Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೮೪: ಸ್ನಾನ ಮಾಡಿದ ನಂತರ ಮೊದಲು ಬೆನ್ನನ್ನು ಒರಸಿಕೊಳ್ಳಬೇಕೆ ?

Posted date: 19 Mar, 2020

Powered by:     Yellow and Red

ತಾಳೆಯೋಲೆ ೧೮೪: ಸ್ನಾನ ಮಾಡಿದ ನಂತರ ಮೊದಲು ಬೆನ್ನನ್ನು ಒರಸಿಕೊಳ್ಳಬೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಸ್ನಾನ ಮಾಡಿದ ನಂತರ ಮೊದಲು ಬೆನ್ನನ್ನು ಒರಸಿಕೊಳ್ಳಬೇಕೆ ?


ಪ್ರಧಾನವಾಗಿ ನದಿಯಲ್ಲೋ, ಕೆರೆಯಲ್ಲೋ, ಅಥವಾ ಕಾಲುವೆಯಲ್ಲೋ ಮುಳುಗು ಹಾಕಿಕೊಂಡು ಸ್ನಾನ ಮಾಡಿದ ನಂತರ ಮೊದಲು ಬೆನ್ನು ಒರಸಿಕೊಳ್ಳಬೇಕೆಂದು ನಮ್ಮ ಆಚಾರ ಹೇಳುತ್ತದೆ. ನಮ್ಮ ನಂಬಿಕೆಯ ಪ್ರಕಾರ ಮಂಗಳಕರ ಹಾಗೂ ಅಮಂಗಳಕರ ದೇವತೆಗಳು ನಮ್ಮ ಶರೀರವನ್ನು ಆಶ್ರಯಿಸಿರುತ್ತವೆ.


ಸ್ನಾನ ಮಾಡುವಾಗ ತಲೆಯ ಮೇಲೆ ನೀರು ಹಾಕಿಕೊಂಡ ತಕ್ಷಣ ಈ ಇಬ್ಬರೂ ದೇವತೆಗಳು ಶರೀರ ಬಿಟ್ಟು ಸ್ನಾನಾನಂತರ ಶರೀರವನ್ನು ಒರಸಿಕೊಂಡ ನಂತರ ಸ್ಥಾನಗಳನ್ನು ಹೊಂದುತ್ತಾರೆಂದು ಹೇಳಲಾಗಿದೆ. ಯಾವ ಭಾಗ ಮೊದಲು ಒರಸಿಕೊಳ್ಳುವೆವೊ ಆ ಭಾಗವನ್ನು ಅಮಂಗಳ ದೇವತೆಗಳು ಆವರಿಸುತ್ತಾರೆಂಬ ನಂಬಿಕೆ. ಆದ್ದರಿಂದ ಮೊದಲು ಮುಖ ಅಥವಾ ಎದೆ ಭಾಗಗಳನ್ನು ಒರೆಸಿಕೊಳ್ಳದೆ ಬೆನ್ನನ್ನು ಒರಸಿಕೊಂಡರೆ ಅಮಂಗಳಕರ ದೇವತೆಗಳು ಬೆನ್ನನ್ನು ಆಕ್ರಮಿಸಿಕೊಳ್ಳುವರು. ಆ ನಂತರ ಮುಖ ಮತ್ತಿತರ ಭಾಗಗಳನ್ನು ಒರಸಿಕೊಂಡರೆ ಶುಭದೇವತೆಯಾದ ಶ್ರೀದೇವಿ ಮುಖ ಹಾಗೂ ಇತರ ಭಾಗಗಳನ್ನು ಆಕ್ರಮಿಸಿಕೊಳ್ಳುತ್ತಾಳೆ. ಹಾಗೆ ಮುಖ ಮಂಡಲ ತೇಜೋವಂತವಾಗಿ ಇದ್ದು, ಜನಾಕರ್ಷಣೆ ಹಾಗು ಶುಭಾಕರ್ಷಣೆಯ ಫಲ ಉಂಟಾಗುತ್ತದೆ.


ಮೊದಲು ಮುಖ ಒರೆಸಿಕೊಂಡರೆ ಅಶುಭ ದೇವತೆಗಳು ಮುಖಮಂಡಲವನ್ನು ಆಕ್ರಮಿಸಿ ಮುಖವನ್ನು ಕಳಾಹೀನವಾಗಿ ಮಾಡಿ, ನಿರಾಶೆ, ಸೋಮಾರಿತನ, ಅಕಾರಣ ಕೋಪ ಮುಂತಾದವು ಉಂಟಾಗಿ ಆ ದಿನವೆಲ್ಲ ದೀನವಾಗಿರುವ ಹಾಗೆ ಮಾಡುತ್ತದೆಂಬ ನಂಬಿಕೆ. ಈ ಕಾರಣದಿಂದಲೇ ಸ್ನಾನದ ನಂತರ ಹೇಗೆ ಒರಸಿಕೊಳ್ಳಬೇಕೆಂದು ನಮ್ಮ ಹಿರಿಯರು ಸೂಚಿಸಿರುವರು.


ಈ ನಂಬಿಕೆಯೇ ಅಲ್ಲದೆ ಈ ವಿಷಯದಲ್ಲಿ ಶಾಸ್ತ್ರೀಯತೆಯು ಸಹ ಇದೆ. *ತಣ್ಣೀರಿನಲ್ಲಿ ಸ್ನಾನ ಮಾಡುವುದರಿಂದ ಶರೀರದ ಭಾಗಗಳೆಲ್ಲ ತಣ್ಣಗಾಗುವವು. ಎಲ್ಲ ಭಾಗಗಳಿಗೆಲ್ಲ ಬೆನ್ನೆಲುಬು ಹೆಚ್ಚಾಗಿ ತಂಡಿಗೆ ಗುರಿ ಆಗುವುದು. ಈ ಕಾರಣವಾಗಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಸ್ನಾನವಾದ ನಂತರ ತಕ್ಷಣವಾಗಿ ಬೆನ್ನಿನ ಭಾಗವನ್ನು ಒರಸಿಕೊಳ್ಳಬೇಕೆಂದು ಹೇಳಲ್ಪಟ್ಟಿದೆ.* ಆದರೆ ಈ ನಿಯಮವು ಹೆಚ್ಚಾಗಿ ಬಕೀಟುಗಳಲ್ಲಿ ಸ್ನಾನ ಮಾಡುವವರಿಗೆ ಅನ್ವಯಿಸುವುದಿಲ್ಲ. ಈ ನಿಯಮವು ಮುಳುಗು ಹಾಕುವ, ನೀರಿನಲ್ಲಿ ನಿಂತು ಸ್ನಾನ ಮಾಡುವವರಿಗೆ ಅನ್ವಯಿಸುತ್ತದೆ. ಎಲ್ಲರಿಗೂ ಎಲ್ಲಾ ಸಮಯದಲ್ಲೂ ನದಿ, ಕೆರೆ, ಕಾಲುವೆ ಪ್ರವಾಹ ಸ್ನಾನಗಳು ಮಾಡಲು ಆಗುವುದಿಲ್ಲ. ಸಾಮಾನ್ಯವಾಗಿ ಎಲ್ಲರೂ ಬಕೀಟಿನಲ್ಲಿ ನೀರನ್ನು ಹಾಕಿಕೊಂಡು ಸ್ನಾನ ಮಾಡುತ್ತಾರೆ. ಆದ್ದರಿಂದ ಯಾರನ್ನು ಪ್ರಧಾನವಾಗಿ ಉದ್ದೇಶಿಸಿ ಹೇಳಿದರೂ ಸ್ನಾನ ಸ್ನಾನವೇ. ಆದ್ದರಿಂದ ಈ ನಿಯಮವನ್ನು ಅನುಸರಿಸಿ ಶುಭವನ್ನು ಹೊಂದೋಣಾ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑