ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ತ್ಯಾಜ್ಯ ನೀರು ಸಂಸ್ಕರಿಸಲು ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆ
ಶ್ರವಣಬೆಳಗೊಳ : ಶ್ರವಣಬೆಳಗೊಳದಲ್ಲಿ ಈ ಬಾರಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ
ಉಂಟಾಗಬಹುದಾದ ಕೊಳಚೆ ನೀರಿನ ಸಮಸ್ಯೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇಲ್ಲಿ ನಿರ್ಮಾಣವಾಗಿರುವ 12 ತಾತ್ಕಾಲಿಕ ನಗರಗಳಲ್ಲಿನ ಕೊಳಚೆ ನೀರನ್ನು ಶುದ್ಧೀಕರಿಸಲು ಒಂದು ಅತ್ಯಾಧುನಿಕ ಕೊಳಚೆ ನೀರಿನ ಸಂಸ್ಕರಣ ಘಟಕವನ್ನು ಸ್ಥಾಪಿಸಿದೆ.
ಮಹಾಮಸ್ತಕಾಭಿಷೇಕದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುತ್ತಿರುವ ಹಿನ್ನಲೆಯಲ್ಲಿ ಒಳಚರಂಡಿ ನೀರನ್ನು ಶುದ್ಧೀಕರಿಸುವ ಸಲುವಾಗಿ ಮೂವಿಂಗ್ ಬೆಡ್ ಬಯೋಫಿಲ್ಮ್ ರಿಯಾಕ್ಟರ್ ತಂತ್ರಜ್ಞಾನ ಘಟಕವನ್ನು ಶ್ರವಣಬೆಳಗೊಳದಲ್ಲಿ ಅಳವಡಿಸಲಾಗಿದೆ.
ಶ್ರವಣಬೆಳಗೊಳವು ಒಂದು ಗ್ರಾಮ ಪಂಚಾಯಿತಿ ಆಗಿದ್ದು, ಸುಮಾರು 8000 ಜನಸಂಖ್ಯೆಯನ್ನು ಹೊಂದಿರುವ ಈ ಪಟ್ಟಣ ಮಹಾಮಸ್ತಕಾಭಿಷೇಕದ ನಂತರವೂ ಈ ಕೊಳಚೆ ನೀರು ಸಂಸ್ಕರಣಾ ಘಟಕ ಪಟ್ಟಣದ ಕೊಳಚೆ ನೀರು ಸಂಸ್ಕರಿಸಲು ಬಳಕೆಯಾಗುತ್ತದೆ. ಪಟ್ಟಣದ ಜನಸಂಖ್ಯೆ 15000 ಆಗುವವರೆಗೂ ಕೊಳಚೆನೀರು ಶುದ್ಧೀಕರಿಸುವ ಘಟಕದ ಸಾಮರ್ಥ್ಯ ಹೊಂದಿರುತ್ತದೆ.
1993 ರಲ್ಲಿ ನಡೆದ ಹಿಂದಿನ ಮಹಾಸ್ತಕಾಭಿಷೇಕದಲ್ಲಿ ಉಂಟಾದ ಕೊಳಚೆ ನೀರನ್ನು ಸಂಸ್ಕರಣೆ ಮಾಡಿ ಆ ನೀರನ್ನು ಭೂಮಿಗೆ ಇಂಗಿಸುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಹಾಗೆಯೇ 2006 ರ ಮಹಾಮಸ್ತಕಾಭಿಷೇಕದಲ್ಲಿಯೂ ಇದೇ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗಿತ್ತು ಎಂದು ಮಹಾಸ್ತಕಾಭಿಷೇಕದ ವಿಶೇಷ ಅಧಿಕಾರಿ ವರಾಪ್ರಸಾದ್ ರೆಡ್ಡಿ ಅವರು ತಿಳಿಸಿದ್ದಾರೆ.
ಈ ಘಟಕ 1.5 ಎಂ.ಎಲ್.ಡಿ ಸಾಮರ್ಥ್ಯ ಹೊಂದಿದ್ದು 2.3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಮನೆಗಳಿಂದ ಸಂಗ್ರಹಿಸಲಾದ ಕೊಳಚೆ ನೀರನ್ನು ಒಂದು ಕಡೆ ಸಂಗ್ರಹಿಸಿ ಬಯೋ-ರಿಯಾಕ್ಟರ್ ಗಳಿಗೆ ಪಂಪ್ ಮಾಡಲಾಗುತ್ತದೆ. ಈ ರಿಯಾಕ್ಟರ್ ಗಳು ಒಳಬರುವ ಕೊಳಚೆಯನ್ನು 3ರಿಂದ 4 ಗಂಟೆಗಳಲ್ಲಿ ಸಂಸ್ಕರಿಸುತ್ತವೆ. ರಿಯಾಕ್ಟರ್ ಗಳಿಂದ ಹೊರಬರುವ ವಸ್ತು ಪ್ಲೇಟ್ ಸೆಟ್ಲರ್ ಗೆ ಪ್ರವಹಿಸುತ್ತದೆ ಮತ್ತು ಅಲ್ಲಿ ಪಾಲಿಮರ್ ಸಹಾಯದಿಂದ ಘನ ತ್ಯಾಜ್ಯ ವಿಂಗಡಣೆಯಾಗುತ್ತದೆ. ಪ್ಲೇಟ್ ಸೆಟ್ಲರ್ ನಿಂದ ಹೊರಬರುವ ಸ್ವಚ್ಛ ನೀರು ಪ್ರೆಷರ್ ಸ್ಯಾಂಡ್ ಫಿಲ್ಟರ್ ಮೂಲಕ ಹರಿದು ಉಳಿದ ಯಾವುದೇ ಬಗೆಯ ಘನ ವಸ್ತುಗಳನ್ನು ನಿವಾರಿಸುತ್ತದೆ. ಮತ್ತು ಆಕ್ಟಿವೇಟೆಡ್ ಕಾರ್ಬನ್ ವಾಸನೆ ನಿವಾರಿಸುತ್ತದೆ.
ಅಂತಿಮವಾಗಿ ಕ್ಲೋರಿನ್ ಬಳಸಿ ಕೊಳಚೆ ನೀರಿನ ಸಂಸ್ಕರಣೆಯನ್ನು ಪೂರ್ಣಗೊಳಿಸಲಾಗುತ್ತದೆ. ಹೀಗೆ ಶುದ್ಧೀಕರಿಸಿದ ಕುಡಿಯುವುದಕ್ಕೆ ಹೊರತಾಗಿಸಿ ನೀರು ಕೃಷಿ, ತೋಟಗಾರಿಕೆ, ಶೌಚಾಲಯ, ಸ್ವಚ್ಛತೆಗೆ ಬಳಸಬಹುದಾಗಿದೆ.
"ಕೊಳಚೆ ನೀರು ಶುದ್ಧೀಕರಣ ಘಟಕದ ಬಳಿ ಒಂದು ರಾಕ್ ಗಾರ್ಡ್ನ್ ನಿರ್ಮಿಸಲಾಗುವುದು. ಈ ನೀರನ್ನು ಅಲ್ಲಿನ ಸಸ್ಯಗಳಿಗೆ ಬಳಸಲಾಗುವುದು. ಈ ರಾಕ್ ಗಾರ್ಡನ್ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯಾಗಲಿದೆ"ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು