ಮದುವೆ,ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಗಳನ್ನು ಆಯೋಜಿಸಲು ಪೂರ್ವಾನುಮತಿ ಅಗತ್ಯವಿಲ್ಲ
ಬೆಂಗಳೂರು: ಮದುವೆ, ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾ ಆಯೋಗದ ಪೂರ್ವಾನುಮತಿ ಅಗತ್ಯ
ವಿಲ್ಲ. ಈ ಕಾರ್ಯಕ್ರಮಗಳಿಗೆ ಚುನಾವಣಾ ನೀತಿ ಸಂಹಿತೆ ಅನ್ವಯ ಆಗುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಂಗಳವಾರ ಸ್ಪಷ್ಟಪಡಿಸಿದರು.
ಸಂವಹನದ ಕೊರತೆಯಿಂದಾಗಿ ಸಾರ್ವಜನಿಕರು ಮದುವೆ, ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕೇಳಲು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತೆ ಜಾರಿ ದಳದ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಹೇಳಿದರು.
ಯಾರು ಬೇಕಾದರೂ ಖಾಸಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು. ಆದರೆ, ಅಂತಹ ಕಾರ್ಯಕ್ರಮಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸುವಂತಿಲ್ಲ. ಈ ಕಾರ್ಯಕ್ರಮಗಳ ಮೇಲೆ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಾರಿ ದಳದ ಅಧಿಕಾರಿಗಳು ಕಣ್ಣಿಟ್ಟಿರುತ್ತಾರೆ ಎಂದೂ ಸಂಜೀವ್ ಕುಮಾರ್ ತಿಳಿಸಿದರು.
ಸಾರ್ವಜನಿಕರು ಆಯೋಜಿಸುವ ಖಾಸಗಿ ಕಾರ್ಯಕ್ರಮಗಳಲ್ಲಿ ರಾಜಕೀಯ ವ್ಯಕ್ತಿಗಳು ಉಡುಗೊರೆ ಹಂಚುವುದು ಅಥವಾ ಊಟ ಹಾಕಿಸುವ ಮೂಲಕ ಮತದಾರರನ್ನು ಒಲಿಸಿಕೊಳ್ಳುವ ಪ್ರಯತ್ನ ನಡೆಸಿದರೆ, ಆಯೋಗ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಹೇಳಿದರು.
ನಗದು ಮಿತಿ ₹ 50 ಸಾವಿರ
ಸಾರ್ವಜನಿಕರು ತಮ್ಮೊಂದಿಗೆ ಯಾವುದೇ ದಾಖಲೆಗಳಿಲ್ಲದೆ ₹ 50 ಸಾವಿರ ನಗದು ಇಟ್ಟುಕೊಂಡು ಪ್ರಯಾಣಿಸಬಹುದು ಎಂದು ಸಂಜೀವ್ ಕುಮಾರ್ ತಿಳಿಸಿದರು.ಅಲ್ಲದೆ, ₹10 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಉಡುಗೊರೆಯನ್ನು ತಮ್ಮೊಂದಿಗೆ ಒಯ್ಯಬಹುದು. ಇದಕ್ಕೆ ದಾಖಲೆಗಳ ಅಗತ್ಯ ಇರುವುದಿಲ್ಲ ಎಂದು ಸಂಜೀವ್ ಕುಮಾರ್ ಸ್ಪಷ್ಟಪಡಿಸಿದರು.
ನಗದು ಮೊತ್ತ ₹ 50 ಸಾವಿರಕ್ಕಿಂತ ಹೆಚ್ಚು ಇದ್ದರೆ, ಅದಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳಿಗೆ ವಿವರಣೆ ನೀಡಬೇಕು. ₹10 ಲಕ್ಷಕ್ಕಿಂತ ಹೆಚ್ಚು ನಗದು ಒಯ್ಯುತ್ತಿದ್ದರೆ ಅಂತಹವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗುತ್ತದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಚಾರಣೆ ನಡೆಸುತ್ತಾರೆ. ಸೂಕ್ತ ವಿವರಣೆ ಮತ್ತು ದಾಖಲೆಗಳು ಇಲ್ಲದಿದ್ದರೆ ನಗದು ವಶಕ್ಕೆ ತೆಗೆದುಕೊಳ್ಳುತ್ತಾರೆ. ವಿವರಣೆ ಮತ್ತು ದಾಖಲೆ ನೀಡಿದರೆ ಹಣವನ್ನು ಬಿಡುಗಡೆ ಮಾಡುತ್ತಾರೆ ಎಂದರು.
ಚುನಾವಣಾ ಅಕ್ರಮ ತಡೆಗಟ್ಟುವ ಉದ್ದೇಶದಿಂದ ರಾಜ್ಯದಲ್ಲಿ 1,225 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ವಾಹನಗಳು ಮತ್ತು ಲಗೇಜುಗಳ ತಪಾಸಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು
ಒಂದು ವೇಳೆ ಎಲ್ಲ ದಾಖಲೆಗಳಿದ್ದರೂ ಚೆಕ್ಪೋಸ್ಟ್ಗಳಲ್ಲಿ ತೊಂದರೆ ನೀಡಿದರೆ ಅಥವಾ ಅಕ್ಷಮ್ಯ ಎನಿಸುವ ರೀತಿಯಲ್ಲಿ ತಪಾಸಣೆ ನಡೆಸಿದರೆ ಜಿಲ್ಲಾ ಪಂಚಾಯಿತಿ ಸಿಇಒ ಅಧ್ಯಕ್ಷತೆಯ ಸಮಿತಿಗೆ ದೂರು ನೀಡಬಹುದು. ಈ ಸಮಿತಿ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತದೆ ಎಂದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು