ಅಯೋಧ್ಯಾ ಐತಿಹಾಸಿಕ ತೀರ್ಪು (೯/೧೧) ನೀಡಿದ ಸುಪ್ರೀಂ, ದೇಶಾದ್ಯಂತ ಕಟ್ಟೆಚ್ಚರ. ಶಾಂತಿಯುತ ಸಂಭ್ರಮ

ರಾಮನಗರ (ದೆಹಲಿ): ೧೫೦ ವರ್ಷಗಳಿಗೂ ಹೆಚ್ಚು ಕಾಲ ವಿವಾದವಿದ್ದು ೧೯೮೦ ರ ಬಳಿಕ ದೇಶದ ರಾಜಕೀಯ ಬೆಳವಣಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ೧೯೯೨ ರ ಡಿಸೆಂಬರ್ ನಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹಿಂದೂ ಕಾರ್ಯಕರ್ತರಿಂದ ಬಾಬರಿ ಮಸ್ಜಿದ್ ಧ್ವಂಸ ನಂತರ ನಡೆದ ನಿರಂತರ ವ್ಯಾಜ್ಯಗಳಲ್ಲದೆ ಕಳೆದ ನಲವತ್ತು ದಿನಗಳಿಂದ ಸತತ ವಿಚಾರಣೆ ನಡೆದು ಕಳೆದ ಅಕ್ಟೋಬರ್ ನಲ್ಲಿ ತೀರ್ಪನ್ನು ಕಾಯ್ದಿರಿಸಿ ಐಕ್ಯತೆ ಸಾರುವಂತಹ ಎರಡೂ ಸಮುದಾಯಕ್ಕೆ ಒಪ್ಪಿಗೆಯಾಗುವಂತಹ ಪುರಾಣ, ಇತಿಹಾಸ ಎರಡನ್ನೂ ಗಣನೆಗೆ ತೆಗೆದುಕೊಂಡು ಈರ್ವರೂ ಸಂತಸಕೊಳ್ಳುವಂತಹ ಐತಿಹಾಸಿಕ ತೀರ್ಪನ್ನು ಇಂದು ಬೆಳಿಗ್ಗೆ ೧೦:೩೦ ಕ್ಕೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಗಳಾದ ರಂಜನ್ ಗೊಗೊಯಿ ಮತ್ತು ತಂಡದ ಐವರು ನ್ಯಾಯಾಧೀಶರು ನೀಡಿದರು.
ಇದೇ ತಿಂಗಳ ೧೭ ನೇ ತಾರೀಖಿನಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯಿ ರವರ ಈ ಐತಿಹಾಸಿಕ ತೀರ್ಪು ಸರ್ವರಿಗೂ ಸಂತಸ ತಂದಿದ್ದು ಎಲ್ಲಾ ರೀತಿಯಿಂದಲೂ ಸಂಭ್ರಮಾಚರಣೆಗಳಿಗೆ ನಿಷೇಧ ಹೇರಿ ಕಟ್ಟೆಚ್ಚರ ವಹಿಸಿರುವುದರಿಂದ ಸಾರ್ವಜನಿಕರು ಸಹ ಅಂತಹ ಯಾವುದೇ ಕಾರ್ಯಕ್ಕೂ ಕೈ ಹಾಕದೆ ಇರುವುದು ಜನಸಾಮಾನ್ಯರ ಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ.
೨.೭೭ ಎಕರೆ ಸಂಪೂರ್ಣ ಜಾಗವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಬೇಕು, ಸುನ್ನಿ ವಕ್ಫ್ ಮಂಡಳಿಗೆ ಪರ್ಯಾಯ ೦೫ ಎಕರೆ ಜಾಗ ನೀಡಬೇಕು, ರಾಮಲಲ್ಲಾ ರವರಿಗೆ ಮಂದಿರ ಜಾಗ ನೀಡಬೇಕು, ರಾಮಮಂದಿರ ನಿರ್ಮಾಣ ಸರ್ಕಾರದ ಹೊಣೆ, ೦೩ ತಿಂಗಳೊಳಗೆ ದೇವಾಲಯದ ಸಮಿತಿ ರಚನೆ ಮಾಡಬೇಕು ಎಂದು ಐತಿಹಾಸಿಕ ತೀರ್ಪು ನೀಡಲಾಗಿದೆ.
*ಬೆಂಗಳೂರು ವರದಿ*
ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಬಹುಭಾಗದಲ್ಲಿ ಪೋಲಿಸರನ್ನು ನಿಯೋಜಿಸಿದ್ದು ಯಾವ ಸಮುದಾಯದವರು ಪರ ವಿರೋಧ ಮತ್ತು ಸಂಭ್ರಮಾಚರಣೆಯಲ್ಲಿ ತೊಡಗದಂತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಜೃಂಭಣೆ ಮತ್ತು ವಿಕೃತಿ ಮೆರೆಯದಂತೆ ಎಚ್ಚರಿಕೆ ನೀಡಲಾಗಿದ್ದು ರೌಡಿಗಳನ್ನು ವಶಕ್ಕೆ ಪಡೆಯಲಾಗಿದೆ.
*ರಾಮನಗರ ವರದಿ*
ನಾಳೆ (೧೦/೧೧/ಭಾನುವಾರ) ಈದ್ ಮಿಲಾದ್ ಹಬ್ಬ ಆಚರಣೆ ಹಾಗೂ ಇಂದಿನ ತೀರ್ಪು ಇದ್ದಿದ್ದರಿಂದ ಸೂಕ್ಷ್ಮ ಪ್ರದೇಶವೆಂದೇ ಗುರುತಿಸಿಕೊಂಡಿರುವ ರಾಮನಗರ ಜಿಲ್ಲೆಯಲ್ಲಿ ಹೆಚ್ಚು ಪೋಲಿಸರನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಿರುವುದಲ್ಲದೆ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದಿನಿಂದ ಸೋಮವಾರ ದ ತನಕ ಮದ್ಯದ ಅಂಗಡಿಗಳನ್ನು ತೆರೆಯದಂತೆ ಆದೇಶಿಸಲಾಗಿದೆ.
*ಚನ್ನಪಟ್ಟಣ ದ ವರದಿ*
ನಗರದ ಷೇರು ಹೋಟೆಲ್, ಸಾತನೂರು ವೃತ್ತ, ಮದಿನಾ ಚೌಕ ಸೇರಿದಂತೆ ಹಲವಾರು ಕಡೆ ಮೀಸಲು ಪಡೆ ಪೋಲಿಸರು ಮತ್ತು ರಾಜ್ಯ ಪೋಲೀಸರನ್ನು ನಿಯೋಜಿಸಿದ್ದು ಕಟ್ಟೆಚ್ಚರ ವಹಿಸಿದ್ದಾರೆ. ತೀರ್ಪಿನ ನಂತರವೂ ಎಲ್ಲೂ ಸಹ ಪರವಿರೋಧ ವಾಗಲಿ, ಸಂಭ್ರಮಾಚರಣೆಗಳಾಗಲಿ ನಡೆದ ಉದಾಹರಣೆ ಗಳು ವರದಿಯಾಗಿಲ್ಲ.
ಹಿಂದೂ ಮುಸ್ಲಿಮರು ಸಾಮರಸ್ಯದಿಂದ ಇರುವುದನ್ನು ಇದು ತೋರಿಸುತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು