ತಾಳೆಯೋಲೆ ೩೮: ನಿದ್ದೆಯಿಂದ ಎದ್ದ ತಕ್ಷಣ ಭಗವನ್ನಾಮವನ್ನು ಏಕೆ ಸ್ಮರಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
*ನಿದ್ದೆಯಿಂದ ಎದ್ದ ತಕ್ಷಣ ಭಗವನ್ನಾಮವನ್ನು ಏಕೆ ಸ್ಮರಿಸಬೇಕು ?*
ಪ್ರತಿಯೊಬ್ಬರೂ ನಿದ್ರಾದೇವಿಯ ಕೃಪೆಯನ್ನು ಬೇಡಿಕೊಳ್ಳುವರು. ನಿದ್ರೆ ಎನ್ನುವುದು ವ್ಯಕ್ತಿಯೊಬ್ಬನ ಸ್ವಯಮಾತ್ಮದಲ್ಲಿ ಮನಸ್ಸು ಸ್ಥಿರವಾಗಿದ್ದು, ಪ್ರಾಪಂಚಿಕ ಅಯೋಮಯ ದಿನಚರ್ಯೆಯಿಂದ ಮನಸ್ಸು ತೊಲಗಿ ಪ್ರಶಾಂತತೆಯನ್ನು ಹೊಂದುವುದು ಎಂದು ಋಷಿಗಳು ಹೇಳಿರುವರು.
*ಸೂರ್ಯೋದಯಕ್ಕೆ ೪೮ ನಿಮಿಷಗಳ ಮುಂದಿನ ಕಾಲವನ್ನು ಬ್ರಹ್ಮ ಮುಹೂರ್ತವೆಂದು ಹೇಳುವರು.* ಬ್ರಹ್ಮ ಮುಹೂರ್ತದಲ್ಲಿ ನಿದ್ದೆಯಿಂದ ಎದ್ದು ನಮ್ಮ ದಿನಚರ್ಯೆಯನ್ನು ಪ್ರಾರಂಭಿಸಬೇಕೆಂದು ಹಿರಿಯರು ಹೇಳುತ್ತಾರೆ. *ಒಂದು ನಂಬಿಕೆಯ ಪ್ರಕಾರ ಬ್ರಹ್ಮ ಮುಹೂರ್ತದಲ್ಲಿ ನಿದ್ರೆಯಲ್ಲೇ ಮುಳುಗಿದರೇ ನಮ್ಮ ಆರೋಗ್ಯಕ್ಕೆ ಹಾನಿಯುಂಟಾಗಿ ಬಡತನವನ್ನು ಆಹ್ವಾನಿಸಿದವರಾಗುತ್ತೇವೆ.*
ಆದ್ದರಿಂದ ಬ್ರಹ್ಮ ಮುಹೂರ್ತದಲ್ಲಿ ಬಲಗಡೆಗೆ ತಿರುಗಿ ನಿದ್ರೆಯಿಂದ ಎದ್ದೇಳುವುದು ತುಂಬಾ ಅವಶ್ಯಕ, *ನಿದ್ರೆಯಿಂದ ಹಠಾತ್ ಆಗಿ ಎದ್ದು ನಿಂತುಕೊಳ್ಳಬಾರದು, ಇದರಿಂದ ಹೃದಯ ಸಂಬಂಧಿ ಖಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ.*
*ನಿದ್ರೆಯಿಂದ ಎದ್ದ ನಂತರ ಹಾಸಿಗೆಯ ಮೇಲೆ ಕುಳಿತುಕೊಂಡು ತಲೆಯನ್ನು ನೇರವಾಗಿ ಇಟ್ಟುಕೊಂಡು ಪಾರ್ವತಿ, ಲಕ್ಷ್ಮಿ ಹಾಗೂ ಸರಸ್ವತಿ ದೇವತೆಗಳ ನಾಮ ಅಥವಾ ಸ್ತೋತ್ರವನ್ನು ಜಪಿಸಿರಿ. ನಾವು ನಿದ್ರೆ ಮಾಡುತ್ತಿದ್ದಾಗ ರಕ್ತ ಪ್ರಸಾರವು ನಿಧಾನವಾಗಿ ಸಂಚರಿಸುತ್ತಿರುತ್ತದೆ. ಒಂದೇ ಬಾರಿ ಹಠಾತ್ ಆಗಿ ನಿದ್ರೆಯಿಂದ ಎದ್ದು ನಿಂತಾಗ ಹೃದಯ ತಕ್ಷಣವಾಗಿ ರಕ್ತವನ್ನು ಹೆಚ್ಚಿನ ಪ್ರಮಾಣದಲ್ಲಿ ಬಿಡುವುದಕ್ಕೆ ಒತ್ತಡ ಉಂಟಾಗುತ್ತದೆ. ಇದರಿಂದ ಹೃದಯ ಸ್ತಬ್ಧವಾಗುವ ಸಂಭವ ಹೆಚ್ಚು.*
ಆದ್ದರಿಂದ ನಿದ್ರೆಯಿಂದ ಎಚ್ಚರವಾದ ನಂತರ ನಿಧಾನವಾಗಿ ಎದ್ದು ಕುಳಿತು ಸ್ವಲ್ಪ ಸಮಯ ಭಗವಂತನ ನಾಮಸ್ಮರಣೆಯನ್ನು ಮಾಡಬೇಕೆಂದು ನಮ್ಮ ಹಿರಿಯರು ಹೇಳುವರು. ಹಾಗೆಯೇ ಸ್ವಲ್ಪ ಸಮಯ ಕುಳಿತುಕೊಂಡು ಹಾಸಿಗೆಯಿಂದ ಎದ್ದಿದ್ದೇ ಆದರೆ ರಕ್ತ ಪ್ರಸರಣಕ್ಕೆ ಅನುಕೂಲವಾಗಿ ಹರಿಯುವುದು. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ.
*ಅಧ್ಯಯನದ ಪ್ರಕಾರ ಶೇಕಡಾ ೨೩ ರಷ್ಟು ಹೃದಯದ ಖಾಯಿಲೆ ಇರುವವರು ನಿದ್ರೆಯಿಂದ ಎದ್ದ ತಕ್ಷಣವೇ ಎದ್ದು ನಿಲ್ಲುವುದರಿಂದ ಮರಣ ಸಂಭವಿಸಿದೆ ಎಂದು ತಿಳಿಯಪಡಿಸಿವೆ.*
ಆದ್ದರಿಂದಲೇ ನಮ್ಮ ಪೂರ್ವಿಕರು ಒಳ್ಳೆಯ ಮಾತುಗಳಲ್ಲಿ ಶಾಸ್ತ್ರೀಯತೆಯನ್ನು ಗುರುತಿಸಿ ನಿದ್ರೆಯಿಂದ ಎದ್ದ ನಂತರ ಸ್ವಲ್ಪ ಸಮಯ ಕುಳಿತು ಭಗವಂತನನ್ನು ಸ್ಮರಿಸಿ ನಿಧಾನವಾಗಿ ಎದ್ದು ದಿನಚರಿಯನ್ನು ಆರಂಭಿಸಲು ಹೇಳಿದ್ದಾರೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು