ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ ೦೬೨೯) ಹಿಂದೂ ಜಾಗರಣ ವೇದಿಕೆಯ ಸುರೇಶ್ ಮತ್ತು ತಂಡ ಹಾಗೂ ಸುಣ್ಣಘಟ್ಟ ಗ್ರಾಮಸ್ಥರು ಸೇರಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.
ಹಾಸನ ನೋಂದಣಿಯಿರುವ ಟೆಂಫೊದಲ್ಲಿ ಚನ್ನರಾಯಪಟ್ಟಣ ಮೂಲದ ನಾಲ್ಕು ಮಂದಿ ಖದೀಮರ ತಂಡವು ಆನೇಕಲ್ ಮಾರ್ಗವಾಗಿ ಕೇರಳದ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುವ ಕೆಲಸ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಗ್ರಾಮಸ್ಥರು ಟೆಂಪೋವನ್ನು ಅಡ್ಡಗಟ್ಟುತ್ತಿದ್ದಂತೆ ಇಬ್ಬರು ಪರಾರಿಯಾಗಿದ್ದು ಇಬ್ಬರನ್ನು ದಸ್ತಗಿರಿ ಮಾಡಿ ಎಫ್ ಐ ಆರ್ ದಾಖಲಿಸಲಾಗಿದೆ.
ಟೆಂಪೋ ಚಾಲಕ ಆಯಾಜ್ ಹಾಗೂ ಮತ್ತೊಬ್ಬ ಪರಾರಿಯಾಗಿದ್ದು, ಅಲೀಂ ಮತ್ತು ಅಬ್ಬಾಸ್ ಸಿಕ್ಕಿಬಿದ್ದಿದ್ದು ಕಳೆದ ಹಲವಾರು ತಿಂಗಳಿಂದ ಸಾತನೂರು-ಹಲಗೂರು ಮಾರ್ಗವಾಗಿ ಹಸುಗಳನ್ನು ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುವ ಕೆಲಸ ಮಾಡುತ್ತಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.
ಚನ್ನಪಟ್ಟಣ ಮುಖ್ಯಮಂತ್ರಿ ಗಳ ಕ್ಷೇತ್ರ ಅಷ್ಟೇ ಅಲ್ಲದೆ ಪ್ರಭಾವಿ ರಾಜಕಾರಣಿಯಾದ ಡಿ ಕೆ ಶಿವಕುಮಾರ್ ಸಹ ಇದೇ ಜಿಲ್ಲೆಯವರಾಗಿದ್ದು ಇಂತಹ ಕ್ಷೇತ್ರದಲ್ಲೇ ಈ ರೀತಿಯ ಅಕ್ರಮಗಳು ನಡೆಯುತ್ತಿರುವುದು ರಾಜ್ಯದಲ್ಲಿ ನ ವ್ಯವಸ್ಥೆ ಹೇಗಿದೆ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವೇದಿಕೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಎರಡು ವಾಹನಗಳಲ್ಲಿ ಕ್ರಮವಾಗಿ ತುಂಬಿಸಿ ಕುಂಬಳಗೂಡಿನ ಬಳಿಯ ಗೋ ಶಾಲೆಯಲ್ಲಿ ಬಿಡಲಾಗಿದ್ದು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೋಲಿಸರು ತನಿಖೆ ಕೈಗೊಂಡಿದ್ದಾರೆ.
ಈ ಸಮಯದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಗಜೇಂದ್ರ ಸಿಂಗ್, ವಕೀಲ ಸುರೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ, ಧನಂಜಯ, ಸತೀಶ್, ಚಂದ್ರಶೇಖರ, ಮಹಾಲಿಂಗ, ಸಂಜಯಕುಮಾರ್, ಯೋಗಾನಂದ, ಶ್ರೀಹರಿ,ಚಂದ್ರಶೇಖರ ರೆಡ್ಡಿ, ಆನಂದಕುಮಾರ್,ನಾಗೇಂದ್ರ ಸೇರಿದಂತೆ ಅನೇಕರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು