ಜೆಡಿಎಸ್/ಕಾಂಗ್ರೆಸ್ ಖರ್ಗೆ ಸಿಎಂ, ರೇವಣ್ಣ ಡಿಸಿಎಂ. ಜೆಡಿಎಸ್/ಬಿಜೆಪಿ ಹೆಚ್ಡಿಕೆ ಸಿಎಂ/ಕೇಂದ್ರಮಂತ್ರಿ !?
ಇಂದು ಕರ್ನಾಟಕದಲ್ಲಿ ಮೊನ್ನೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಬರಲು ಸಜ್ಜಾಗಿದೆ, ಬಹುತೇಕ ಎಲ್ಲಾ ಮಾಧ್ಯಮ ಮತ್ತು ಸಂಘಸಂಸ್ಥೆಗಳ ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರ ಬರುತ್ತದೆ ಎಂದೇ ಟಾಂ ಟಾಂ ಹೊಡೆದಿದ್ದಾರೆ.
ಸಮ್ಮಿಶ್ರ ಸರ್ಕಾರ ಅಂದರೆ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ ಸರ್ಕಾರ ರಚನೆ ಮಾಡುವುದು ಸುಲಭವಲ್ಲ, ಯಾಕೆಂದರೆ ಅದಕ್ಕೆ ನೂರಾರು ಕಾರಣಗಳ ಜೊತೆಗೆ ತೊಡರುಗಳು ಬಹಳಷ್ಟಿವೆ, ಬಹು ಮುಖ್ಯವಾದ ಸಂಗತಿ ಎಂದರೆ ರಾಷ್ಟ್ರೀಯ ಪಕ್ಷಗಳಾದ ಇವು ಸಾರ್ವಜನಿಕರಿಗೆ ಉತ್ತರ ಕೊಡಲಾಗದಷ್ಟು ಎಡರುತೊಡರುಗಳನ್ನು ತಮ್ಮ ಮೈಮೇಲೆ ಎಳೆದುಕೊಂಡಿವೆ.
ಸಮ್ಮಿಶ್ರ ಸರ್ಕಾರ ರಚನೆಯಾಗಬೇಕೆಂದರೆ ಈ ಎರಡು ರಾಷ್ಟ್ರೀಯ ಪಕ್ಷಗಳಿಗೂ ಪ್ರಾದೇಶಿಕ ಪಕ್ಷದ ಅವಶ್ಯಕತೆ ಬಹಳಷ್ಟಿದೆ, ಅವರಿಗಾಗಿಯೇ ಕರ್ನಾಟಕದಲ್ಲಿ ಜೆಡಿ(ಎಸ್) ಪಕ್ಷ ಸಜ್ಜಾಗಿದೆ ಎಂದರೆ ತಪ್ಪಾಗಲಾರದು, ಜೆಡಿ(ಎಸ್) ಪಕ್ಷ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಕನಸಿನಮಾತು, ಅಧಿಕಾರದಲ್ಲಿರಬೇಕು ಎನ್ನುವುದಕ್ಕೋಷ್ಕರವಾದರು ಜೆಡಿ(ಎಸ್) ಒಂದು ರಾಷ್ಟ್ರೀಯ ಪಕ್ಷದ ಜೊತೆ ಹೋಗಲೇಬೇಕಾಗಿದೆ.
ನಂಬಲರ್ಹ, ಬಲ್ಲ ಮೂಲಗಳ ಪ್ರಕಾರ ಜೆಡಿ(ಎಸ್) ಮತ್ತು ಈ ಎರಡು ರಾಷ್ಟ್ರೀಯ ಪಕ್ಷಗಳ ಜೊತೆ ಒಂದು ಹಂತದಲ್ಲಿ ಈಗಾಗಲೇ ಒಡಂಬಡಿಕೆಯಾಗಿದೆಯಂತೆ.
ಜೆಡಿ(ಎಸ್) ಕಾಂಗ್ರೆಸ್ ಪಕ್ಷದ ಜೊತೆ ಹೋದರೆ ದಲಿತ ಮುಖ್ಯಮಂತ್ರಿ ಕೂಗೆದ್ದಿರುವುದರಿಂದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಯವರನ್ನು ಮುಖ್ಯಮಂತ್ರಿಯಾಗಿ ಮಾಡಿ ದೇವೇಗೌಡರ ಅತ್ಯಂತ ಪ್ರೀತಿಯ ಪುತ್ರ ಹೆಚ್ ಡಿ ರೇವಣ್ಣನವರನ್ನು ಉಪ ಮುಖ್ಯಮಂತ್ರಿ ಮಾಡಲು ಮಾತುಕತೆಯಾಗಿದೆಯಂತೆ.
ಅಂದರೆ ಇಲ್ಲಿ ಕುಮಾರಸ್ವಾಮಿ ಮತ್ತು ದೇವೇಗೌಡರು ಧರ್ಮಸಿಂಗ್ ಸರ್ಕಾರದ ಮಾದರಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸಲಿದ್ದಾರೆ.
ಒಂದು ವೇಳೆ ಜೆಡಿ(ಎಸ್) ಬಿಜೆಪಿಯ ಜೊತೆ ಸರ್ಕಾರ ರಚಿಸಿದರೆ ಹೆಚ್ ಡಿ ಕುಮಾರಸ್ವಾಮಿ ಯವರು ನಾನೇ ಮುಖ್ಯಮಂತ್ರಿ ಆಗಬೇಕೆಂದು ಬೇಡಿಕೆ ಇಡುತ್ತಾರೆ, ಆ ಸಂದರ್ಭದಲ್ಲಿ ಯಡಿಯೂರಪ್ಪ ರಾದಿಯಾಗಿ ಬಿಜೆಪಿ ಮುಖಂಡರು ಒಪ್ಪುವುದಿಲ್ಲ, ಇದಕ್ಕೆ ಪರ್ಯಾಯವಾಗಿ ಕೆಲ ತಿಂಗಳ ಮಟ್ಟಿಗೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿ ಹೆಚ್ ಡಿ ರೇವಣ್ಣನವರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಒಳ ಒಪ್ಪಂದವಾಗಿದೆಯಂತೆ.
ಇದರ ಜೊತೆಗೆ ಬಿಜೆಪಿಯೂ ಇನ್ನೂ ಒಂದು ಹೆಜ್ಜೆ ಮುಂದು ಹೋಗಿ ಈ ಮೇಲಿನ ಅಧಿಕಾರಕ್ಕೆ ದೊಡ್ಡಗೌಡರು ತಕರಾರಿಲ್ಲದೆ ಒಪ್ಪಿಕೊಂಡದ್ದೆ ಆದರೆ ಮುಖ್ಯಮಂತ್ರಿ ಆಕಾಂಕ್ಷಿಯಾದ ಕುಮಾರಸ್ವಾಮಿ ಯವರನ್ನು ದೇವೇಗೌಡರ ಸಮ್ಮುಖದಲ್ಲಿಯೇ ಕೇಂದ್ರದ ಮಂತ್ರಿಯಾಗಿ ಮಾಡಲಾಗುವುದೆಂದು ಖುದ್ದು ಎರಡು ಪಕ್ಷದ ಹಿರಿಯರ ಜೊತೆಗೆ ಮಾತುಕತೆಯಾಗಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ.
ಸಮ್ಮಿಶ್ರ ಸರ್ಕಾರ ಬಂದು ಯೋಗೇಶ್ವರ್ ಏನಾದರೂ ಗೆದ್ದರೆ ಅವರಿಗೆ ಮೂರು ಪಕ್ಷಗಳಿಂದಲೂ ಅವರು ಹೊರಗುಳಿಯುತ್ತಾರೆ, ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಕೊಡುವ ಜೆಡಿ(ಎಸ್) ಪಕ್ಷವೇ ಇಲ್ಲಿ ನಿರ್ಣಾಯಕ ಆಗುವುದರಿಂದ ಯೋಗೇಶ್ವರ್ ಗೆದ್ದರೂ ಸಹ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೂ ಅಚ್ಚರಿ ಪಡಬೇಕಾಗಿಲ್ಲ.
ಜೆಡಿ(ಎಸ್) ಸಂಪೂರ್ಣ ಬಹುಮತದಿಂದ ಗೆದ್ದು ಸರ್ಕಾರ ರಚಿಸಿದರೆ ಅದು ಕರ್ನಾಟಕದ ರೈತರ ಪುಣ್ಯ.
ಸಮ್ಮಿಶ್ರ ಸರ್ಕಾರ ರಚನೆಯ ಸಂದರ್ಭ ಒದಗಿಬಂದರೆ ಅದು ದೊಡ್ಡಗೌಡರ ಕುಟುಂಬದ ಅಧಿಕಾರದ ಪುಣ್ಯ.
ಕಾಂಗ್ರೆಸ್ ಜೊತೆಗೆ ಬಂದರೆ ಖರ್ಗೆ, ಪರಂ ರವರ ಪುಣ್ಯ.
ಬಿಜೆಪಿ ಜೊತೆ ಹೋದರೆ ಯಡ್ಯೂರಪ್ಪ, ಈಶ್ವರಪ್ಪ ರ ಪುಣ್ಯ.
ಸಮ್ಮಿಶ್ರ ಸರ್ಕಾರ ಬಂದರೆ ಒಟ್ಟಾರೆ ಕರ್ನಾಟಕ ಜನತೆಯ ಪೂರ್ವಜನ್ಮದ ಪಾಪ !.
ಗೋ ರಾ ಶ್ರೀನಿವಾಸ...
ಮೊ: 9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು