ತಾಳೆಯೋಲೆ ೨೪೬: ಸಾಯಂಕಾಲ ಯಾವ ರೀತಿಯಾಗಿ ದೈವಾರಾಧನೆ ಮಾಡಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಸಾಯಂಕಾಲ ಯಾವ ರೀತಿಯಾಗಿ ದೈವಾರಾಧನೆ ಮಾಡಬೇಕು ?
ಸೂರ್ಯಾಸ್ ಆದ ೨೪ ನಿಮಿಷಗಳ ನಂತರ ದೀಪವನ್ನು ಬೆಳಗಿಸಬೇಕು. ಹಾಗೆ ಬೆಳಗಿಸಿದ ಸಮಯದಲ್ಲಿ ಅದಕ್ಕೆ ಸಂಬಂಧಿಸಿದ ಮಂತ್ರವನ್ನು ಹೇಳಬೇಕು ಕುಟುಂಬ ಸಭ್ಯರು ನಿಂತುಕೊಂಡು ಲಕ್ಷ್ಮೀ ಸ್ವರೂಪವಾದ ದೀಪಕ್ಕೆ ನಮಸ್ಕರಿಸಬೇಕು.
ಅಂತಹ ದೀಪವನ್ನು ದಕ್ಷಿಣ ಮತ್ತು ಪೂರ್ವ ದಿಕ್ಕಿನಿಂದ ದರ್ಶಿಸಬೇಕು. ತುಳಸಿ ದಳಗಳನ್ನು ದೀಪದ ಕೆಳಗಿಟ್ಟು, ದೀಪ ಸ್ತಂಭವನ್ನು ಅದರ ಮೇಲೆ ಇಡುವುದು ಶುಭಕರವು. ಅಂತಹ ದೀಪವನ್ನು ಅಷ್ಟ ದಿಕ್ಕುಗಳಿಗೆ ತೋರಿಸಿ ಹಾಗೆಯೇ ಮನೆಯ ಮುಂದಿರುವ ಮರಗಳಿಗೆ ತೋರಿಸಬೇಕು.
ದನದ ಕೊಟ್ಟಿಗೆ ಇದ್ದರೆ ಆ ಕಡೆಯೂ ಸಹ ತೋರಿಸಬೇಕು. ಆನಂತರ ಆ ದೀಪವನ್ನು ದೇವರ ಸನ್ನಿಧಿಯಲ್ಲಿ ಇಡಬೇಕು.
ಹೀಗೆ ದೀಪಾರಾಧನೆಯನ್ನು ಮನೆಯಲ್ಲಿ ಮಾಡುವುದಕ್ಕೆ ಮೊದಲು ಸ್ನಾನವನ್ನು ಮಾಡಿಕೊಂಡು ಇಲ್ಲವೆ ಶರೀರದ ಭಾಗಗಳನ್ನು ಶುಭ್ರ ಪಡಿಸಿಕೊಂಡು ಪವಿತ್ರ ವಿಭೂತಿ ಯನ್ನು ಹಾಗೂ ತಿಲಕವನ್ನು ಧರಿಸಬೇಕು. ಉಪಯೋಗಿಸಿದ ಅಶುದ್ಧ ತೈಲವನ್ನು ಹಾಗೂ ಬತ್ತಿಯನ್ನು ಬಳಸಬಾರದು.
ದೀಪದ ಕಾಂತಿ ಅತೀ ಹೆಚ್ಚಾಗಿಯಾಗಲಿ ಅಥವಾ ಅತೀ ಕಡಿಮೆಯಾಗಿ ಆಗಲಿ ಉರಿಯಬಾರದು. ದೀಪದಲ್ಲಿನ ಬೆಂಕಿ ಹಾಗೆ ಹೀಗೆ ಗಾಳಿಗೆ ಆಡದಿರದಂತೆ ಹಾಗೆ ನೋಡಿಕೊಳ್ಳಬೇಕು. ದೀಪದ ಮುಖವನ್ನು ಮಾತ್ರ ದಕ್ಷಿಣ ದಿಕ್ಕಿಗೆ ಆಡದ ಹಾಗೆ ಎಚ್ಚರಿಕೆ ವಹಿಸಬೇಕು.
ಇಂತಹ ಪೂಜೆಯಲ್ಲಿ ಕುಟುಂಬ ಸಭ್ಯರೆಲ್ಲರೂ ಶುಚಿ ಶುಭ್ರತೆಗಳಿಂದ ಇದ್ದು, ವಿಭೂತಿ ಹಾಗೂ ಕುಂಕುಮ ಚಂದನ ದೊಂದಿಗೆ ಪೂಜೆಗೆ ಉಪಯೋಗಿಸುವ ವಸ್ತ್ರಗಳನ್ನು ಧರಿಸಬೇಕು. ಋತುಸ್ರಾವ ಇರುವ ಸ್ತ್ರೀಯರು ಈ ಪೂಜೆಯಲ್ಲಿ ಭಾಗವಹಿಸ ಬಾರದು ಪೂಜೆ ನಡೆಯುತ್ತಿರುವ ಸಮಯದಲ್ಲಿ ಅತಿಥಿಗಳು ಬಂದರೆ ಅವರೂ ಸಹ ಪೂಜೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು.
ಇಂತಹ ದೀಪಾರಾಧನೆಯಿಂದ ಕೂಡಿದ ದೈವಾರಾಧನೆ ಮಾಡುವ ಮನೆಯು ಅನೇಕ ಶುಭಗಳನ್ನು ಹೊಂದುವುದು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು