ಸಂಪ್ರೀತಿ ರಾಮಾಯಣ ಕೃತಿ ಅನಾವರಣ ಜಾಲತಾಣಗಳ ಬಿಟ್ಟು ಪುಸ್ತಕ ಓದೋಣ:ಡಾ.ಸಿ.ಎನ್ ಆಶ್ವತ್ ನಾರಾಯಣ
ರಾಮಾಯಣವನ್ನು ಪ್ರೀತಿಯಿಂದ ಓದಬೇಕು ಎಂಬ ನಿಟ್ಟಿನಲ್ಲಿ ರಚನೆಯಾದ ಲೇಖಕ ಡಾ.ಡಿ.ಸಿ ರಾಮಚಂದ್ರರವರ ಲೇಖನಿಯಲ್ಲಿ ಮೂಡಿಬಂದ ಮೂರನೇ ಕೃತಿಯಾದ ಸಂಪ್ರೀತಿ ರಾಮಾಯಣ ಪುಸ್ತಕವನ್ನು ಉನ್ನತಶಿಕ್ಷಣ, ಐಟಿ,ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಮಾಗಡಿಯ ಸಮೃದ್ಧಿ ಗ್ರಾಮೀಣಾಭಿವೃದ್ಧಿ ಕಚೇರಿಯ ಸಂಪ್ರೀತಿ ಪ್ರಕಾಶನದ ವತಿಯಿಂದ ನಡೆದ ಸರಳ ಕಾಯಕ್ರಮದಲ್ಲಿ ಪುಸ್ತಕವನ್ನು ಅನಾವರಣಗೊಳಿಸಿ ಆಶಯ ವ್ಯಕ್ತಪಡಿಸಿದ ಸಚಿವರು, ಜಾಲತಾಣಗಳು ಅಬ್ಬರ ಮಾಡುತ್ತಿರುವ ಯುಗದಲ್ಲಿ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಪ್ರತಿಯೊಬ್ಬರು ಬೆಳಸಿಕೊಳ್ಳಿ ಮತ್ತು ನಮ್ಮ ಸಂಸ್ಕೃತಿ ಸಾರುವ ಪುಸ್ತಕಗಳನ್ನು ಬರೆಯಲು ಪ್ರೋತ್ಸಾಹ ನೀಡುವ ಕೆಲಸಮಾಡೋಣ ಜತೆಗೆ ಓದುಗ ವಲಯವನ್ನು ಸೃಷ್ಠಿಸೋಣ ಎಂದರು.
ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಗಡಿ ಶಾಸಕ ಎ.ಮಂಜುನಾಥ್ ರಾಮಾಯಣವನ್ನು ಪ್ರೀತಿಯಿಂದ ಓದಬೇಕೆಂಬ ದೃಷ್ಠಿಯಲ್ಲಿ ರಾಮಾಯಣದ ಕಥೆಗಳನ್ನು ವಿಭಿನ್ನ ಆಯಾಮದಲ್ಲಿ ಚಿತ್ರಿಸಿರುವುದು ಸುಂದರವಾಗಿ ಮೂಡಿಬಂದಿದೆ ರಾಮಾಯಣ ಗ್ರಂಥದ ಮೌಲ್ಯವನ್ನು ಅನುಸರಿಸುವ ದಾರಿಯಲ್ಲಿ ನಡೆಯೋಣ ಎಂದರು.
ಲೇಖಕ ಡಾ.ಡಿ.ಸಿ ರಾಮಚಂದ್ರ ಲೇಖಕರ ನುಡಿಗಳನ್ನಾಡಿ ಮೊಗ್ಗು ಹೂವಾಗುವುದು ಪ್ರೀತಿಯಿಂದ, ಮೋಡ ಮಳೆಸುರಿಸುವುದು ಪ್ರೀತಿಯಿಂದ, ಕಾಳು ಭುವಿಯಲ್ಲಿ ಮೊಳೆಯುವುದು ಪ್ರೀತಿಯಿಂದ ಹೀಗಾಗಿ ಓದನ್ನು ಪ್ರೀತಿಯಿಂದ ಸ್ವೀಕರಿಸಿ ಆಸ್ವಾದಿಸಿದಾಗ ಮಾತ್ರ ಪ್ರತಿಯೊಂದಕ್ಕೂ ಅರ್ಥಸಿಗಲಿದೆ ಎಂದು ಪುಸ್ತಕದ ಬಗೆಗಿನ ಸ್ವಾರಸ್ಯ ವಿಚಾರಗಳನ್ನು ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ: ರಾಕೇಶ್ ಕುಮಾರ್ ಕೆ , ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷರಾದ ಡಾ.ಸಿ. ನಂಜುಂಡಯ್ಯ, ಮಾಗಡಿ ತಹಶಿಲ್ದಾರ್ ಶ್ರೀನಿವಾಸ್ ಪ್ರಸಾದ್, ಇಓ ಪ್ರದೀಪ್ ಕುಮಾರ್, ತಾಲೂಕು ಕಸಾಪ ಅಧ್ಯಕ್ಷರಾದ ಕಲ್ಪನಾ ಶಿವಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮೃದ್ಧಿ ಗ್ರಾಮೀಣಾಭಿವೃಧ್ಧಿ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು