ಮೈಸೂರು ಭಾಗದಲ್ಲಿ ಹೇಳಿದವರಿಗೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಪಕ್ಷೇತರರಾಗಿ ಯೋಗೇಶ್ವರ್ ಕಣಕ್ಕೆ ?
ಹಳೆ ಮೈಸೂರು ಭಾಗಕ್ಕೆ ನೀವೆ ನಾಯಕರು, ಗೆದ್ದಲ್ಲಿ ನೀವೂ ಸಹ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆಯುವಿರಿ ಎಂದು ಹೇಳಿ ಬಿಜೆಪಿಗೆ ಯೋಗೇಶ್ವರ್ ರವರನ್ನು ಕರೆತಂದಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಹಳೇ ಮೈಸೂರು ಭಾಗದಲ್ಲಿ ನಾನೇಳಿದರವರಿಗೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧಾರಿಸಿದ್ದಾರೆ ಎನ್ನುವ ಸುದ್ದಿ ಚನ್ನಪಟ್ಟಣದಾದ್ಯಂತ ಹರಿದಾಡುತ್ತಿದೆ.
ಹಳೇ ಮೈಸೂರು ಭಾಗದಲ್ಲಿ ಮೈಸೂರು, ಕೊಡಗು, ಬೆಂಗಳೂರು ನಗರ ಕ್ಷೇತ್ರದ ಕೆಲವು ಕ್ಷೇತ್ರಗಳನ್ನು ಹೊರತುಪಡಿಸಿದರೆ ಹೆಚ್ಚು ಕ್ಷೇತ್ರಗಳು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವು. ನಾನೊಬ್ಬ ರಾಜ್ಯದ ಸಮರ್ಥ ನಾಯಕ ಎನಿಸಿಕೊಳ್ಳಲು ಇದೇ ಸುಸಮಯ ಎಂದು ಹೊರಟ ಯೋಗೇಶ್ವರ್ ಗೆಲ್ಲುವ ಕ್ಷೇತ್ರಗಳಾದ ಮೈಸೂರು ಮತ್ತು ಕೊಡಗಿಗೂ ಕಾಲಿಟ್ಟರು.
ಇದನ್ನು ಸಹಿಸದ ಸಂಸದ ಪ್ರತಾಪ್ ಸಿಂಹ ಹಾಗೂ ಹಲವಾರು ನಾಯಕರು ಅವರನ್ನು ನಮ್ಮ ಕ್ಷೇತ್ರಗಳ ಕಡೆ ಕಾಲಿಡದಂತೆ ನೋಡಿಕೊಂಡಿದ್ದು ಗುಟ್ಟಾಗಿ ಉಳಿಯಲಿಲ್ಲ.
ಅಷ್ಟರಲ್ಲಾಗಲೆ ಹಳೆ ಮೈಸೂರು ಭಾಗ ಹಾಗೂ ರಾಜ್ಯ ನಾಯಕರ ಸ್ಥಾನದಲ್ಲಿ ಕಲ್ಪಸಿಕೊಂಡಿದ್ದ ಯೋಗೇಶ್ವರ್ ಅಲ್ಲಿನ ಸ್ಥಳೀಯ ನಾಯಕರನೇಕರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದರೆನ್ನಲಾಗಿದೆ.
ಯಾವಾಗ ಇವರು ಕೇಳಿದ ಒಬ್ಬರಿಗೂ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ್ದರಿಂದ ಬೇಸತ್ತು ಸೋಮವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಬಿಜೆಪಿ ಪಕ್ಷದಿಂದ ಒಂದು ಹಾಗೂ ಪಕ್ಷೇತರರಾಗಿಯೂ ಒಂದು ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆಂದು ದೃಶ್ಯ ಮಾಧ್ಯಮದ ಜೊತೆಗೆ ಅನೇಕ ಜನರ ಬಾಯಲ್ಲಿ ಹರಿದಾಡುತ್ತಿದೆ.
ಒಂದೇ ಕಲ್ಲಿಗೆ ಎರಡು ಮತ್ತೆರಡು ಹಕ್ಕಿ ಹೊಡೆಯುವ ಹುನ್ನಾರ:
ಬಿಜೆಪಿಯ ಪಕ್ಷದಲ್ಲಿ ನಾನೊಬ್ಬ ಸಮರ್ಥ ನಾಯಕ ಎಂದು ಗುರುತಿಸಿಕೊಳ್ಳಲು ಇದೊಂದು ಸದಾವಕಾಶ ಎಂದು ನಂಬಿರುವ ಯೋಗೇಶ್ವರ್ ಮುಂದಿನ ದಿನಗಳಲ್ಲಿ ನನ್ನ ಮಾತು ನಡೆಯಬೇಕು ಎನ್ನುವ ಕಾರಣದಿಂದ ಬೆದರುಬೊಂಬೆಯ ಪ್ರದರ್ಶನದಂತೆ ಬಿಜೆಪಿ ಮತ್ತು ಪಕ್ಷೇತರರಾಗಿ ಸ್ಪರ್ಧಿಸಲು ಹವಣಿಸುತ್ತಿದ್ದಾರೆ.
ಇಲ್ಲಿ ಮತ್ತೊಂದು ಗಿಮಿಕ್ ಸಹ ಅಡಗಿದೆ, ಇಂದಿನ ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಯಾವುದೇ ಪಕ್ಷಗಳು ಸಹ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಾರಿರುವುದರಿಂದ ಬಿಜೆಪಿ ಪಕ್ಷದಿಂದ ಗೆದ್ದೂ ಪಕ್ಷ ಅಧಿಕಾರಕ್ಕೆ ಬರಲಿಲ್ಲವೆಂದರೆ ಪ್ರಯೋಜನಕ್ಕೆ ಬರುವುದಿಲ್ಲ.
ಪಕ್ಷೇತರನಾಗಿ ಗೆದ್ದು ಬಂದರೆ ಯಾವ ಪಕ್ಷ ಅಧಿಕಾರಕ್ಕೆ ಬಂದರೂ ನನಗೆ ಬೇಡಿಕೆ ಇರುತ್ತದೆ ಎನ್ನುವ ದೂರಾಲೋಚನೆಯನ್ನು ಮಾಡಿದ್ದಾರೆ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ.
ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಹೆಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಿಂದ ಹೆಚ್ ಎಂ ರೇವಣ್ಣ ಸ್ಪರ್ಧಿಸಿದ್ದರೂ ಸಹ ಅವರ್ಯಾರು ನನಗೆ ಲೆಕ್ಕವಿಲ್ಲ, ಬಿಜೆಪಿಯ ಹಂಗೂ ನನಗೆ ಬೇಕಾಗಿಲ್ಲ ನಾನು ವ್ಯಕ್ತಿಗತವಾಗಿ ಗೆದ್ದೇ ಗೆಲ್ಲುತ್ತೇನೆ ಎನ್ನುವ ಧೈರ್ಯವಿದ್ದರೂ ಇರಬಹುದು.
ಜೊತೆಗೆ ತನ್ನ ಮಗಳಿಗೂ ಸಹ ಮದ್ದೂರು ಅಥವಾ ಯಾವುದಾದರೂ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸುವ ಸಂಬಂದ ಹಿರಿಯ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎನ್ಜುವುದು ಕುಟುಂಬ ರಾಜಕಾರಣದಲ್ಲಿಯೂ ತೊಡಗಿಸಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸುದ್ದಿ ಹರಿದಾಡುತಿದ್ದು ಎಷ್ಟರ ಮಟ್ಟಿಗೆ ಸಫಲವಾಗುವುದೆಂದು ಕಾದುನೋಡಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ: 984585613
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು