16 ಬೇಡಿಕೆಗಳನ್ನು ಬಿಬಿಎಂಪಿ ಮುಂದಿಟ್ಟ ಗುತ್ತಿಗೆ ಪೌರಕಾರ್ಮಿಕರು
ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ ಪಾಲಿಕೆಯ ಮುಂದಿಟ್ಟಿರುವ ಹಕ್ಕೊತ್ತಾಯಗಳು ಹೀಗಿವೆ:
ಸುಬ್ರಮಣಿಯವರ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ದೊರಕಿಸಿಕೊಡಬೇಕು. ಸುಬ್ರಮಣಿಯವರ ಹೆಂಡತಿಗೆ ಬಿ.ಬಿ.ಎಂ.ಪಿಯಲ್ಲಿ ಖಾಯಂ ಕೆಲಸ ನೀಡಬೇಕು ಹಾಗು ಅವರ ಕುಟುಂಬಕ್ಕೆ ಸರ್ಕಾರಿ ವಸತಿಯನ್ನು ಒದಗಿಸಬೇಕು. ಈ ಸಾವಿಗೆ ಬಿ.ಬಿ.ಎಂ.ಪಿ ಸುಬ್ರಮಣಿಯವರ ಕುಟಂಬದ ಕ್ಷಮೆಯಾಚಿಸಬೇಕು
ಗುತ್ತಿಗೆ ಪದ್ದತಿಯನ್ನು ರದ್ದು ಪಡಿಸಲು ಮತ್ತು ನೇರ ವೇತನ ಪಾವತಿ ಮಾಡಲು ಸರ್ಕಾರದ ಆದೇಶವನ್ನು ತಕ್ಷಣದಲ್ಲೆ ಜಾರಿಗೊಳಿಸಬೇಕು.
ಪೌರಕಾರ್ಮಿಕರಿಗೆ ವೇತನ ನೀಡುವುದರಲ್ಲಿ ತಡೆ ಏಕಾಯಿತು ಎಂದು ತನಿಖೆ ನಡೆಸಿ ಅದರ ವರದಿಯನ್ನು ಶೀಘ್ರದಲ್ಲೆ ಬಹಿರಂಗಪಡಿಸಬೇಕು
700 ಜನಸಂಖ್ಯೆಗೆ ಓರ್ವ ಪೌರಕಾರ್ಮಿಕ ಎಂಬ ನೀತಿಯನ್ನು ರದ್ದುಗೊಳಿಸಿ, 500:1 ನೀತಿಯನ್ನು ಜಾರಿ ಮಾಡಬೇಕು, ಹಾಗು ‘ರಿಸರ್ವ್ ಲೀವ್’ ನಿಟ್ಟಿನಲ್ಲಿ ಶೇ.16ರಷ್ಟು ಹೆಚ್ಚು ಕಾರ್ಮಿಕರನ್ನು ತೆಗೆದುಕೊಳ್ಳಬೇಕು
ನೇರ ಪಾವತಿಯನ್ನು ಎಲ್ಲಾ ಪೌರಕಾರ್ಮಿಕರನ್ನು ಒಳಗೊಂಡಂತೆ ಡ್ರೈವರ್ಸ್ ಮತ್ತು ಸಹಾಯಕರಿಗೆ ವಿಸ್ತರಿಸಬೇಕು
ಜನವರಿಯಿಂದ ಜೂನ್ 2018ರ ವೇತನವನ್ನು ತಕ್ಷಣದಲ್ಲೇ ವೇತನ ಚೀಟಿಗಳೊಂದಿಗೆ ನೀಡಬೇಕು
ಪ್ರತಿ ತಿಂಗಳ 7ನೇ ತಾರೀಕಿನ ಒಳಗೆ ವೇತನವನ್ನು ವೇತನ ಚೀಟಿಯೊಂದಿಗೆ ನೀಡಬೇಕು
ಕಾರ್ಮಿಕರ ಪಟ್ಟಿಯಲ್ಲಿ ನಮೂದು ಆಗದಿರುವ ಪೌರಕಾರ್ಮಿಕರ ಹೆಸರನ್ನು ಸೇರಿಸಬೇಕು
ಕನಿಷ್ಠ ವೇತನ ಅಧಿಸೂಚನೆಯಲ್ಲಿ ಹೆಸರಿಸಲಾಗಿರುವ ಎಲ್ಲ ಸಲಕರಣೆಗಳನ್ನು ಹಾಗು ಕಾರ್ಮಿಕರಿಗೆ ಉಚಿತ ಶೌಚಾಲಯ, ಕುಡಿಯುವ ನೀರು ಹಾಗು ವಿಶ್ರಾಂತಿ ಕೊಠಡಿ ತಕ್ಷಣ ನೀಡಬೇಕು
ಬೋಗಸ್ ಕಾರ್ಮಿಕರ ಹೆಸರುಗಳನ್ನು ನೊಂದಾಯಿಸಿಕೊಂಡಿರುವ ಬಿ.ಬಿ.ಎಂ.ಪಿ ಅಧಿಕಾರಿಗಳ ವಿರುದ್ಧ ಎಫ್.ಐ.ಆರ್ ಅನ್ನು ದಾಖಲಿಸಬೇಕು
ಆರೋಗ್ಯ ನಿರೀಕ್ಷಕರಿಗೆ ಮತ್ತು ಬಿ.ಬಿ.ಎಂ.ಪಿ ಅಧಿಕಾರಿಗಳಿಗೆ ಪೌರಕಾರ್ಮಿಕರಲ್ಲಿ ಭಯದ ವಾತಾವರಣವನ್ನು ಉಂಟು ಮಾಡಬಾರದೆಂದು ಹಾಗೂ ಘನತೆ ಮತ್ತು ಗೌರವದಿಂದ ವರ್ತಿಸಬೇಕೆಂದು ಸೂಚಿಸಬೇಕು.
ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಆದೇಶ ದಿನಾಂಕ 22.10.2017 ಅನ್ನು ಪರಿಪೂರ್ಣಗೊಳಿಸುವುದು. ಅದರ ಪ್ರಕಾರ 90,18,81,719 ರೂಪಾಯಿಗಳ ಠೇವಣಿಯನ್ನು ಇಡಬೇಕು
ಬಿ.ಬಿ.ಎಂ.ಪಿಯು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೊಳಿಸಬೇಕು
ವಾರ್ಡ್ ಸಂಖ್ಯೆ 55ರಲ್ಲಿ ಪೌರಕಾರ್ಮಿಕರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ವಿಚಾರಣೆ ಆದೇಶವನ್ನು ಘೋಷಿಸಬೇಕು
ಈ ಹಿಂದೆ ಇದ್ದಂತಹ ಗುತ್ತಿಗೆದಾರರ ವಿರುದ್ಧ ಸಂಘಟನೆಯು ನೀಡಿದ್ದ ದೂರುಗಳನ್ನು ಆಧರಿಸಿ ಕ್ರಮ ಕೈಗೊಳ್ಳಬೇಕು
ನೇರ ಪಾವತಿಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿರುವ ಬಿ.ಬಿ.ಎಂ.ಪಿ ಅಧಿಕಾರಿಗಳ ವಿರುದ್ಧ ಮತ್ತು ನೇರ ಪಾವತಿಯನ್ನು ಜಾರಿ ಮಾಡುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು
ಒಟ್ಟು 16 ಹಕ್ಕೊತ್ತಾಯಗಳನ್ನು ಪಾಲಿಕೆಯ ಮುಂದಿಟ್ಟಿರುವ ಸಂಘಟನೆ, ತನ್ನ ನ್ಯಾಯಯುತ ಹಕ್ಕುಗಳನ್ನು ಕೇಳುತ್ತಿದೆ. ಪೌರ ಕಾರ್ಮಿಕರೊಬ್ಬರ ಸಾವಿನ ನಂತರವಾದರೂ ಕೂಡ ಬಿಬಿಎಂಪಿ ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತದೆಯೇ ಎನ್ನುವುದನ್ನು ಕಾದುನೋಡಬೇಕಿದೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು