Tel: 7676775624 | Mail: info@yellowandred.in

Language: EN KAN

    Follow us :


ನಾಮ ಪತ್ರ ಸಲ್ಲಿಕೆ ಇಂದಿನಿಂದ

Posted date: 17 Apr, 2018

Powered by:     Yellow and Red

ನಾಮ ಪತ್ರ ಸಲ್ಲಿಕೆ ಇಂದಿನಿಂದ

ಬೆಂಗಳೂರು : ಮುಂದಿನ ಐದು ವರ್ಷ ರಾಜ್ಯವನ್ನು ಆಳುವವರ ಹಣೆ ಬರಹ ಬರೆಯುವ ವಿಧಾನಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆಗೆ ಮಂಗಳವಾರ ರಾಜ್ಯದಾದ್ಯಂತ ಚಾಲನೆ ಸಿಗಲಿದೆ.

ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

224 ಕ್ಷೇತ್ರಗಳಲ್ಲಿ ಐದನ್ನು ಬಿಟ್ಟು ಉಳಿದ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು ಯಾರೆಂಬುದು ಈಗಾಗಲೇ ಸ್ಪಷ್ಟವಾಗಿದೆ. ಬಿಜೆಪಿ ಇನ್ನು 70 ಕ್ಷೇತ್ರಗಳಲ್ಲಿನ ಹುರಿಯಾಳುಗಳನ್ನು ಮಾತ್ರ ಆಯ್ಕೆ ಮಾಡಲು ಬಾಕಿ ಇದೆ. ಜೆಡಿಎಸ್‌ ಇನ್ನೂ 98 ಕಡೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಹಾಗಾಗಿ, ರಾಜ್ಯದ ಬಹುಪಾಲು ಕ್ಷೇತ್ರಗಳಲ್ಲಿನ ಯಾರು ಯಾರ ವಿರುದ್ಧ ಸೆಣಸಲಿದ್ದಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ಚುನಾವಣಾ ಪ್ರಕ್ರಿಯೆಯ ಆರಂಭದಿಂದಲೇ ರಾಜಕೀಯ ಕಣ ಮತ್ತಷ್ಟು ರಂಗೇರಲಿದೆ.

ಅಭ್ಯರ್ಥಿಯು ಬೇರೆ ಕ್ಷೇತ್ರದ ಮತದಾರರಾಗಿದ್ದರೆ, ಆ ಕ್ಷೇತ್ರದ ಚುನಾವಣಾಧಿಕಾರಿಯಿಂದ ದೃಢೀಕರಿಸಿದ ಪತ್ರವನ್ನು ಸಲ್ಲಿಸುವುದು ಕಡ್ಡಾಯ.

ನಾಮಪತ್ರದ ಜತೆಗೆ ಎರಡು ಅಫಿಡವಿಟ್‌ಗಳನ್ನು ಸಲ್ಲಿಸಬೇಕು. ಅಭ್ಯರ್ಥಿ, ಅವರ ಪತ್ನಿ ಹಾಗೂ ಅವಲಂಬಿತರ ಸ್ಥಿರಾಸ್ತಿ, ಚರಾಸ್ತಿ, ಬ್ಯಾಂಕ್‌ಗಳಲ್ಲಿರುವ ಹಣ, ದೂರು ದಾಖಲಾಗಿರುವ ಕುರಿತ ಮಾಹಿತಿಯನ್ನು ಮೊದಲ ಅಫಿಡವಿಟ್‌ನಲ್ಲಿ ಘೋಷಿಸಬೇಕು.

ನಾಮಪತ್ರದ ಎಲ್ಲ ಕಾಲಂಗಳನ್ನು ಭರ್ತಿ ಮಾಡಬೇಕು. ಖಾಲಿ ಬಿಟ್ಟರೆ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಚುನಾವಣಾಧಿಕಾರಿ ಸಮ್ಮುಖದಲ್ಲಿ ಅಭ್ಯರ್ಥಿ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಆ ಪತ್ರಕ್ಕೆ ಸಹಿ ಮಾಡಬೇಕು. ಇಲ್ಲದಿದ್ದರೆ ನಾಮಪತ್ರ ತಿರಸ್ಕರಿಸಲಾಗುತ್ತದೆ.

ಅಭ್ಯರ್ಥಿಯು ಸರ್ಕಾರಿ ಸೌಲಭ್ಯ ಪಡೆದಿದ್ದರೆ, ಸರ್ಕಾರಿ ವಸತಿಗೃಹ ಬಳಸಿಕೊಂಡು ಅದರ ಬಾಡಿಗೆ ಬಾಕಿ ಇರಿಸಿಕೊಂಡಿದ್ದರೆ, ವಿದ್ಯುತ್‌, ನೀರಿನ ಬಿಲ್‌ ಬಾಕಿ ಇದ್ದರೆ, ಈ ಕುರಿತ ವಿವರಗಳನ್ನು ಎರಡನೇ ಅಫಿಡವಿಟ್‌ನಲ್ಲಿ ಘೋಷಿಸಿಕೊಳ್ಳಬೇಕು.

ಫಾರಂ– ಎ (ಅಭ್ಯರ್ಥಿಗೆ ಫಾರಂ ಬಿ ನೀಡಲು ಪಕ್ಷದ ಮುಖಂಡರು ದೃಢೀಕರಿಸುವ ಪತ್ರ), ಫಾರಂ– ಬಿ (ಕ್ಷೇತ್ರದ ಅಭ್ಯರ್ಥಿಯನ್ನು ಪಕ್ಷವು ದೃಢೀಕರಿಸುವ ಪತ್ರ) ಸಲ್ಲಿಸಬೇಕು. ಇವುಗಳ ಮೂಲ ಪ್ರತಿಗಳನ್ನೇ ಸಲ್ಲಿಸಬೇಕು. ನಕಲು ಅಥವಾ ಫ್ಯಾಕ್ಸ್‌ ಪ್ರತಿಯಾದರೆ ಅವುಗಳನ್ನು ತಿರಸ್ಕರಿಸಲಾಗುತ್ತದೆ.

ಚುನಾವಣಾಧಿಕಾರಿ ಕಚೇರಿಗೆ ಅಭ್ಯರ್ಥಿ ಸೇರಿದಂತೆ ಐವರಿಗಿಂತ ಹೆಚ್ಚು ಮಂದಿ ಒಟ್ಟಿಗೆ ಭೇಟಿ ನೀಡುವಂತಿಲ್ಲ.

ಚುನಾವಣಾಧಿಕಾರಿ ಕಚೇರಿಯ 100 ಮೀಟರ್‌ ವ್ಯಾಪ್ತಿಯಲ್ಲಿ 3ಕ್ಕಿಂತ ಹೆಚ್ಚಿನ ವಾಹನಗಳು ಒಟ್ಟಿಗೆ ಬರುವಂತಿಲ್ಲ.

ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿದ್ದು, ಪ್ರತಿಯೊಂದು ಚಲನವಲನಗಳೂ ದಾಖಲಾಗುತ್ತದೆ.

ಠೇವಣಿ ಎಷ್ಟು?
ಸಾಮಾನ್ಯ ಅಭ್ಯರ್ಥಿಗೆ; ₹10 ಸಾವಿರ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ; ₹5 ಸಾವಿರ

ನಾಮಪತ್ರ  ಸ್ವೀಕರಿಸುವ ಸಮಯ

ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ

ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಸ್ವೀಕರಿಸುವುದಿಲ್ಲ.

ಪ್ರತ್ಯೇಕ ಬ್ಯಾಂಕ್‌ ಖಾತೆ ಕಡ್ಡಾಯ

ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಹೊಸ ಬ್ಯಾಂಕ್‌ ಖಾತೆ ತೆರೆಯುವುದು ಕಡ್ಡಾಯ.

ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ₹ 28 ಲಕ್ಷ ವೆಚ್ಚದ ಮಿತಿ ನಿಗದಿಪಡಿಸಲಾಗಿದೆ. ಠೇವಣಿ ಇಡುವುದು ಸೇರಿದಂತೆ ಚುನಾವಣಾ ಖರ್ಚು, ವೆಚ್ಚಗಳನ್ನು ಈ ಖಾತೆ ಮೂಲಕವೇ ನಿರ್ವಹಣೆ ಮಾಡಬೇಕು. ಅನ್ಯ ಬ್ಯಾಂಕ್‌ ಖಾತೆಗಳಲ್ಲಿರುವ ಹಣವನ್ನು ಚುನಾವಣೆಗೆ ವೆಚ್ಚ ಮಾಡುವಂತಿಲ್ಲ.

ಪಕ್ಷವಾರು ಘೋಷಿತ ಹುರಿಯಾಳುಗಳ ಸಂಖ್ಯೆ

ಕಾಂಗ್ರೆಸ್‌; 218

ಬಿಜೆಪಿ; 154

ಜೆಡಿಎಸ್‌; 124

ಜೆಡಿಯು; 15

ಆರ್‌ಪಿಐ; 70

ಎಎಪಿ; 18

ಸ್ವರಾಜ್‌ ಇಂಡಿಯಾ; 11

ಎಂಇಪಿ–149

(ಸಂಗ್ರಹ ವರದಿ)

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑