Tel: 7676775624 | Mail: info@yellowandred.in

Language: EN KAN

    Follow us :


ಯೋಗೇಶ್ವರ್ ರಾಮನಗರದಲ್ಲಿ ಸ್ಪರ್ಧಿಸಿದರೆ ಗೆಲುವು ಬಹುತೇಕ ಖಚಿತ.

Posted date: 20 May, 2018

Powered by:     Yellow and Red

ಯೋಗೇಶ್ವರ್ ರಾಮನಗರದಲ್ಲಿ ಸ್ಪರ್ಧಿಸಿದರೆ ಗೆಲುವು ಬಹುತೇಕ ಖಚಿತ.

ಈ ಬಾರಿಯ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಎದುರು ಸೋಲುಂಡ ಸಿ ಪಿ ಯೋಗೇಶ್ವರ್ ರವರು ತೆರವಾದ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದರೇ ಅವರ ಗೆಲುವು ಖಚಿತ ಎಂಬುದಾಗಿ ರಾಮನಗರ ಕಾಂಗ್ರೆಸ್ ನ ನಂಬಲರ್ಹ ವ್ಯಕ್ತಿಗಳ ಅನಿಸಿಕೆಯಾಗಿದೆ.


ಯಾವುದೇ ಪಕ್ಷದ ನಾಯಕರು ಗೆಲ್ಲುವುದು ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರ ಶ್ರಮದಿಂದ, ಪ್ರತಿಬಾರಿ ಚುನಾವಣೆಯಲ್ಲಿಯೂ ಈ ವ್ಯಕ್ತಿಗಳು ತಮ್ಮ ಸ್ವಾಭಿಮಾನವನ್ನು ಕೆಲವು ಬಾರಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ತಮ್ಮ ಎದುರಾಳಿ ಪಕ್ಷದವರ ಜೊತೆ ಪೈಪೋಟಿಗಿಳಿದು ತಮ್ಮ ನಾಯಕನನ್ನು ಗೆಲ್ಲಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.


ಎಂದೋ ಒಂದು ದಿನ ಬಂದು ಕಾರ್ಯಕರ್ತರನ್ನು ಹುರಿದುಂಬಿಸಿ ಎದುರಾಳಿಯನ್ನು ಬಯ್ದು ಹೋಗುವ ನಾಯಕ ಗೆದ್ದ ನಂತರ ತನ್ನ ಅವಶ್ಯಕತೆಗನುಗುಣವಾಗಿ ಎದುರಾಳಿಯ ಜೊತೆ ಒಂದೇಬಾರಿಗೆ ಕುಚುಕು ಗೆಳೆಯನಾಗಿ ಬಿಡುತ್ತಾನೆ.

ಇತ್ತ ಹೊಡೆದಾಡಿ, ಬಡಿದಾಡಿ ತನ್ನ ಕುಟುಂಬದ ಸಮೇತ ಅನೇಕರನ್ನು ಎದುರು ಹಾಕಿಕೊಂಡ ನಿಷ್ಠಾವಂತ ಕಾರ್ಯಕರ್ತರ ಗತಿ ! ಅಬ್ಬಾ ತಾವೆಲ್ಲರೂ ಅವನ ಸ್ಥಾನದಲ್ಲಿ ನಿಮ್ಮನ್ನು ಒಮ್ಮೆ ಕಲ್ಪಿಸಿಕೊಳ್ಳಿ ! ?


ಇಂತಹ ವಾತಾವರಣವೀಗ ರಾಮನಗರ ಕಾಂಗ್ರೆಸ್ ಪಾಳೆಯದಲ್ಲಿನ ನಿಷ್ಠಾವಂತ ಕಾರ್ಯಕರ್ತರಲ್ಲಿ ಉಲ್ಬಣಗೊಳ್ಳುತ್ತಿದೆ, ಕೇವಲ ಮೂವ್ವತ್ತೆಂಟು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದ ಜೆಡಿ(ಎಸ್) ಜೊತೆ ಅವರೂ ಕರೆಯದೇ ಇದ್ದರೂ ಇವರೇ ನಾವು ಬೆಂಬಲ ನೀಡುತ್ತೇವೆ ನೀವು ಸರ್ಕಾರ ರಚಿಸಿ ಎಂದು ದುಂಬಾಲು ಬಿದ್ದಿದ್ದು ಅವರ ಶೋಚನೀಯ ಸ್ಥಿತಿಯನ್ನು ತೋರಿಸುತ್ತದೆ.

ಅಷ್ಟೇ ಅಲ್ಲಾ ಏನೂ ಶರತ್ತುಗಳಿಲ್ಲದೆ (unconditional support) ಬೆಂಬಲ ಸೂಚಿಸಿದ್ದು ಕಾಂಗ್ರೆಸ್ ಅಧೋಗತಿಗಿಳಿದಿದೆ ಎಂಬುದನ್ನು ತೋರಿಸುತ್ತದೆ.


ಈ ವಿಷಯವಾಗಿ ರಾಮನಗರದಲ್ಲಾಗಲೇ ಕಾಂಗ್ರೆಸ್ಸಿಗರು ಒಂದು ಪತ್ರಿಕಾಗೋಷ್ಠಿ ಕರೆದು ಜೆಡಿ(ಎಸ್) ನವರು ಬರುವ ತನಕ ಕಾಯಬೇಕಾಗಿತ್ತು, ಇಷ್ಟೊಂದು ಅವಸರದ ಅವಶ್ಯಕತೆ ಇರಲಿಲ್ಲ ಎಂಬ ಹೇಳಿಕೆಯನ್ನು ಕೊಡುವುದರ ಮೂಲಕ ತಮ್ಮ ಅಸಮಾಧಾನವನ್ನು ಹೊರಗೆಡವಿದ್ದಾರೆ.


ಅಂದರೆ ಹೆಚ್ ಡಿ ಕುಮಾರಸ್ವಾಮಿ ಯವರು ರಾಜಿನಾಮೆ ನೀಡಿರುವ ರಾಮನಗರ ಕ್ಷೇತ್ರಕ್ಕೆ ಜೆಡಿ(ಎಸ್) ನಿಂದ ಅಭ್ಯರ್ಥಿಯನ್ನು ಹಾಕುತ್ತಾರೆ, ಸರ್ಕಾರದಲ್ಲಿ ಮೈತ್ರಿ ಇರುವುದರಿಂದ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಹಾಕುವುದಿಲ್ಲ, ಇನ್ನೂ ಬಿಜೆಪಿಗೆ ಅಲ್ಲಿ ನೆಲೆಯಿಲ್ಲ.


ಕಾಂಗ್ರೆಸ್ ನಿಂದ ಬಲಿಷ್ಠ ಅಭ್ಯರ್ಥಿಯನ್ನು ಹಾಕದಿದ್ದರೆ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆನ್ನು ತೋರಿಸುವ ಕೆಲಸ ಮಾಡಲು ಸಜ್ಜಾಗಿರುವುದು ಕಂಡುಬರುತ್ತಿದೆ.


ಸಿ ಪಿ ಯೋಗೇಶ್ವರ್ ರಾಮನಗರ ಕ್ಷೇತ್ರಕ್ಕೆ ಚಿರಪರಿಚಿತರಾಗಿರುವುದರಿಂದ ಬಿಜೆಪಿ ಪಕ್ಷವು ಅವರ ಬೆನ್ನಿಗಿರುವುದರಿಂದ ಕಾಂಗ್ರೆಸ್ ನ ಮುಖಂಡರನ್ನು ಭೇಟಿ ಮಾಡಿದರೆ, ಅವರಿಗಾಗಿರುವ ಅನ್ಯಾಯ, ಮೋಸದ ಜೊತೆಗೆ ಅವಮಾನಗೊಂಡಿರುವ ಹಲವಾರು ನಾಯಕರು ಇವರ ಜೊತೆ ಕೈಜೋಡಿಸಿ ಸಿ ಪಿ ಯೋಗೇಶ್ವರ್ ಗೆಲುವಿಗೆ ಸಹಕರಿಸಬಹುದು.


ಯಾಕೆಂದರೆ ಈ ಮೈತ್ರಿ ಸರ್ಕಾರಗಳು ಅವಧಿಪೂರ್ವ ಪ್ರಸವಕ್ಕೊಳಗಾಗುವುದೇ ಹೆಚ್ಚು, ಐದು ವರ್ಷ ಪೂರೈಸೋದು ಬಹಳ ಕಷ್ಟ, ಏನೂ ಆಗದೆ ಈ ಮೈತ್ರಿ ಸರ್ಕಾರ ಐದು ವರ್ಷ ಪೂರೈಸಿದರೆ ಅದು ದಾಖಲೆಯಾಗಿ ಉಳಿಯುತ್ತದೆ.

ಇದರ ಜೊತೆಗೆ ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳೆರಡು ಬಹುಸಂಖ್ಯಾತರಾದ ಲಿಂಗಾಯತರನ್ನು ಎರಡು ರೀತಿಯಲ್ಲಿ ಎದುರು ಹಾಕಿಕೊಂಡಂತಾಗಿದೆ, ಅದರ ಲಾಭವನ್ನು ಸಿ ಪಿ ಯೋಗೇಶ್ವರ್ ಮತ್ತು ಬಿಜೆಪಿ ಪಕ್ಷ ಪಡೆದುಕೊಳ್ಳಬಹುದಾಗಿದೆ.


ಹಾಗಾಗಿ ಸಿ ಪಿ ಯೋಗೇಶ್ವರ್ ಇಂದಿನಿಂದಲೇ ರಾಮನಗರ ಅಕಾಡಕ್ಕಿಳಿದರೆ ಚನ್ನಪಟ್ಟಣದ ಸೋಲು ರಾಮನಗರದಲ್ಲಿ ಗೆಲುವಿನ ಮೆಟ್ಟಿಲಾಗುವುದರಲ್ಲಿ ಸಂದೇಹವಿಲ್ಲ.

 

ಗೋ ರಾ ಶ್ರೀನಿವಾಸ...

ಮೊ: 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑