ಶ್ರವಣಬೆಳಗೊಳದಲ್ಲಿ ಗುಳ್ಳಕಾಯಜ್ಜಿ ನಾಟಕ ಪ್ರದರ್ಶನ
ಶ್ರವಣಬೆಳಗೊಳ :ಚಾವುಂಡರಾಯ ಮಂಟಪದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತರೂ ಹಿರಿಯ ಸಾಹಿತಿ ಪ್ರೋ ಚಂದ್ರಶೇಖರರ ಕಂಬಾರರು ರಚಿಸಿದ ಗುಳ್ಳಕಾಯಜ್ಜಿ ನಾಟಕವನ್ನು ಬೆಂಗಳೂರಿನ ನಾಟಕ ಶಾಲಾ ಕಲಾವಿದರು ಅಭಿನಯಿಸಿದರು.
ತನ್ನಲ್ಲಿದ್ದ ಅಹಂನ್ನು ಬಿಟ್ಟು ಗುಳ್ಳಕಾಯಿ ಅಜ್ಜಿಗೆ ನಮಿಸುತ್ತಿರುವ ಚಾವುಂಡರಾಯ. ಕಲಾವಿದರನ್ನು ಸನ್ಮಾನಿಸುತ್ತಿರುವ ಪರಮಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು. ಮಲ್ಲ ಯುದ್ಧದಲ್ಲಿ ಭರತನ್ನು ಸೋಲಿಸಿ ಎತ್ತಿ ಹಿಡಿದ ಬಾಹುಬಲಿ. ಗುಳ್ಳಕಾಯಿ ಅಜ್ಜಿ ಹಾಗೂ ಶಿಲ್ಫಿ ಚರ್ಚಿಸುತ್ತಿರುವುದು.
ನಾಟಕವನ್ನು ಮುನಿಗಳು ಹಾಗೂ ಮುಖ್ಯ ಅತಿಥಿಗಳೊಂದಿಗೆ ವೀಕ್ಷಿಸಿದ ನಂತರ ಪರಮ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವದಿಸುತ್ತಾ ಗುಳ್ಳಕಾಯಜ್ಜಿ ನಾಟಕ ಇತಿಹಾಸ, ಪುರಾಣ ಹಾಗೂ ಶಾಸನಗಳನ್ನೊಳಗೊಂಡಿದ್ದು ತನ್ನದೇ ಆದ ವಿಶೇಷ ಶೈಲಿಯಲ್ಲಿ ಮೂಡಿಬಂದಿದೆ. ನಾಟಕವನ್ನು ನೋಡುತ್ತಿದ್ದರೆ ಕ್ರಿ.ಶಕ. 981 ಮಾ 13 ರಂದು ಬಾಹುಬಲಿಗೆ ನಡೆದ ಅಭಿಷೇಕವನ್ನು ಜ್ಞಾಪಿಸುವಂತಿದೆ. ಈಗಾಗಲೇ ಈ ನಾಟಕ ಹಿಂದಿ ಹಾಗೂ ಇಂಗ್ಲೀಷ್ಗೆ ತರ್ಜಮೆಗೊಂಡಿದ್ದು ಮುಂದಿನವಾರ ದೆಹಲಿಯಲ್ಲಿ ಪ್ರದರ್ಶನಗೊಳ್ಳಲಿದೆ.
ಜಗತ್ತಿಗೆ ತ್ಯಾಗ ಅಹಿಂಸೆಯ ಸಂದೇಶವನ್ನು ಸಾರಿದ ಬಾಹುಬಲಿಯ ಕುರಿತು ಅನೇಕ ಸಾಹಿತಿಗಳು ತಮ್ಮ ಬರವಣಿಗೆಯಲ್ಲಿ ಚಿತ್ರಿಸಿದ್ದಾರೆ. 7 ರಾಜ್ಯದ ಕಲಾವಿದರು ನಾಟಕವನ್ನು ಅಭಿನಯಿಸಿದ್ದು ಬಹಳ ಸಂತಸತಂದಿದೆ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡುತ್ತಾ ಈ ನಾಟಕದಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ಅಹಂ ಇರಬಾರದು ಎಂಬುದು ಈ ನಾಟಕದಿಂದ ಗೊತ್ತಾಗುತ್ತದೆ. ಬಾಹುಬಲಿಯ ನಿರ್ಮಾಣ ಮಾಡಿದಂತಹ ಚಾವುಂಡರಾಯನಿಗೆ ಅಹಂ ಇತ್ತು. ಮೊದಲ ಸಲ ಅಭಿಷೇಕ ಮಾಡುವಾಗ ಬಾಹುಬಲಿಯ ಎದೆ ಭಾಗದಿಂದ ಅಭಿಷೇಕ ಕೆಳಗೆ ಬರುವುದಿಲ್ಲ ಆದರೆ ಗುಳ್ಳಕಾಯಿ ಅಜ್ಜಿ ಅಭಿಷೇಕ ಮಾಡಿದಾಗ ಅಭಿಷೇಕ ಪೂರ್ಣಗೊಳ್ಳುತ್ತದೆ.
ಈ ನಾಟಕದಲ್ಲಿ 7 ಭಾಷೆಯ ಕಲಾವಿದರು ಅಭಿನಯಿಸಿರುವುದು ಸೌಹಾರ್ದತೆಯ ಸಂಕೇತವಾಗಿದ್ದು ದೇಶ ವಿದೇಶಗಳಲ್ಲಿ ಹೆಚ್ಚು ಪ್ರದರ್ಶನಗೊಳ್ಳಲಿ ಎಂದರು.
ನಾಟಕವನ್ನು ಸಿ.ಬಸವಲಿಂಗಯ್ಯ ನಿರ್ದೇಶಿಸಿ ವಸ್ತ್ರ ವಿನ್ಯಾಸವನ್ನು ಮಾಲತೇಶ್ ಬಡಿಗೇರ ನಿರ್ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾ.ದಾಮೋದರ ಶೆಟ್ಟಿ, ಬಿ.ಬಿ.ರಾಜಾರಾಂ. ಕಮಲಾ ಹಂಪನಾ, ಹಂಪ ನಾಗರಾಜಯ್ಯ, ಗುಳ್ಳಕಾಯಿ ಅಜ್ಜಿ ಪಾತ್ರದಲ್ಲಿ ಚಾಮರಾಜ ನಗರದ ಪುಷ್ಪಲತಾ ಅಭಿನಯಿಸಿದ್ದಾರೆ
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು