ಪ್ರೊ|| ದೊಡ್ಡಅರಸಿನಕೆರೆ ಮಾಯಪ್ಪ ಅವರಿಗೆ ಅಭಿನಂದನೆ ಮತ್ತು ವಾಕ್ ಪ್ರಭೆ ಗೌರವ ಗ್ರಂಥ ಬಿಡುಗಡೆ
ರಾಮನಗರ:ಫೆ/20/21/ಶನಿವಾರ. ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೊಡ್ಡ ಅರಸಿನಕೆರೆ ಮಾಯಪ್ಪನವರ ವಾಕ್ ಪ್ರಭೆ ಗೌರವ ಕೃತಿಯನ್ನು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬಿಡುಗಡೆ ಮಾಡಿದರು.
ಗ್ರಂಥ ಬಿಡುಗಡೆಯ ನಂತರ ಸಹಕಾರ ಸಚಿವರು ಮಾತನಾಡಿ ಮಾಯಪ್ಪ ಅವರ ವಾಕ್ ಚಾತುರ್ಯ , ಜನಪದ ಮಾತುಗಳು, ಮಾತನಾಡುವ ಕಲೆ ಮತ್ತು ಭಾಷಣಗಳು ನನ್ನನು ಅವರ ಅಭಿಮಾನಿಯಾಗುವಂತೆ ಮಾಡಿದೆ ಎಂದರು.
ಮಾಯಣ್ಣ ಅವರು ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡುವುದನ್ನು ಗಮನಿಸಿ ಯಾವುದಾದರೂ ತಪ್ಪುಗಳು ಇದ್ದ ಸಂದರ್ಭದಲ್ಲಿ ತಿದ್ದುಕೊಳ್ಳುವಂತೆ ತಿಳಿಸುತ್ತಾರೆ. ಮಾಯಪ್ಪ ಅವರು ನನಗೆ ಭಾಷಣಗಳನ್ನು ಮಾಡುವ ಕಲೆಯನ್ನು ಕಲಿಸಿದ್ದಾರೆ. ನನ್ನ ವಾಕ್ ಚಾತುರ್ಯ ಅವರಿಂದ ಉತ್ತಮವಾಗಿದೆ ಎಂದರು
ಮೈಸೂರಿನ ಮೃಗಾಲಯದಲ್ಲಿ ಕೋವಿಡ್ ಸಂದರ್ಭದಲ್ಲಿ ಪ್ರಾಣಿಗಳಿಗೆ ಆಹಾರ ಕೊರತೆ ಉಂಟಾದ ಸಂದರ್ಭದಲ್ಲಿ 3 ರಿಂದ 4 ಕೋಟಿ ಹಣ ಸಂಗ್ರಹಿಸಿ ನೀಡಲಾಗಿದೆ. ಈ ಸಂದರ್ಭದಲ್ಲಿ ಮಾಯಣ್ಣ ಅವರು ಸಹ ತಮ್ಮ ಬಡಾವಣೆಯಲ್ಲಿ ಹಣ ಸಂಗ್ರಹಿಸಿ ನೀಡಿದರು. ಇದರ ಜೊತೆಯಲ್ಲಿ ಅವರು ಬರೆದಂತಹ ಸಾಲನ್ನು ಮೈಸೂರು ಮೃಗಾಲಯದಲ್ಲಿ ಅನಾವರಣಗೊಳಿಸಲಾಗಿದೆ. ಇದರ ಮುಂದೆ ಪ್ರವಾಸಿಗರು ನಿಂತು ಭಾವಚಿತ್ರ ತೆಗೆದುಕೊಳ್ಳುವುದು ಹೆಮ್ಮೆಯ ವಿಷಯ ಎಂದರು.
ವಿದ್ಯಾಭ್ಯಾಸದ ನಂತರ ಪಟ್ಟಣ ಸೇರುವ ಜನ ತಮ್ಮ ಗ್ರಾಮವನ್ನು ಮರೆಯುತ್ತಾರೆ.ಆದರೆ ಮಾಯಣ್ಣ ಅವರು ತಮ್ಮ ಹುಟ್ಟೂರನ್ನು ಮರೆತಿರುವುದಿಲ್ಲ ಅಲ್ಲಿಗೆ ಬೇಕಿರುವ ಸೌಕರ್ಯಗಳನ್ನು ಒದಗಿಸಿದ್ದಾರೆ ಎಂದರು.
ನಿವೃತ್ತಿಯ ನಂತರವು ಕೂಡ ಮಾಯಣ್ಣ ಅವರು ಸೃಜನಾತ್ಮಕ ಚಟುವಟಿಕೆಗಳು ಕುಂದದಂತೆ ಅವರಿಗೆ ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ನೀಡಲು ಸರ್ಕಾರದ ಗಮನಕ್ಕೆ ತರಲು ಚಿಂತನೆ ಮಾಡಿದ್ದೇನೆ. ಅವರ ನಿವೃತ್ತಿ ಜೀವನವು ಸುಖಕರವಾಗಿರಲೆಂದು ಸಚಿವರು ಹಾರೈಸಿದರು.
ಕಾರ್ಯಕ್ರಮದಲ್ಲಿ ಚಿಂತಕ ಪಾವಗಡ ಪ್ರಕಾಶ, ಮಾಗಡಿ ಶಾಸಕ ಎ,ಮಂಜುನಾಥ್, ವಿಧಾನ ಪರಿಷತ್ತಿನ ಮಾಜಿ ಶಾಸಕ ಲಿಂಗಪ್ಪ ಹಾಗೂ ಅಪ್ಪಾಜಿ ಗೌಡ ಅವರು ಪುರಸಭೆ ಉಪಾಧ್ಯಕ್ಷೆ ಸರಸ್ವತಿ ಮತ್ತು ಪ್ರೊ|| ಮಾಯಪ್ಪ ನವರ ಬಂಧು ಮಿತ್ರರು ಉಪಸ್ಥಿರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು