ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಚನ್ನಪಟ್ಟಣ ದವರಿಗೆ ಸಿಗಲಿ. ಬೇರೆ ತಾಲ್ಲೂಕಿನ ಪಾಲಾಗುವುದು ಬೇಡ. ಶಿವಮಾದು
ರಾಮನಗರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ಜಿಲ್ಲೆಯ ಅರ್ಧದಷ್ಟು ಮತದಾರರಿರುವುದರಿಂದ ಈ ಬಾರಿಯೂ ನಮ್ಮ ತಾಲ್ಲೂಕಿಗೆ ಅಧ್ಯಕ್ಷ ಸ್ಥಾನ ಸಿಗಬೇಕು ಎಂಬ ದೃಷ್ಟಿಯಿಂದ ನಾವೆಲ್ಲರೂ ನಾಮಪತ್ರವನ್ನು ಹಿಂಪಡೆದು ಶಿಕ್ಷಕ ಯೋಗೇಶ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ನಿಕಟಪೂರ್ವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಶಿವಮಾದು ರವರು ತಿಳಿಸಿದರು.
ಅವರು ಇಂದು ನಗರದ ಕೋಟೆ ಯಲ್ಲಿರುವ ಮಿಲೇನಿಯಂ ಶಾಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಾನು ಕಳೆದ ಒಂದೂವರೆ ದಶಕದಿಂದ ಸಾಹಿತ್ಯ ಪರಿಚಾರಕನಾಗಿ ತಾಲ್ಲೂಕಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಪರಿಷತ್ತಿನ ಹಲವು ಹುದ್ದೆಗಳ ಜೊತೆಗೆ ತಾಲ್ಲೂಕು ಅಧ್ಯಕ್ಷನಾಗಿಯೂ ಕೆಲಸ ನಿರ್ವಹಿಸಿದ್ದೇನೆ. ಹೆಚ್ಚು ಮತದಾರರ ಒಲವು ನನಗಿದ್ದುದ್ದರಿಂದ ನಾನೂ ಸಹ ನಾಮಪತ್ರ ಸಲ್ಲಿಸಿದ್ದೆ. ನಮ್ಮ ತಾಲ್ಲೂಕಿನಲ್ಲಿಯೇ ಏಳು ಮಂದಿ ಸ್ಪರ್ಧಿಸಿದ ಕಾರಣ ಮತಗಳು ಒಡೆದು ಬೇರೆ ತಾಲ್ಲೂಕಿನ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ದಟ್ಟವಾಗಿದ್ದರಿಂದ ಈ ಹಿಂದೆ ಸಭೆ ನಡೆಸಿ ಒಮ್ಮತದ ಅಭ್ಯರ್ಥಿ ಉಳಿಸಲು ಪ್ರಯತ್ನ ನಡೆಯಿತು. ಎರಡನೇ ಬಾರಿ ಸ್ಪರ್ಧಿಸಿರುವ ಬಿ ಟಿ ನಾಗೇಶ್ ಒಪ್ಪದ ಕಾರಣ ನಾಲ್ಕು ಮಂದಿ ಸ್ಪರ್ಧಿಗಳಾದ ಶಿವಮಾದು, ಬೊಮ್ಮನಾಯಕನಹಳ್ಳಿ ಕೃಷ್ಣಪ್ಪ, ವಸಂತಕುಮಾರ್ ಮತ್ತು ಗುರುಮಾದಯ್ಯ ನಾವುಗಳು ಚರ್ಚಿಸಿ ನಾಮಪತ್ರ ಹಿಂಪಡೆದು ಯೋಗೇಶ್ ರವರಿಗೆ ಬೆಂಬಲ ಸೂಚಿಸಿದ್ದೇವೆ ಎಂದು ತಿಳಿಸಿದರು.
ಅಭ್ಯರ್ಥಿ ಯೋಗೇಶ್ ಮಾತನಾಡಿ ಶಿವಮಾದು ರವರು ಅಭ್ಯರ್ಥಿ ಆದರೆ ನಾನು ಹಿಂಪಡೆಯುವುದಾಗಿ ಘೋಷಿಸಿದ್ದೆ. ಈ ಮೊದಲು ಬೇರೆ ತಾಲ್ಲೂಕಿನ ಅದರಲ್ಲೂ ಮಹಿಳೆಗೆ ಸ್ಥಾನ ಸಿಗುವುದಾದರೂ ಹಿಂಪಡೆಯುತ್ತೇನೆ ಎಂದು ತಿಳಿಸಿದ್ದೆ. ಓರ್ವ ಅಭ್ಯರ್ಥಿ ಬೇರೆಯವರ ಕಡೆಯಿಂದ ಧಮ್ಕಿ ಹಾಕಿಸುವುದು, ಸರ್ಕಾರಿ ನೌಕರ ಎಂಬ ಕಾರಣಕ್ಕಾಗಿ ಅಧಿಕಾರಿಗಳ ಮೇಲೆ ಒತ್ತಡ ಹೇರುವುದರ ಜೊತೆಗೆ ನನಗೆ ಮಾನಸಿಕವಾಗಿ ತೊಂದರೆ ನೀಡಿದ್ದಾರೆ ಎಂದು ಬಿ ಟಿ ನಾಗೇಶ್ ಹೆಸರೇಳದೆ ದೂರಿದರು.
ನಾನು ಚಿಕ್ಕಂದಿನಿಂದಲೇ ಕನ್ನಡದ ಗೀಳು ಅಂಟಿಸಿಕೊಂಡವನು, ಮೂರು ಪದವಿಗಳನ್ನು ಕನ್ನಡದಲ್ಲಿಯೇ ಪಡೆದುಕೊಂಡಿದ್ದೇನೆ. ನಾನು ಸರ್ಕಾರಿ ಹುದ್ದೆಯಲ್ಲಿದ್ದರೂ ಸಹ ನನ್ನ ಕನ್ನಡ ಸಾಹಿತ್ಯ ಸೇವೆಗೆ ಚ್ಯುತಿಯಾಗದಂತೆ ಕೆಲಸ ಮಾಡುತ್ತೇನೆ. ಜಿಲ್ಲೆಯ ಈಗಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಶಿಕ್ಷಕರಾದಿಯಾಗಿ ಮತದಾರರ ಹೆಚ್ಚಿನ ಬೆಂಬಲ ನನಗಿದೆ. ಎಲ್ಲರೂ ಸಹ ನನಗೆ ಮತ ನೀಡುವ ಮೂಲಕ ಕನ್ನಡಮ್ಮನ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮಾಧ್ಯಮದ ಮೂಲಕ ಮನವಿ ಮಾಡಿದರು.
ಮಾಧ್ಯಮ ಗೋಷ್ಠಿಯಲ್ಲಿ ಭಾರತ್ ವಿಕಾಸ ಪರಿಷದ್ ನ ಅಧ್ಯಕ್ಷ ವಸಂತಕುಮಾರ್, ಲೇಖಕ ಬೊಮ್ಮನಾಯಕನಹಳ್ಳಿ ಕೃಷ್ಣಪ್ಪ ಮತ್ತು ವೀರಶೈವ ಸಂಘದ ಜಿಲ್ಲಾಧ್ಯಕ್ಷ ಗುರುಮಾದಯ್ಯ ನವರು ಯೋಗೇಶ್ ಬೆಂಬಲ ಸೂಚಿಸಿ ಮಾತನಾಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು