ಮೇ ಹದಿನೇಳ ರವರೆಗೆ ಲಾಕ್ಡೌನ್ ಮುಂದುವರಿಕೆ, ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ:ಬೆಂಗಳೂರು:ಮೇ/೦೧/೨೦/ಶುಕ್ರವಾರ. ಕೇಂದ್ರ ಸರ್ಕಾರವು ಹಂತಹಂತವಾಗಿ ಸ್ವಲ್ಪ ಸ್ವಲ್ಪ ದಿನಗಳೇ ಲಾಕ್ ಡೌನ್ ಮಾಡುತ್ತಿದ್ದು ಮೇ ೦೩ ತನಕ ಇದ್ದ ಲಾಕ್ ಡೌನ್ ನ್ನು ಮೇ ಹದಿನೇಳನೇ ತಾರೀಖಿನವರೆಗೂ ಕೊರೋನಾ ವೈರಸ್ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಏನಿದೆ ಮಾರ್ಗಸೂಚಿಯಲ್ಲಿ?
ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ.
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ.
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ.
ಅಗತ್ಯ ವಸ್ತು ಪೂರೈಕೆಯ ಗೂಡ್ಸ್ ರೈಲು, ವಾಹನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು.
ಅಗತ್ಯ ವಸ್ತು ಖರೀದಿಗೆ ಮಾತ್ರ ಒಬ್ಬರೇ ರಸ್ತೆಗೆ ಬರಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ. ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ.
ಸಂಜೆ ಏಳರಿಂದ ರಿಂದ ಮುಂಜಾನೆ ಏಳು ಗಂಟಯವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ.
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ. ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ. (ರಾಜ್ಯ ಸರ್ಕಾರವು ಷರತ್ತು ಬದ್ದ ಅವಕಾಶ ನೀಡುವುದಾಗಿ ಘೋಷಿಸಿದೆ.)
ಆರೆಂಜ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?
ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು, ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಡ್ರೈವರ್ ಸೇರಿ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು. ಬಸ್ ಸಂಚಾರ ಇರುವುದಿಲ್ಲ.
ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?
ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.೫೦ ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶವಿದ್ದು, ಟ್ಯಾಕ್ಸಿ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಡ್ರೈವರ್ ಸೇರಿ ಇಬ್ಬರಿಗೆ ಮಾತ್ರ ಅವಕಾಶ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು