Tel: 7676775624 | Mail: info@yellowandred.in

Language: EN KAN

    Follow us :


ಸಂಕ್ರಾಂತಿ ಯುವಕವಿಗೋಷ್ಠಿ

Posted date: 25 Jan, 2021

Powered by:     Yellow and Red

ಸಂಕ್ರಾಂತಿ ಯುವಕವಿಗೋಷ್ಠಿ

ರಾಮನಗರ:ಜ/23/21/ಶನಿವಾರ. ರಾಮನಗರ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಸಂಕ್ರಾಂತಿ ಯುವ ಕವಿಗೋಷ್ಠಿ ಮತ್ತು ಗೀತಗಾಯನ ಕಾರ್ಯಕ್ರಮವು ಜಿಲ್ಲಾ ಕ.ಸಾ.ಪ.ಕಛೇರಿಯಲ್ಲಿ  ಅರ್ಥಪೂರ್ಣವಾಗಿ ನಡೆಯಿತು.  ಈ ಕಾರ್ಯಕ್ರಮವು ಗೋವಿಂದಹಳ್ಳಿ ಶಿವಣ್ಣರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಆಹ್ವಾನಿತ ಅತಿಥಿ ಗಣ್ಯರನ್ನು  ತಾಲ್ಲೂಕು ಕ.ಸಾ.ಪ ದ ಅಧ್ಯಕ್ಷರಾದ ಶ್ರೀಯುತ ಬಿ.ಟಿ ದಿನೇಶ್ ಬಿಳಗುಂಬ ರವರು ಸ್ವಾಗತಿಸಿದರು. ಜಿಲ್ಲಾ ಕ.ಸಾ.ಪ ದ ಕೋಶಾಧ್ಯಕ್ಷರಾದ ಶ್ರೀಯುತ ನಂಜೇಗೌಡರು ಪ್ರಾಸ್ತಾವಿಕ ನುಡಿಯನ್ನಾಡುತ್ತಾ ಪರಿಷತ್ತು ನಡೆದು ಬಂದ ದಾರಿ ಮತ್ತು ಸಂಘಟನೆಯ ಸಾರ್ಥಕ ಸೇವೆಯನ್ನು ಸ್ಮರಿಸಿದರು.


ಹಿರಿಯ ಸಾಹಿತಿಗಳಾದಂತಹ ಶ್ರೀಯುತ ಜಿ.ಹೆಚ್ ರಾಮಯ್ಯರವರು    ಉದ್ಘಾಟನೆಯನ್ನು  ನಡೆಸಿಕೊಟ್ಟು "ಸಾಹಿತ್ಯಕ್ಕೆ ವಸ್ತು ಮುಖ್ಯವಲ್ಲ ಅದಕ್ಕೆ ಕೊಟ್ಟ ಬಂಧ ಮತ್ತು ಅನುಬಂಧ ಮುಖ್ಯ" ಎಂದು ಹೇಳುತ್ತಾ ಯುವ ಕವಿಗಳಿಗೆ ಸ್ಪೂರ್ತಿಯನ್ನು ತುಂಬಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಶ್ರೀಮತಿ  ಶೈಲಾಶ್ರೀನಿವಾಸ್ ರವರು ಯುವ ಕವಿಗಳ ಕವಿತೆಗಳನ್ನು ವಿಮರ್ಶಿಸುತ್ತಾ ಅವರು ಕ್ರಮಿಸಬೇಕಾದ ದಾರಿ ಯ ಬಗ್ಗೆ ಮಾರ್ಗದರ್ಶನ   ಮಾಡುತ್ತಾ ನಾವು ಯಾರೊಂದಿಗಿದ್ದವೆಯೊ ಅವರಂತಂತೆಯೇ ಆಗುತ್ತೇವೆ  "ನಾವು ಕಡಲಾಗಬೇಕಾದರೆ ನದಿಯ ಜಾಡನ್ನು ಹಿಡಿಯಬೇಕು" ಎಂಬ ಉಕ್ತಿ ವೈಚಿತ್ರ‍್ಯವನ್ನು ತಿಳಿಸಿ ಸಾಹಿತ್ಯ ಪರಿಷತ್ತಿನ ಬಲವರ್ಧನೆಗೆ ಮಾರ್ಗದರ್ಶನ ಮಾಡಿದರು.


ಯುವ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಯುವ ಕವಿಗಳಾದ ಸುರೇಶ್,  ಹೇಮಂತ್ ತಿಬ್ಬೇಗೌಡನದೊಡ್ಡಿ, ಗೋವಿಂದಸ್ವಾಮಿ, ಕಿರಣ್ ರಾಜ್ ತುಂಬೇನಳ್ಳಿ, ಅಭಿಷೇಕ್, ಅಕ್ಷಯ್ ಗೌತಮ್,  ಶ್ರೀನಿವಾಸ್ ಅಬ್ಬೂರ್,  ವಿನೋದ್ ಕಲ್ಬಾಳು, ಚೇತನ್ ಗುನ್ನೂರು ಮೊದಲಾದವರು ತಮ್ಮ ಭರವಸೆಯ ಕವಿತೆಗಳೊಂದಿಗೆ ತಮ್ಮ ಛಾಪನ್ನು ಮೂಡಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಶ್ರಾಂತ ಪ್ರಾಂಶುಪಾಲರಾದ  ಶ್ರೀಯುತ ವನರಾಜುರವರು ಹಾಗೂ ಸಮಾಜ ಸೇವಕರಾದ ಶ್ರೀ ಭಾನುಪ್ರಕಾಶ್ ಬಾನಂದೂರು ಮತ್ತು ಲಯನ್ಸ್ ಸಿಲ್ಕ್ ಸಿಟಿ ರಾಮನಗರದ ಅಧ್ಯಕ್ಷರಾದ ಶ್ರೀಮತಿ ಸುಧಾರಾಣಿಯವರು ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಅಭಿಮಾನದಿಂದ  ಮಾತನಾಡಿದರು.


ಗೀತಗಾಯನದ ಮೂಲಕ ಶ್ರೀ ಗೋವಿಂದಹಳ್ಳಿ ಶಿವಣ್ಣ, ಶ್ರೀಶೈಲ್ ಹೂಗಾರ್, ಶ್ರೀಮತಿ ನಾಗಶ್ರೀಯವರು  ಕಾರ್ಯಕ್ರಮಕ್ಕೆ ಮೆರಗನ್ನು ತಂದುಕೊಟ್ಟರು. ಕ.ಸಾ.ಪ ದ ಪದಾಧಿಕಾರಿಗಳಾದಂತಹ ಶ್ರೀಯುತ ರಾಜೇಶ್ ಮತ್ತು ಶ್ರೀ ಕಿರಣ್ ಕುಮಾರ್ ರವರು ಈ ಕಾರ್ಯಕ್ರಮವನ್ನು  ಸುಂದರವಾಗಿ  ಸಂಯೋಜನೆಯನ್ನು ಮಾಡಿಕೊಟ್ಟಿದ್ದಾರೆ. ಪರಿಸರ ಪ್ರೇಮಿ  ರಾಜು ಮತ್ತಿತರರು  ಉಪಸ್ಥಿತರಿದ್ದರು.    ಚೇತನ್ ಗುನ್ನೂರು ಸುಂದರ ನಿರೂಪಣೆ ಕಾರ್ಯಕ್ರಮಕ್ಕೆ ಮೆರಗನ್ನು ತಂದುಕೊಟ್ಟಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑