ಹೆಣ್ಣು ಸಮಾಜದ ಕಣ್ಣು
*ಹೆಣ್ಣು ಸಮಾಜದ ಕಣ್ಣು ಸೃಷ್ಠಿಯ ಅದ್ಬುತದಲ್ಲಿ ಮಹಿಳೆಯೇ ಪ್ರಥಮ*
ಮೊದಲಿಗೆ ವಿಶ್ವ ಮಹಿಳಾ ದಿನಾಚರಣೆಯ ಈ ದಿನದಂದು *ಡಾ|| ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯು* ವಿಶ್ವದ ಎಲ್ಲಾ ಮಹಿಳೆಯರಿಗೂ ಶುಭಾಶಯವನ್ನು ಕೋರುತ್ತದೆ.
ಮಹಿಳೆಯರು ರಾಜಕೀಯವಾಗಿ ಬೆಳೆಯಬೇಕೆಂದು ಮೊದಲಿಗೆ ಅಭಿಪ್ರಾಯಪಟ್ಟು ಎಲ್ಲಾ ವರ್ಗದ ಮಹಿಳೆಯರಿಗೆ ಮತದಾನದ ಹಕ್ಕನ್ನು ಜಾರಿಗೊಳಿಸಿದವರು *ಡಾ|| ಬಿ ಆರ್ ಅಂಬೇಡ್ಕರ್* ರವರು.ಆದರೂ ಇಂದಿನ ದಿನಗಳಲ್ಲಿ ಮಹಿಳೆಯರು ರಾಜಕೀಯವಾಗಿ ಹಿಂದುಳಿದಿರುವುದು ನಮ್ಮ ಸಮಾಜದ ಅವ್ಯವಸ್ಥೆ ಹಾಗೂ ಅಧಿಕಾರ ನೆಡೆಸುತ್ತಿರುವ ರಾಜಕಾರಣಿಗಳ ಮನೋಸ್ಥಿತಿಯನ್ನು ಸ್ಪಷ್ಟವಾಗಿ ಬಿಂಬಿಸುತ್ತಿದೆ. ಯಾವುದೇ ಪಕ್ಷವಾಗಲೀ ಮಹಿಳೆಯರಿಗಾಗಿ ಮೀಸಲಿರುವ ಕ್ಷೇತ್ರ ಹಾಗೂ ಸ್ಥಾನಗಳಿಗೆ ಮಾತ್ರ ಅವರವರ ಅಗತ್ಯಕ್ಕೆ ತಕ್ಕಂತೆ ಮಹಿಳೆಯರಿಗೆ ಪ್ರಾತಿನಿಧ್ಯವನ್ನು ಕೊಟ್ಟು ರಾಜಕೀಯವಾಗಿ ಕೇವಲ ಸೀಮಿತ ರಾಜಕೀಯ ಚೌಕಟ್ಟಿನಲ್ಲಿ ಅವರನ್ನು ಬಂಧಿಯನ್ನಾಗಿಟ್ಟಿದ್ದಾರೆ. ಸಮರ್ಥವಾಗಿ ಒಂದು ಕುಟುಂಬವನ್ನು ನೆಡೆಸುವ ಮಹಿಳೆ ರಾಜ್ಯ ಅಥವಾ ರಾಷ್ಟ್ರದ ಆಡಳಿತವನ್ನು ಸಹ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿರುತ್ತಾರೆ ಅದರೆ ಒಂದು ಹೆಣ್ಣಿಗೆ ಅಧಿಕಾರ ನೀಡಿ ಅವರ ಕೈಯಾಳು ಆಗಿ ದುಡಿಯಬೇಕೆಂಬ ಆಲೋಚನೆಗಳಿಂದ ಪಟ್ಟ ಭದ್ರ ಹಿತಾಶಕ್ತಿಗಳು ಸ್ತ್ರೀಯರನ್ನು ಅಧಿಕಾರದಿಂದ ದೂರವಿಟ್ಟಿದ್ದಾರೆ. ಪುರಾತನ ಕಾಲದಿಂದಲೂ ಸ್ತ್ರೀ ಯಾವ ಪುರುಷನಿಗಿಂತಲೂ ಕಮ್ಮಿ ಇಲ್ಲ ಎಂದು ನಿರೂಪಿಸುತ್ತಾ ಬಂದಿದ್ದರು ಸಹ ಮಹಿಳೆಯರನ್ನು ಇಂದಿಗೂ ಕೇವಲವಾಗಿ ಕಾಣುತ್ತಿರುವುದು ದುರದೃಷ್ಟಕರವಾದುದು. ಎಲ್ಲಾ ಮಹಿಳೆಯರು ಧೀರರಾಗಿ ನಾಲ್ಕು ಕೋಣೆಗಳ ನಡುವೆ ಕೇವಲ ಮಕ್ಕಳನ್ನು ಹೇರುವ ಯಂತ್ರವಾಗದೇ ಪುರುಷನಂತೆ ಅಧಿಕಾರ ನೆಡೆಸಿ ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗುವಂತಹ ದಿನಗಳು ಸೃಷ್ಟಿಸಲು *ಡಾ|| ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯು* ಆಶಿಸುತ್ತದೆ. 1951 ರಲ್ಲಿ *ಮಹಿಳಾ ಸಬಲೀಕರಣಕ್ಕಾಗಿ ಹಾಗೂ ಮಹಿಳಾ ಆಸ್ತಿ ವಿಚಾರದಲ್ಲಿ ಸಂಸತ್ ನಲ್ಲಿ ಪ್ರಪ್ರಥಮವಾಗಿ ಧ್ವನಿ ಎತ್ತಿದವರು *ಬಾಬಾ ಸಾಹೇಬರು* ಇಂದು ಅವರ ಹೆಸರಿನಲ್ಲಿ ಸ್ಥಾಪನೆಯಾಗಿರುವ *ಡಾ|| ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯು* ಸಬಲೀಕರಣ ಹಾಗೂ ಅವರಿಗೆ ರಾಜಕೀಯದ ಶಿಕ್ಷಣದ ಜೊತೆಗೆ ಅವರನ್ನು ರಾಜಕೀಯರನ್ನಾಗಿ ಶಕ್ತಗೊಳಿಸುವ ಉದ್ದೇಶವನ್ನು ಹೊಂದಿದೆ.
*ಬಾಬಾ ಸಾಹೇಬರು ಮಹಿಳೆಯರಿಗಾಗಿ ಕೊಟ್ಟ ಹಕ್ಕುಗಳು*
1) ಸ್ವಾತಂತ್ರ್ಯದ ಹಕ್ಕು
2) ಸಮಾನತೆಯ ಹಕ್ಕು
3) ಶೈಕ್ಷಣಿಕ ಹಕ್ಕು
4) ಶಿಕ್ಷಣದ ಹಕ್ಕು
5) ಉದ್ಯೋಗದ ಹಕ್ಕು
6) ರಾಜಕೀಯ ಹಕ್ಕು
7) ಆಸ್ತಿಯ ಹಕ್ಕು
8) ಸ್ವಂತ ನಿರ್ಧಾರದ ಹಕ್ಕು
9) ಮಾನವ ಸಂಪನ್ಮೂಲದ ಹಕ್ಕು
10) ಹೋರಾಟದ ಹಕ್ಕು
11) ಮತದಾನದ ಹಕ್ಕು
ಇಷ್ಟೆಲ್ಲಾ ಹಕ್ಕುಗಳನ್ನೂ ನೀಡಿ 70 ವರುಷಗಳು ಕಳೆದರೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯವಾಗಿ ಮುಂದುವರೆಯದಿರುವುದು ಶೋಚನಿಯವಾಗಿದೆ...
ಮಹಿಳೆಯರ ಹಕ್ಕುಗಳು ಹಾಗೂ ಅವರ ಅಧಿಕಾರಕ್ಕಾಗಿ ಮುಕ್ತ ಅವಕಾಶವನ್ನು ಕಲ್ಪಿಸಿ ಕೊಡುವುದು ಡಾ|| ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಉದ್ದೇಶ ಹಾಗೂ ಧ್ಯೇಯವಾಗಿದೆ..
ಮಹಿಳಾ ದಿನಾಚರಣೆಯ ಶುಭಾಶಯಗಳು
ಲೇಖನ
ಸುನೀಲ್ ಎನ್
ಜಿಲ್ಲಾಧ್ಯಕ್ಷರು ( ಯುವಘಟಕ)
ಡಾ|| ಅಂಬೇಡ್ಕರ್ ಪೀಪಲ್ಸ್ ಪಾರ್ಟಿ
ರಾಮನಗರ ಜಿಲ್ಲೆ
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು