ತಾಳೆಯೋಲೆ ೨೭೫: ಆತ್ಮಹತ್ಯೆಯನ್ನು ಹಿಂದೂ ಮತವು ಸನ್ಮತಿಸುವುದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಆತ್ಮಹತ್ಯೆಯನ್ನು ಹಿಂದೂ ಮತವು ಸನ್ಮತಿಸುವುದೇ ?
ಸಮಾಜದಲ್ಲಿ ಒಬ್ಬರನ್ನು ನೋಡಿ ಮತ್ತೊಬ್ಬರು ಸರಿಯಾದ ತಿಳುವಳಿಕೆ ಇಲ್ಲದೆ ಜೀವನದಲ್ಲಿ ಎಂತಹ ಚಿಕ್ಕ ಸಮಸ್ಯೆಯಾದರೂ ಆತ್ಮಹತ್ಯೆ ಮಾಡಿಕೊಳ್ಳುವುದು ಹಾಗೂ ಅಂತಹ ಪ್ರಯತ್ನಗಳಿಗೆ ಶರಣು ಹೋಗುವುದನ್ನು ನಾವು ನೋಡುತ್ತಲೇ ಇರುವೆವು.
ಹಿಂದೂ ಮತವು ಆತ್ಮಹತ್ಯೆಯನ್ನು ಒಂದು ಘೋರ ಪಾಪವಾಗಿ ಪರಿಗಣಿಸಿದೆ. ಒಬ್ಬ ವ್ಯಕ್ತಿ ತನ್ನ ಕಷ್ಟಗಳನ್ನು ತೊಲಗಿಸಿಕೊಂಡು, ತಾನು ಮಾಡಿದ ಕೆಟ್ಟ ಕರ್ಮಗಳ ಕೆಟ್ಟ ಫಲಿತಗಳಿಂದ ತಪ್ಪಿಸಿಕೊಳ್ಳಬೇಕೆಂಬುದನ್ನು ಪ್ರಕೃತಿ (ದೈವ) ಒಪ್ಪುವುದಿಲ್ಲ. ಸಹಜ ಮರಣವನ್ನು ಹೊಂದುವುದು ಎಲ್ಲಾ ಮರಣಗಳಿಗಿಂತ ಶ್ರೇಷ್ಠವಾದುದು. ಪ್ರಕೃತಿ ಸಹಜವಾಗಿಯೇ ಮರಣವು ಬರಬೇಕು. ಹಾಗಲ್ಲದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮರಣಾನಂತರ ಊರ್ಧ್ವ ಲೋಕಗಳಿಗೆ ಹೋಗಲಾರ. ಆತನು ಸೂಕ್ಷ್ಮ ಶರೀರದಲ್ಲಿ ಅಲ್ಲಿನ ಪರಿಸರದಲ್ಲೇ ಸಂಚರಿಸುತ್ತಾ ಇದ್ದು, ಬದುಕಿದ್ದಾಗ ಇದ್ದ ದುಃಖಕ್ಕಿಂತ ಅಧಿಕ ದುಃಖವನ್ನು ಅನುಭವಿಸುವನು. ಇಂತಹವರು ಸ್ವಲ್ಪ ಕಾಲ ಹೀಗೆ ದೆವ್ವಗಳಾಗಿ ಜೀವಿಸಿರಬೇಕಾಗುತ್ತದೆ.
ಈ ವಿಧಾನವಲ್ಲದೆ ಮರಣವನ್ನು ತನ್ನ ಇಷ್ಟಾನುಸಾರ ಹೊಂದುವ ಮತ್ತೊಂದು ಸರಿಯಾದ ವಿಧಾನವಿದೆ. ಇದನ್ನೇ ನಾವು ಜೀವ ಸಮಾಧಿ ಎಂದು ವ್ಯವಹರಿಸುತ್ತಿರುತ್ತೇವೆ. ಜೀವನದಲ್ಲಿ ಒಬ್ಬ ವ್ಯಕ್ತಿ ತಾನು ಪೂರ್ತಿ ಮಾಡಬೇಕಾದ ಬಾಧ್ಯತೆಗಳು ಹಾಗೂ ಕೆಲಸಗಳನ್ನು ಪೂರ್ತಿ ಮಾಡಿಕೊಂಡು ಭೌತಿಕ ದೇಹವನ್ನು ತನ್ನ ಇಷ್ಟಾನುಸಾರವಾಗಿ ಬಿಡಬೇಕೆಂದುಕೊಂಡರೂ ಅದು ಒಂದು ರೀತಿಯ ಜೀವ ಸಮಾಧಿಯಂತೆಯೇ ಆಗುತ್ತದೆ. ತನ್ನ ದೇಹವನ್ನು ಪಂಚಭೂತಗಳಲ್ಲಿನ ಯಾವುದೋ ಒಂದರಲ್ಲಿ ಐಕ್ಯ ಮಾಡಿಕೊಳ್ಳಲಾಗುತ್ತದೆ. ಈ ರೀತಿಯಾಗಿ ದೇಹ ತ್ಯಾಗವನ್ನು ಮಾಡಿದವರು ಪರಮಾತ್ಮನಲ್ಲಿ ಐಕ್ಯವಾಗುವರು. ಇಲ್ಲವೇ ಉನ್ನತ ಲೋಕಗಳನ್ನು ಹೊಂದುವರು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು