ಎಲ್ಲಾ ರಂಗಗಳಲ್ಲೂ ದುಡ್ಡಿನ ಮಹಿಮೆ ನಡೆಯುತ್ತಿದೆ: ಜಿ.ಟಿ.ದೇವೇಗೌಡ
ದುಡ್ಡು ಎಂಬುದು ಯಾವ ರಂಗವನ್ನು ಬಿಟ್ಟಿಲ್ಲಾ, ಎಲ್ಲಾ ರಂಗದಲ್ಲೂ ಕಾಂಚಾಣದ್ದೇ ಸದ್ದು. ದುಡ್ಡು ಹೊರತುಪಡಿಸಿಯೂಬಜೀವನ ಇದೆ ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದು ಶಾಸಕ ಜಿ ಟಿ ದೇವೇಗೌಡ ಅಭಿಪ್ರಾಯಪಟ್ಟರು. ಅವರು ಶನಿವಾರ ಸಂಜೆ ಮೈಸೂರಿನ ಇನ್ಸ್ಟಿಟ್ಯೂಟ್ ಇಂಜಿನಿಯರ್ ಸಭಾಂಗಣದಲ್ಲಿ ವಿಸ್ಮಯ ಬುಕ್ ಹೌಸ್ ಮತ್ತು ಅಲ್ಲಮ ರೀಸರ್ಚ್ ಅಂಡ್ ಕಲ್ಚರಲ್ ಫೌಂಡೇಶನ್ ಮೈಸೂರು ರವರು ಹಮ್ಮಿಕೊಂಡಿದ್ದ, ಪತ್ರಕರ್ತ ಮತ್ತು ಲೇಖಕ ವೀರಭದ್ರಪ್ಪ ಬಿಸ್ಲಳ್ಳಿಯವರ ಲೋಕಾಂತದ ಮೊರೆತ, ನೆಲದ ನೆನಹು ಇಂದ್ರ ಜಾಲ ಪುಸ್ತಕಗಳನ್ನು ಲೋಕಾರ್ಪಣೆ
ಗೊಳಿಸಿ ಮಾತನಾಡಿದರು.
ಸಮಾಜವಾದಿ ಹಿನ್ನೆಲೆಯ ವ್ಯಕ್ತಿಗಳಾದ ಮಾಜಿ ಸಿಎಂಗಳಾದ ಜೆ.ಎಚ್.ಪಟೇಲ್, ಎಸ್.ಬಂಗಾರಪ್ಪ, ರೈತ ಮುಖಂಡ ಎಂ.ಡಿ.ನಂಜುಂಡಸ್ವಾಮಿ, ಪ್ರೊ.ಕೆ.ರಾಮದಾಸ್, ಅವರ ವಿಚಾರಧಾರೆಗಳ ಬಗ್ಗೆ ವೀರಭದ್ರಪ್ಪ ಬಿಸ್ಲಳ್ಳಿ ಅಧ್ಯಯನ ಮಾಡಿ ಲೋಕಾಂತದ ಮೊರೆತ ಪುಸ್ತಕದಲ್ಲಿ ತಿಳಿಸಿದ್ದಾರೆ. ಆದರೆ ಎಲ್ಲಾ ಸಮಾಜವಾದಿಗಳನ್ನು ಇಂದು ಕಾಣಲು ಸಾಧ್ಯವಿಲ್ಲ. ಇಂದಿನ ಸಮಾಜ ಮತ್ತು ಯುವ ಪೀಳಿಗೆಗೆ ಅವರುಗಳ ವಿಚಾರಧಾರೆಗಳನ್ನು ತಿಳಿಸಬೇಕು ಎಂದು ಹೇಳಿದರು.
ಸಮಾಜವಾದಿ ಹಿನ್ನೆಲೆಯಿಂದ ಬಂದ ಮಾಜಿ ಸಿಎಂ ಜೆ.ಎಚ್. ಪಟೇಲರಲ್ಲಿ ಇದ್ದ ಚಾಣುಕ್ಯತೆ, ತಂತ್ರಗಾರಿಕೆ, ವಾಗ್ಮಿತ್ವ ಬೇರೆ ಯಾವ ಮುಖ್ಯಮಂತ್ರಿಯಲ್ಲೂ ಇರಲಿಲ್ಲ. ಜೆ.ಎಚ್.ಪಟೇಲರು ಸಿಎಂ ಆದಾಗ ನಾನು ಶಾಸಕನಾಗಿದ್ದೆ. ನನಗೆ ಅವರು ನೀಡಿದ್ದ ಬೆಂಬಲವನ್ನೂ ಮರೆಯಲು ಸಾಧ್ಯವಿಲ್ಲ ಎಂದರು.
ಎಸ್.ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ನೀಡಿದ್ದು, ಬಡವರಿಗೆ ನಿವೇಶನ ಹಂಚಿದ್ದು, ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದರು. ಇಂದು ಅಂತಹ ನಾಯಕರು ವಿರಳ. ಅವರ ಕುರಿತು ಬರೆದಿರುವುದು ಸಂತೋಷ ತಂದಿದೆ ಎಂದರು.
ರೈತ ಮುಖಂಡ ಎಂ.ಡಿ. ನಂಜುಂಡಸ್ವಾಮಿ ಅವರು, ನಾನು ಎಪಿಎಂಸಿ ಅಧ್ಯಕ್ಷ ನಾಗಿದ್ದಾಗ ಮಾರುಕಟ್ಟೆಗೆ ಬರುತ್ತಿದ್ದರು. ತೂಕ ಸರಿ ಇಲ್ಲ ಎಂದು ಹೇಳುತ್ತಿದ್ದರು. ಅಂತಹವರ ಕುರಿತು ಎಷ್ಟು ಬರೆದರೂ ಸಾಲದು. ಪ್ರತಿ ರೈತರು ತಮ್ಮ ಮನೆಯಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಫೋಟೋ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉತ್ತಮೆ ಸೇವೆ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲ ಸಾಧ್ಯ. ಆದರೆ ಇಂದು ಎಲ್ಲಾ ಕ್ಷೇತ್ರದಲ್ಲಿಯೂ ದುಡ್ಡಿನ ಮಹಿಮೆ ಬಂದು, ಸತ್ಯ, ಧರ್ಮ ಮತ್ತು ನಿಷ್ಠೆ ಎಲ್ಲವೂ ಗೌಪ್ಯವಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಮಾತನಾಡಿ, ಗತಕಾಲ, ಪ್ರಸ್ತುತ ಘಟನೆಗಳನ್ನು ವಿಶ್ಲೇಷಣೆ ಮಾಡುವವರೇ ಹೆಚ್ಚಾಗಿದ್ದು, ಮುಂದೆ ಏನಾಗಬೇಕು ಎಂದು ಚಿಂತಿಸುವವರೇ ಇಲ್ಲ. ಹೀಗಾಗಿ ಭವಿಷ್ಯವಿಲ್ಲದೇ ಜನರು ಕಂಗಾಲಾಗುತ್ತಿದ್ದಾರೆ. ಎಲ್ಲ ರಾಜಕಾರಣಿಗಳು ಹಿಂದೆ ಹಾಗಾಗಿತ್ತು, ಹೀಗಾಗಿತ್ತು ಎಂದು ಗತಕಾಲವನ್ನು ಹೇಳುತ್ತಾರೆ. ಕೆಲವೊಮ್ಮೆ ಪ್ರಸ್ತುತ ನಡೆಯುತ್ತಿರುವ ಘಟನೆಗಳನ್ನು ವಿಶ್ಲೇಷಿಸುತ್ತಾರೆ. ಆದರೆ ಮುಂದೆ ಏನಾಗಬೇಕು, ಯಾವ ಅಂಶದತ್ತ ಗಮನ ನೀಡಬೇಕು ಎನ್ನುವ ದೂರದೃಷ್ಠಿ ಕುರಿತು ಮಾತನಾಡುವುದೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ಚರಿತ್ರೆಯನ್ನೇ ಸಂಪೂರ್ಣವಾಗಿ ನೆಚ್ಚಿ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಂದಿನ ಪರಿಸ್ಥಿತಿಗೂ, ಇಂದಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸಗಳು ಇರುತ್ತವೆ. ಆದ್ದರಿಂದ ಚರಿತ್ರೆಯ ಪಾಠವನ್ನು ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು ಮುಂದಿನ ಯೋಜನೆ ರೂಪಿಸಬೇಕು. ಆಗ ಮಾತ್ರ ರಾಜ್ಯ ಅಭಿವೃದ್ಧಿಯತ್ತ ಮುನ್ನಡೆಯಲು ಸಾಧ್ಯ ಎಂದರು.
ಇಂದಿನ ರಾಜಕೀಯ ವ್ಯವಸ್ಥೆಯಿಂದ ಪ್ರಾಮಾಣಿಕವಾಗಿ ನಡೆಯುವವರನ್ನು ಆಯ್ಯೋ ಪಾಪ ಎಂದು ಹೇಳುವ ಮಟ್ಟಕ್ಕೆ ಸಮಾಜ ಅಧೋಗತಿಗೆ ಇಳಿದುಬಿಟ್ಟಿದೆ. ಇದು ನಮ್ಮ ವ್ಯವಸ್ಥೆ ಕುಸಿದು ಬಿದ್ದಿರೋದಕ್ಕೆ ಸಾಕ್ಷಿ. ವಿಧಾನಸೌಧದಲ್ಲಿಯೂ ವೈಯಕ್ತಿಕ ಚರ್ಚೆ ನಡೆಯುತ್ತಿದೆಯೇ ವಿನಾ, ಜನಪರ ಕಾಳಜಿ ಅಧಿವೇಶನದಲ್ಲಿ ಕಾಣುತ್ತಿಲ್ಲ ಎಂದು ಹೇಳಿದರು.
ಸೇವಾ ಮನೋಭಾವನೆ ಇರಬೇಕಾದ ಶಿಕ್ಷಣ, ಆರೋಗ್ಯ, ಪತ್ರಕಾ ರಂಗ, ಕೃಷಿ ಕ್ಷೇತ್ರ ಸೇರಿದಂತೆ ಎಲ್ಲವೂ ಹಣದ ಹಿಂದೆ ಬಿದ್ದಿವೆ. ಆದರೆ ಇಂದು ಕೊರೊನಾವೂ ಒಂದು ಪಾಠವಾಗಿದ್ದು, ಹಣವೇ ಪ್ರಧಾನ ಎನ್ನುವ ಪರಿಸ್ಥಿತಿಯನ್ನು ಹೋಗಲಾಡಿಸಿದೆ. ಮನುಷ್ಯ ಬಾಂಧವ್ಯ, ಆರೋಗ್ಯ ಮುಖ್ಯ. ಬಳಿಕ ಹಣ ಎನ್ನುವುದನ್ನು ತಿಳಿಸಿಕೊಟ್ಟಿದೆ ಎಂದು ವಿಶ್ಲೇಷಿಸಿದರು.
ಮಾಜಿ ಶಾಸಕ ವಾಸು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಮುಜಾಫರ್ ಅಸ್ಸಾದಿ ಪುಸ್ತಕಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಾಲರಾಜ್, ಪ್ರಗತಿಪರ ಕೃಷಿಕ ಚನ್ನಸ್ವಾಮಿ ವಡ್ಡಗೆರೆ, ಪ್ರಕಾಶಕ ಪ್ರಕಾಶ್ ಚಿಕ್ಕಪಾಳ್ಯ, ಪತ್ರಕರ್ತ ವೀರಭದ್ರಪ್ಪ ಬಿಸ್ಲಳ್ಳಿ, ರೈತಮುಖಂಡ ಪಚ್ಚೆ ನಂಜುಂಡಸ್ವಾಮಿ ಇತರರು ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು