Tel: 7676775624 | Mail: info@yellowandred.in

Language: EN KAN

    Follow us :


ಸಮ್ಮಿಶ್ರ ಸರ್ಕಾರ ಸಂಪೂರ್ಣ ದಿವಾಳಿ: ಅಶೋಕ್‌

Posted date: 28 Aug, 2018

Powered by:     Yellow and Red

ಸಮ್ಮಿಶ್ರ ಸರ್ಕಾರ ಸಂಪೂರ್ಣ ದಿವಾಳಿ: ಅಶೋಕ್‌

ಮಂಡ್ಯ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಟೀಕಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ, ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಒಂದು ಗೋಮುಖ ವ್ಯಾಘ್ರ ಸರ್ಕಾರ. ಖಜಾನೆ ಬರಿದು ಮಾಡಿಕೊಂಡು ದಿವಾಳಿಯಾಗಿರುವ ಸರ್ಕಾರದಿಂದ ಯಾವುದೇ ಅಭಿವೃದ್ಧಿಯನ್ನೂ ನಿರೀಕ್ಷಿಸಲಾಗದು ಎಂದು ಜರಿದರು.

ಅಭಿವೃದ್ಧಿಗೆ ಹಣವಿಲ್ಲದೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ, ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ, ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ದೇವರ ಹುಂಡಿಗಳನ್ನು ಹಣಕ್ಕಾಗಿ ಒಡೆಯುವ ಹೀನಾಯ ಪರಿಸ್ಥಿತಿಯಲ್ಲಿದ್ದೇವೆ. ಸರ್ಕಾರದ ಬಳಿ ಹಣವಿಲ್ಲದೇ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವುದಕ್ಕೂ ಆಗುತ್ತಿಲ್ಲ. ಯಾವುದೇ ಕೆಲಸಗಳೂ ನಡೆಯುತ್ತಿಲ್ಲ. ಸರ್ಕಾರದ ಬಗ್ಗೆ ನಂಬಿಕೆಯಿಲ್ಲದೆ ಅಧಿಕಾರಿಗಳು ಹಣ ಖರ್ಚು ಮಾಡುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದರು.

ಅಭಿವೃದ್ಧಿ ತೋರಿಸಿ:
ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಬರೀ ಹಣವಿಲ್ಲವೆಂದು ಮಾತ್ರ ಭಾವಿಸಬೇಡಿ. ಒಳ್ಳೆಯ ಗುಣವೂ ಇಲ್ಲ. ಇದೊಂದು ಗೋಮುಖ ವ್ಯಾಘ್ರ ಸರ್ಕಾರ. ಜನರ ಹಣ ಲೂಟಿ ಮಾಡುವುದೊಂದೇ ಅದಕ್ಕೆ ಗೊತ್ತಿರುವುದು. ಅಭಿವೃದ್ಧಿ ಬೇಕಿಲ್ಲ. ಸರ್ಕಾರ ಬಂದು ಇಷ್ಟು ದಿನಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿರುವುದನ್ನು ತೋರಿಸಲಿ ನೋಡೋಣ ಎಂದು ಸವಾಲೆಸೆದರು.

ತಾನಾಗೇ ಸರ್ಕಾರ ಪತನ:
ಈ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಇದು ಜನರ ಅರಿವಿಗೂ ಬಂದಿದೆ. ಹಾಗಂತ ನಾವೇನು ಸರ್ಕಾರ ಬೀಳಿಸುವ ಪ್ರಯತ್ನವನ್ನೂ ನಡೆಸುವುದಿಲ್ಲ. ಯಾರೂ ಬೀಳಿಸಬೇಕಾದ ಅವಶ್ಯಕತೆಯೂ ಇಲ್ಲ. ಸರ್ಕಾರ ತಂತಾನೇ ಬಿದ್ದುಹೋಗುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಗ್ಲೆಂಡ್‌ನಿಂದಲೇ ಬಾಣ ಬಿಡುತ್ತಿದ್ದಾರೆ. ಅದು ಎಲ್ಲಿಗೆ ಹೋಗಿ ತಲುಪುತ್ತದೋ ಗೊತ್ತಿಲ್ಲ ಎಂದು ನುಡಿದರು.

ಅಪವಿತ್ರ ಮೈತ್ರಿ:
ಕಳೆದ ವಿಧಾನಸಭಾ ಚುನಾವಣೆಯಲ್ಲಿ 130 ಸ್ಥಾನಗಳಲ್ಲಿದ್ದ ಕಾಂಗ್ರೆಸ್‌ 80 ಸ್ಥಾನಕ್ಕೆ ಕುಸಿಯಿತು. 44 ಸ್ಥಾನಗಳಲ್ಲಿದ್ದ ಬಿಜೆಪಿ 104 ಸ್ಥಾನಕ್ಕೇರಿತು. ಜನರು ನೀಡಿದ ತೀರ್ಪಿಗೆ ವಿರುದ್ಧವಾಗಿ ಕಾಂಗ್ರೆಸ್‌ ಜೆಡಿಎಸ್‌ನೊಡನೆ ಅಪವಿತ್ರ ಮೈತ್ರಿ ಬೆಳೆಸಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಿತು. ಇದನ್ನು ಜನರೂ ಒಪ್ಪುತ್ತಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಮುಖಂಡ ಎನ್‌.ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ನಗರ ಘಟಕದ ಅಧ್ಯಕ್ಷ ಹೆಚ್‌.ಆರ್‌.ಅರವಿಂದ್‌, ಹೆಚ್‌.ಪಿ.ಮಹೇಶ್‌ ಇತರರಿದ್ದರು.

ಬಿಜೆಪಿ ಗೆದ್ದರೆ ಮಂಡ್ಯ ಮಹಾನಗರ ಪಾಲಿಕೆ
ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದ ಸಮಯದಲ್ಲಿ ನಗರಾಭಿವೃದ್ಧಿಗಾಗಿ ಮಂಡ್ಯ ನಗರಸಭೆಗೆ 150 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿತ್ತು. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಅಂದು ಅಧಿಕಾರದಲ್ಲಿದ್ದವರು ವಿಫ‌ಲರಾದರು. ನಗರಗಳ ಅಭಿವೃದ್ಧಿಗೆ ನಗರೋತ್ಥಾನ ಆರಂಭಿಸಿದ್ದು ಬಿಜೆಪಿ ಸರ್ಕಾರ. ಬೃಹತ್‌ ಮಂಡ್ಯ ಯೋಜನೆ ಸಾಕಾರಗೊಳಿಸಿ ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡುವ ಆಶಯವೂ ನಮ್ಮದೇ ಆಗಿದೆ. ಇಂತಹ ಅಭಿವೃದ್ಧಿ ಕನಸುಗಳು ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗಿಲ್ಲ. ಕಳೆದ ಅವಧಿಯ ನಗರಸಭೆ ಸ್ಥಿತಿ ನೋಡಿದರೆ ನಾಚಿಕೆಯಾಗುತ್ತದೆ. 6 ತಿಂಗಳಿಗೊಬ್ಬ ಅಧ್ಯಕ್ಷರನ್ನು ತಂದು ಕೂರಿಸುವ ಪ್ರಯತ್ನದೊಂದಿಗೆ ಸಂಪೂರ್ಣ ಡೋಲಾಯಮಾನ ಸ್ಥಿತಿಯಲ್ಲೇ ಕಾಲಹರಣ ಮಾಡಲಾಯಿತು ಎಂದು ಆರ್‌. ಅಶೋಕ್‌ ಟೀಕಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑