ತಾಳೆಯೋಲೆ ೨೯೫: ಇತರ ಶಾಸ್ತ್ರಗಳಿಗಿಂತ ಜ್ಯೋತಿಷ್ಯವು ಹೇಗೆ ಬೇರೆಯಾಗಿದೆ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಇತರ ಶಾಸ್ತ್ರಗಳಿಗಿಂತ ಜ್ಯೋತಿಷ್ಯವು ಹೇಗೆ ಬೇರೆಯಾಗಿದೆ ?
ಆಕಾಶದಲ್ಲಿ ಸಂಚರಿಸುವ ಗ್ರಹ ನಕ್ಷತ್ರಾದಿಗಳು ಭೂಮಿಯ ಮೇಲಿರುವ ಜೀವರಾಶಿಗಳ ಮೇಲೆ ಹೇಗೆ ಪ್ರಭಾವವನ್ನು ಬೀರುವುದೆಂಬುದನ್ನು ತಿಳಿಸುವ ಶಾಸ್ತ್ರವನ್ನು ಜ್ಯೋತಿಷ್ಯ ಎಂದು ಕರೆಯುವರು. ಜ್ಯೋತಿಷ್ಯವು ಮುಖ್ಯವಾಗಿ ಮಾನವರ ಜೀವನವನ್ನು ಕುರಿತು ತಿಳಿಸುತ್ತದೆ. ನಮ್ಮ ಶರೀರದಲ್ಲಿನ ಹಾಗೂ ಮನಸ್ಸಿನಲ್ಲಿನ ಚಲನಗಳಿಗೆ ಗ್ರಹ ನಕ್ಷತ್ರಾದಿಗಳಿಗೆ ಸಂಬಂಧವಿದೆಯೆಂದು, ಅವುಗಳ ಪ್ರಭಾವ ನಮ್ಮ ಮನೋ ಶರೀರದ ಮೇಲೆ ಬಿದ್ದು, ನಮ್ಮ ಜೀವನವನ್ನು ಕ್ರಮಬದ್ದವಾಗಿ ಮಾಡುವುದೆಂದು ನಂಬಿಕೆ. ವಿಶ್ವದಲ್ಲಿನ ಗೋಳಗಳು ನಿರಂತರವಾಗಿ ಪರಿಭ್ರಮಿಸುವುದರಿಂದ ಕಾಲವು ಉಂಟಾಗುವುದು. ಈ ಕಾಲವು ನಮ್ಮ ಜೀವನ ಕಾಲದ ಮೇಲೆ ಹೇಗೆ ತನ್ನ ಪ್ರಭಾವವನ್ನು ಹೊಂದಿರುವುದೆಂದು ಜ್ಯೋತಿಷ್ಯ ತಿಳಿಸುತ್ತದೆ. ವಿಶ್ವದಲ್ಲಿನ ಸಮಸ್ತ ಕ್ರಿಯೆಗಳು ಒಂದಾನೊಂದು ವಿಧಾನವನ್ನು ಅನುಸರಿಸಿ ನಡೆಯುತ್ತವೆ.
ಇತರ ಶಾಸ್ತ್ರಗಳು ಮಾನವನ ಜೀವನ ನಡೆಯನ್ನು ತಿಳಿಸಲಾರವು. ಒಬ್ಬ ವ್ಯಕ್ತಿಯ ಜೀವನ ಹೇಗೆ ಸಾಗುವುದೋ, ಯಾವಾಗ ವಿವಾಹವಾಗುವುದೋ, ಯಾವ ರೀತಿಯ ಉದ್ಯೋಗ ಸಿಗುವುದೋ, ಭವಿಷ್ಯತ್ತು ಹೇಗೆ ಇರುವುದೋ ಎಂಬುದನ್ನು ಜ್ಯೋತಿಷ್ಯ ಶಾಸ್ತ್ರ ಮಾತ್ರವೇ ತಿಳಿಸಬಲ್ಲದು. ಇದೇ ಈ ಶಾಸ್ತ್ರದ ಮಹತ್ವ. ಶಾಸ್ತ್ರದ ಅವಗಾಹನೆ ಸರಿಯಾಗಿದ್ದರೆ ಮಾತ್ರ ನಮ್ಮ ಜೀವನದಲ್ಲಿಯ ಘಟನೆಗಳು ಹಾಗೂ ಫಲಗಳ ಕುರಿತು ಶೇಕಡಾ ೮೦ ರಷ್ಟು ಖಚಿತವಾದ ಸಮಾಚಾರವನ್ನು ನಾವು ಹೊಂದುತ್ತೇವೆ.
ಋಷಿಗಳು ಅತೀಂದ್ರಿಯ ಶಕ್ತಿಯನ್ನು ಹೊಂದಿದ್ದರು. ಅವರು ತಮ್ಮ ದರ್ಶನ ಪ್ರಭಾವದಿಂದ ವಿಶ್ವ ರಹಸ್ಯಗಳನ್ನು ತಿಳಿದುಕೊಂಡು ಗ್ರಹ ನಕ್ಷತ್ರ ಸಂಬಂಧವಾದ ಜ್ಯೋತಿಷ್ಯ ಶಾಸ್ತ್ರವನ್ನು ರಚಿಸಿರುವರು. ಗ್ರಹ ಚಲನೆ, ಕಾಲ, ಪ್ರದೇಶ ಮುಂತಾದ ಅಂಶಗಳನ್ನು ಈ ಶಾಸ್ತ್ರವು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಶಕುನಗಳು ಹಾಗೂ ಅವಗಾಹನೆಯೂ ಸಹ ಇದರಲ್ಲಿ ಒಂದು ಭಾಗವಾಗಿ ಇರುವುದು. ಇತರೆ ಶಾಸ್ತ್ರಗಳಿಗೆ ಪ್ರಯೋಗಗಳಿಗಾಗಿ ಪ್ರಯೋಗ ಶಾಲೆ ಅಗತ್ಯ. ಆದರೆ ಜ್ಯೋತಿಷ್ಯ ಶಾಸ್ತ್ರಕ್ಕೆ ಅಂತಹ ಅಗತ್ಯತೆ ಇಲ್ಲ. ಕೇವಲ ಪರಿಸರ ತಿಳುವಳಿಕೆಯಿಂದ ಫಲಗಳನ್ನು ತಿಳಿಸಲಾಗುವುದು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು