Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೩: ಕುಳಿತಿರುವ ವ್ಯಕ್ತಿ ಕಾಲುಗಳನ್ನು ಏಕೆ ತೂಗಿಸಬಾರದು ?

Posted date: 15 Aug, 2019

Powered by:     Yellow and Red

ತಾಳೆಯೋಲೆ ೧೩: ಕುಳಿತಿರುವ ವ್ಯಕ್ತಿ ಕಾಲುಗಳನ್ನು ಏಕೆ ತೂಗಿಸಬಾರದು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*


ಕುಳಿತಿರುವ ವ್ಯಕ್ತಿ ಕಾಲುಗಳನ್ನು ಏಕೆ ತೂಗಿಸಬಾರದು ?


ಸಂಪ್ರದಾಯದ ನಂಬಿಕೆಯ ಪ್ರಕಾರ ಯಾವುದಾದರೊಂದು ಎತ್ತರದ ಜಾಗದ (ಕುರ್ಚಿ ಮೇಜು ಇತ್ಯಾದಿ) ಮೇಲೆ ಕುಳಿತು ಕಾಲು ತೂಗಿಸುವುದು (ಅಲ್ಲಾಡಿಸುವುದು) ತಂದೆ ತಾಯಿಯರು ಆರ್ಥಿಕ ತೊಂದರೆಗಳು ಇಲ್ಲವೇ ಸಾಲಗಳಲ್ಲಿ ಸಿಲುಕಿಕೊಂಡಿರುತ್ತಾರೆ. ಈ ನಿಷೇಧವನ್ನು ಪ್ರಮುಖವಾಗಿ ಮಕ್ಕಳ ಮೇಲೆ ಪೂರ್ವ ಕಾಲದಲ್ಲಿ ವಿಧಿಸಿದ್ದರು.


ಹಠ ಮಾಡುವ ಮಕ್ಕಳು ಈ ನಂಬಿಕೆಯು ಅರ್ಥ ಇಲ್ಲದ್ದೆಂದು ತಮ್ಮ ಹಿರಿಯರೊಂದಿಗೆ ವಾದಿಸುವರು. ಆದರೆ ಹಿರಿಯರು ತಾವು ಇತರರ ಮೂಲಕ ತಿಳಿದಿರುವುದಾಗಿ ಹೇಳುತ್ತಾರೆ.


ಈ ನಂಬಿಕೆಯು ಮೂಢ ನಂಬಿಕೆಯಾಗಿ ಕಾಣಿಸಿದರೂ ಒಂದು ನಿಜಾಂಶ ಕಾಣಿಸಿತ್ತದೆ. ಅದೇನೆಂದರೆ ಈ ರೀತಿಯಾಗಿ ಮಕ್ಕಳು ಕಾಲುಗಳನ್ನು ತೂಗಿಸುವುದರಿಂದ ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ. ಇದು ಈ ನಂಬಿಕೆಗೆ ಕಾರಣ.

ಮತ್ತೊಂದು ಕಾರಣವೆಂದರೆ ಹಿಂದಿನ ಕಾಲದಲ್ಲಿ ಔಷಧಗಳನ್ನು ಇಡುವ ಪೆಟ್ಟಿಗೆಗಳು, ಹಣದ ಪೆಟ್ಟಿಗೆ, ಎಣ್ಣೆ ಹಾಕುವ ಪಾತ್ರೆಗಳು ಮುಂತಾದ ವಸ್ತುಗಳನ್ನು ಅಜ್ಜಿ ತಾತಂದಿರ ಮಂಚಗಳ ಕೆಳಗೆ ಬಚ್ಚಿಡುತ್ತಿದ್ದರು. ಅವರಿಗೆ ಎಲೆ ಅಡಿಕೆ ಹಾಕುವ ಅಭ್ಯಾಸ ದಹ ಇರುತಿತ್ತು. ಆದ್ದರಿಂದ ಅದನ್ನು ಉಗಿಯಲು ಪಾತ್ರೆಗಳನ್ನು ಉಪಯೋಗಿಸುತ್ತಿದ್ದು ಆ ಪಾತ್ರೆಗಳನ್ನು ಮಂಚದ ಕೆಳಗೆ ಇಡುತ್ತಿದ್ದರು. ಒಂದು ವೇಳೆ ಮಕ್ಕಳು ಮಂಚದ ಮೇಲೆ ಕುಳಿತು ಕಾಲುಗಳನ್ನು ತೂಗಿಸಿದ್ದೇ ಆದರೇ ಮಂಚದ ಕೆಳಗಿದ್ದ ಪಾತ್ರೆಗಳು ಅಥವಾ ವಸ್ತುಗಳು ಕಾಲಿಗೆ ತಗುಲಿ ಬಿದ್ದು ಒಡೆಯುವುದೋ ಚಲ್ಲುವುದೋ‌ ಆಗುತ್ತಿತ್ತು. ಈ ಕಾರಣದಿಂದ ಮಕ್ಕಳ ಮೇಲೆ ಕಾಲು ತೂಗಿಸದಂತೆ ನಿಷೇಧ ಹೇರಿದ್ದರು.


ಹಿರಿಯರ ಮಾತನ್ನು ಕೇಳದ ಮಕ್ಕಳು ಬೆಲೆ ಬಾಳುವ ವಸ್ತುಗಳನ್ನು, ಮಡಿಕೆ ಕುಡಿಕೆಗಳನ್ನು ಕಾಲುಗಳನ್ನು ತೂಗಿಸುವ ಭರದಲ್ಲಿ ಒದ್ದು ಹೊಡೆದು ಹಾಕುತ್ತಿದ್ದರು. ಇದರ ಮುಖಾಂತರ ಆ ಕುಟುಂಬಕ್ಕೆ ಧನಹಾನಿ ಆಗಿ‌ ಸಾಲ‌ ಆಗಬಹುದು. ತಂದೆ ತಾಯಿ‌ ಸಾಲಗಳು‌ ಮಕ್ಕಳಿಗೂ‌ ಸೇರುತ್ತಿತ್ತು. ಆದ್ದರಿಂದ ಕುಟುಂಬದ ಕ್ಷೇಮವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ರೀತಿಯಾಗಿ ಎತ್ತರದಲ್ಲಿ ಕುಳಿತು ಕಾಲುಗಳನ್ನು ತೂಗಿಸಬಾರದೆಂದು ಹಿರಿಯರ ಹಿತ ನುಡಿ. ಜೊತೆಗೆ ಈ ದುರಭ್ಯಾಸವು ದೇಹದ ಶಕ್ತಿಯನ್ನು ಸಹ ಕಡಿಮೆ ಮಾಡುತ್ತದೆ.


ಸಂಗ್ರಹ ಮತ್ತು ಪ್ರಚಾರ;

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑