ತಗಚಗೆರೆ ಮಾಸ್ತಮ್ಮ ಮಂದಿರದಲ್ಲಿ ಚಿತ್ರೀಕರಣಕ್ಕೆ ಚಾಲನೆ
ಅಮೃತ ಪ್ರೊಡಕ್ಷನ್ಸ್ ರವರ ಚೊಚ್ಚಲ ಕಾಣಿಕೆಯಾಗಿ ಪ್ರೊಡಕ್ಷನ್ ನಂ ೧ ಎಂಬ ಕನ್ನಡ ಚಿತ್ರದ ಚಿತ್ರೀಕರಣಕ್ಕೆ ತಾಲ್ಲೂಕಿನ ತಗಚಗೆರೆ ಗ್ರಾಮದ ಶ್ರೀ ಮಾಸ್ತಮ್ಮ ದೇವಿಯ ಸನ್ನಿಧಿಯಲ್ಲಿ ಗಣ್ಯರು ಚಾಲನೆ ನೀಡಿದರು.
ಅನೇಕ ಹೊಸ ನಟ ನಟಿಯರ ಜೊತೆಗೆ ಹಿರಿಯ ಸಿನಿಮಾ ಕಲಾವಿದರನ್ನು ಸೇರಿಸಿ ವಿಭಿನ್ನವಾದ ಸಾಮಾಜಿಕ ಕಳಕಳಿಯ ಕಾಳಜಿಯುಳ್ಳ ಕಥೆಯನ್ನು ರಚಿಸಿದ್ದೇನೆ, ಮಾಸ್ತಮ್ಮ ದೇವಿಯ ಕೃಪೆಯಿಂದ ಯಾವುದೇ ವಿಘ್ಗಗಳು ಬಾರದೆ ಚಿತ್ರೀಕರಣ ಸಾಗಲಿದೆ, ಅದಕ್ಕೆ ತಮ್ಮೆಲ್ಲರ ಸಹಕಾರದ ಅಗತ್ಯವಿದೆ ಎಂದು ಚಿತ್ರದ ಮೇಲ್ವಿಚಾರಕ ಯಲಚಿಪಾಳ್ಯದ ಗಂಗಾಧರ್ ನೆರೆದಿದ್ದ ನಟನಟಿಯರು, ತಂತ್ರಜ್ಞರು ಮತ್ತು ಗಣ್ಯರಿಗೆ ಮನವಿ ಮಾಡಿದರು.
ಈ ಚಿತ್ರದಲ್ಲಿ ತಾಲ್ಲೂಕಿನ ಕಲಾವಿದರುಗಳಿಗೂ ಮನ್ನಣೆ ನೀಡಲಾಗುವುದು, ನಾನು ಹಲವು ಧಾರಾವಾಹಿಗಳಲ್ಲಿ ಸಹ ನಿರ್ದೇಶಕ ಮತ್ತು ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ, ಇದು ನನಗೆ ಚೊಚ್ಚಲ ಚಿತ್ರ, ಹಾಗಾಗಿ ಉತ್ತಮವಾಗಿ ನಿರ್ದೇಶಿಸಿ ಉತ್ತಮ ಚಿತ್ರವನ್ನು ಸಮಾಜಕ್ಕೆ ನೀಡಬೇಕೆಂಬ ನನ್ನ ಕನಸನ್ನು ಸಾಕಾರಗೊಳಿಸಲಿದ್ದೇನೆ ಎಂದು ಚಿತ್ರದ ಕಥೆ ಮ ರ್ದೇಶನ ಹೊಣೆಹೊತ್ತ ಶ್ರೀನಿವಾಸ ಹೇಳಿದರು.
ಚಿತ್ರದ ನಿರ್ಮಾಪಕರಾಗಿ ಗುತ್ತಿಗೆದಾರ ಪುಟ್ಟಸ್ವಾಮಿ, ಕ್ಯಾಮರಾ ಮೆನ್ ಆಗಿ ಸಂಪತ್ ರೆಡ್ಡಿ ಇದ್ದು ಇನ್ನುಳಿದ ತಂತ್ರಜ್ಞರು ಮತ್ತು ನಟನಟಿಯರ ಆಯ್ಕೆಯಾಗಬೇಕಿದೆ.
ಕಾರ್ಯಕ್ರಮದಲ್ಲಿ ರಾಂಪುರ ರಾಜಣ್ಣ,ಗೋವಿಂದಳ್ಳಿ ನಾಗರಾಜ, ಮಹಾಲಿಂಗು, ರಾಮಕೃಷ್ಣ, ಪ್ರಸನ್ನ, ಪೂಜಾರಿ ಚಂದ್ರು ಮತ್ತು ಚಿತ್ರದ ನಟಿಯರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ: 9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು