭದಲ್ಲಿ ಶ್ರೀ ವಾಸುದೇವ ನಿವಾಸದ ವಿಶ್ವಸ್ಥ ಮಂಡಳಿಯ ಸದಸ್ಯರು ಹಾಗೂ ಭಕ್ತಾದಿಗಳು ಹಾಜರಿದ್ದರು. ಶ್ರೀ ವಾಸುದೇವ ನಿವಾಸದ ಮುಖ್ಯಸ್ಥ ಆನಂದ್ ಕುಲ್ಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು